<p><strong>ರಾಮನಗರ: </strong>ನೈಸ್ ರಸ್ತೆ ವಿರೋಧಿ ಹೋರಾಟಗಾರ ಸಿದ್ದಲಿಂಗಪ್ರಭು ಕೊಲೆ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> ಸಿದ್ದಲಿಂಗಪ್ರಭುವಿನ ರಕ್ತ ಸಂಬಂಧಿ ಚನ್ನವೀರಯ್ಯನಪಾಳ್ಯದ ಪ್ರಕಾಶ್ ಮತ್ತು ಆತನ ಸಹಚರರಾದ ಶಾಂತಕುಮಾರ್, ಹನುಮಯ್ಯ, ರಾಜೇಶ್ ಮತ್ತು ಜನಾರ್ದನ್ ಬಂಧಿತ ಆರೋಪಿಗಳಾಗಿದ್ದಾರೆ.<br /> <br /> ಪ್ರಭು ಮತ್ತು ಪ್ರಕಾಶ್ ಅವರೊಡನೆ ಮೂರು- ನಾಲ್ಕು ವರ್ಷಗಳಿಂದ ದ್ವೇಷ ಮತ್ತು ವೈಶಮ್ಯ ಮನೆ ಮಾಡಿತ್ತು. ಅದು ವಿಕೋಪಕ್ಕೆ ತಿರುಗಿದ ಪರಿಣಾಮ ಪ್ರಕಾಶ್ ತನ್ನ ಸಹಚರರೊಡಗೂಡಿ ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. <br /> <br /> ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭುವಿನ ಹತ್ತಿರದ ಸಂಬಂಧಿಯೊಬ್ಬರು ನೈಸ್ ಕಂಪೆನಿಯ ಮಾಲೀಕರ ಅಶೋಕ ಖೇಣಿ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಅವರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. <br /> <br /> ಅಷ್ಟೇ ಅಲ್ಲದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಮುಖಂಡ ಪಂಚಲಿಂಗಯ್ಯ ಅವರ ನೇತೃತ್ವದಲ್ಲಿ ಸ್ಥಳೀಯ ಜನತೆ ನೈಸ್ ರಸ್ತೆ ಬಂದ್ ಮಾಡಿ ಧರಣಿ ನಡೆಸಿದ್ದರು. ಕೊಲೆಗಾರರನ್ನು ಕೂಡಲೇ ಬಂಧಿಸಿ ಶಿಕ್ಷಿಸುವಂತೆ ಆಗ್ರಹಿಸಿದ್ದರು.<br /> <br /> ಆದರೆ ಈ ಪ್ರಕರಣದ ಪ್ರಮುಖ ಆರೋಪಿಗಳು ಸಿದ್ದಲಿಂಗಪ್ರಭುವಿನ ಸಂಬಂಧಿಗಳೇ ಆಗಿದ್ದು, ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನು ಶುಕ್ರವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> <strong>ಆರೋಪಿಗಳು ಸಿಕ್ಕಿದ್ದು ಹೇಗೆ:</strong> ಕೊಲೆಯಾದ ಸಿದ್ದಲಿಂಗಪ್ರಭು ಅವರು ಕೆಂಗೇರಿ ಬಳಿಯ ಶಿರ್ಕೆ ಅಪಾರ್ಟ್ಮೆಂಟ್ ಹತ್ತಿರದ ಬಾರ್ ವೊಂದರಲ್ಲಿ ನಿತ್ಯ ಮದ್ಯಪಾನ ಮಾಡುತ್ತಿದ್ದರು ಎಂಬು ವಿಷಯ ತಿಳಿದ ಪೊಲೀಸರು ಆ ಬಾರ್ಗೆ ಹೋಗಿ ವಿಚಾರಣೆ ನಡೆಸಿದ್ದಾರೆ. <br /> <br /> ಕೊಲೆಯಾದ ದಿನ ಪ್ರಭು ಬಾರ್ಗೆ ಬಂದಿದ್ದನ್ನು ಕ್ಯಾಷಿಯರ್ ಮತ್ತು ಸಪ್ಲೇಯರ್ ಖಚಿತಪಡಿಸಿದ್ದಾರೆ. ಅಲ್ಲದೆ ಆತನ ಸಂಬಂಧಿ ಪ್ರಕಾಶ್ ಮತ್ತು ಸಹಚರರು ಪ್ರಭು ಅವರನ್ನು ಕಾರಿನಲ್ಲಿ ಕರೆದೊಯ್ದರು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಈ ಜಾಡನ್ನು ಹಿಡಿದು ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದರು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ನೈಸ್ ರಸ್ತೆ ವಿರೋಧಿ ಹೋರಾಟಗಾರ ಸಿದ್ದಲಿಂಗಪ್ರಭು ಕೊಲೆ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.<br /> <br /> ಸಿದ್ದಲಿಂಗಪ್ರಭುವಿನ ರಕ್ತ ಸಂಬಂಧಿ ಚನ್ನವೀರಯ್ಯನಪಾಳ್ಯದ ಪ್ರಕಾಶ್ ಮತ್ತು ಆತನ ಸಹಚರರಾದ ಶಾಂತಕುಮಾರ್, ಹನುಮಯ್ಯ, ರಾಜೇಶ್ ಮತ್ತು ಜನಾರ್ದನ್ ಬಂಧಿತ ಆರೋಪಿಗಳಾಗಿದ್ದಾರೆ.<br /> <br /> ಪ್ರಭು ಮತ್ತು ಪ್ರಕಾಶ್ ಅವರೊಡನೆ ಮೂರು- ನಾಲ್ಕು ವರ್ಷಗಳಿಂದ ದ್ವೇಷ ಮತ್ತು ವೈಶಮ್ಯ ಮನೆ ಮಾಡಿತ್ತು. ಅದು ವಿಕೋಪಕ್ಕೆ ತಿರುಗಿದ ಪರಿಣಾಮ ಪ್ರಕಾಶ್ ತನ್ನ ಸಹಚರರೊಡಗೂಡಿ ಈ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. <br /> <br /> ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭುವಿನ ಹತ್ತಿರದ ಸಂಬಂಧಿಯೊಬ್ಬರು ನೈಸ್ ಕಂಪೆನಿಯ ಮಾಲೀಕರ ಅಶೋಕ ಖೇಣಿ ಮತ್ತು ಬಿಜೆಪಿ ಮುಖಂಡ ರುದ್ರೇಶ್ ಅವರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. <br /> <br /> ಅಷ್ಟೇ ಅಲ್ಲದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಮುಖಂಡ ಪಂಚಲಿಂಗಯ್ಯ ಅವರ ನೇತೃತ್ವದಲ್ಲಿ ಸ್ಥಳೀಯ ಜನತೆ ನೈಸ್ ರಸ್ತೆ ಬಂದ್ ಮಾಡಿ ಧರಣಿ ನಡೆಸಿದ್ದರು. ಕೊಲೆಗಾರರನ್ನು ಕೂಡಲೇ ಬಂಧಿಸಿ ಶಿಕ್ಷಿಸುವಂತೆ ಆಗ್ರಹಿಸಿದ್ದರು.<br /> <br /> ಆದರೆ ಈ ಪ್ರಕರಣದ ಪ್ರಮುಖ ಆರೋಪಿಗಳು ಸಿದ್ದಲಿಂಗಪ್ರಭುವಿನ ಸಂಬಂಧಿಗಳೇ ಆಗಿದ್ದು, ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನು ಶುಕ್ರವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> <strong>ಆರೋಪಿಗಳು ಸಿಕ್ಕಿದ್ದು ಹೇಗೆ:</strong> ಕೊಲೆಯಾದ ಸಿದ್ದಲಿಂಗಪ್ರಭು ಅವರು ಕೆಂಗೇರಿ ಬಳಿಯ ಶಿರ್ಕೆ ಅಪಾರ್ಟ್ಮೆಂಟ್ ಹತ್ತಿರದ ಬಾರ್ ವೊಂದರಲ್ಲಿ ನಿತ್ಯ ಮದ್ಯಪಾನ ಮಾಡುತ್ತಿದ್ದರು ಎಂಬು ವಿಷಯ ತಿಳಿದ ಪೊಲೀಸರು ಆ ಬಾರ್ಗೆ ಹೋಗಿ ವಿಚಾರಣೆ ನಡೆಸಿದ್ದಾರೆ. <br /> <br /> ಕೊಲೆಯಾದ ದಿನ ಪ್ರಭು ಬಾರ್ಗೆ ಬಂದಿದ್ದನ್ನು ಕ್ಯಾಷಿಯರ್ ಮತ್ತು ಸಪ್ಲೇಯರ್ ಖಚಿತಪಡಿಸಿದ್ದಾರೆ. ಅಲ್ಲದೆ ಆತನ ಸಂಬಂಧಿ ಪ್ರಕಾಶ್ ಮತ್ತು ಸಹಚರರು ಪ್ರಭು ಅವರನ್ನು ಕಾರಿನಲ್ಲಿ ಕರೆದೊಯ್ದರು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಈ ಜಾಡನ್ನು ಹಿಡಿದು ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದರು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>