<p><strong>ನವದೆಹಲಿ (ಪಿಟಿಐ</strong>): ಸಿಬಿಐ ಮೇಲಿರುವ ಹಿಡಿತವನ್ನು ಕಳೆದುಕೊಳ್ಳಲು ಸಿದ್ಧವಿಲ್ಲದ ಕೇಂದ್ರ ಸರ್ಕಾರ ಸಿಬಿಐಗೆ ಸ್ವಾಯತ್ತತೆ ನೀಡಲು ಹೊಸ ಮಸೂದೆ ತರುವ ಯತ್ನದಿಂದ ಹಿಂದೆ ಸರಿದಿದೆ ಎನ್ನಲಾಗಿದೆ.<br /> <br /> ಹೊಸ ಮಸೂದೆ ಜಾರಿಗೆ ತರುವ ಮೂಲಕ ಸಿಬಿಐ ಅನ್ನು ಹೊರಗಿನವರ ಪ್ರಭಾವದಿಂದ ಮುಕ್ತಗೊಳಿಸಲು ಕೇಂದ್ರದ ಸಚಿವರ ಸಮಿತಿಯೊಂದನ್ನು ರಚಿಸಲಾಗಿದ್ದು ಈಗಾಗಲೇ ಈ ಸಂಬಂಧ ಸಮಿತಿ ಎರಡು ಸಭೆ ನಡೆಸಿದೆ. ಆದರೆ ಸಿಬಿಐ ಮೇಲಿರುವ ಹಿಡಿತ ಕಳೆದುಕೊಳ್ಳಲು ಸಿದ್ಧವಿಲ್ಲದ ಕೇಂದ್ರ ಈ ಕುರಿತು ಯಾವುದೇ ಉತ್ಸಾಹ ತೋರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ (ಡಿಎಸ್ಪಿಇ) ಅಡಿ ಸದ್ಯ ಸಿಬಿಐ ಕಾರ್ಯನಿರ್ವಹಿಸುತ್ತಿದ್ದು ಸ್ವಾಯತ್ತತೆಗಾಗಿ ಹೊಸ ಕಾಯಿದೆ ಜಾರಿಗೆ ತರುವ ಬದಲಿಗೆ ಪ್ರಸ್ತುತ ಇರುವ ಕಾಯಿದೆಯಲ್ಲಿ ಬದಲಾವಣೆ ತರಲು ಸಚಿವರ ಸಮಿತಿ ಒಲವು ವ್ಯಕ್ತಪಡಿಸಿದೆ ಎನ್ನಲಾಗಿದೆ.<br /> <br /> ಸದ್ಯ ಕೇಂದ್ರ ಸರ್ಕಾರ ಸೂಚಿಸುವ ಅಪರಾಧ ಪ್ರಕರಣಗಳ ಕುರಿತು ಮಾತ್ರ ಸಿಬಿಐ ತನಿಖೆ ಕೈಗೊಳ್ಳಬಹುದು. ಆದರೆ ಕಾಯಿದೆಯಲ್ಲಿ ಬದಲಾವಣೆ ತಂದಲ್ಲಿ ವಿವಿಧ ರಾಜ್ಯಗಳ ಗಡಿಗುಂಟ ಇರುವ ಪ್ರಕರಣಗಳನ್ನು ರಾಜ್ಯಗಳ ಅನುಮತಿ ಪಡೆಯದೆಯೇ ತನಿಖೆ ನಡೆಸುವಅಧಿಕಾರವನ್ನು ಸಿಬಿಐ ಹೊಂದುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ಸಿಬಿಐ ಮೇಲಿರುವ ಹಿಡಿತವನ್ನು ಕಳೆದುಕೊಳ್ಳಲು ಸಿದ್ಧವಿಲ್ಲದ ಕೇಂದ್ರ ಸರ್ಕಾರ ಸಿಬಿಐಗೆ ಸ್ವಾಯತ್ತತೆ ನೀಡಲು ಹೊಸ ಮಸೂದೆ ತರುವ ಯತ್ನದಿಂದ ಹಿಂದೆ ಸರಿದಿದೆ ಎನ್ನಲಾಗಿದೆ.<br /> <br /> ಹೊಸ ಮಸೂದೆ ಜಾರಿಗೆ ತರುವ ಮೂಲಕ ಸಿಬಿಐ ಅನ್ನು ಹೊರಗಿನವರ ಪ್ರಭಾವದಿಂದ ಮುಕ್ತಗೊಳಿಸಲು ಕೇಂದ್ರದ ಸಚಿವರ ಸಮಿತಿಯೊಂದನ್ನು ರಚಿಸಲಾಗಿದ್ದು ಈಗಾಗಲೇ ಈ ಸಂಬಂಧ ಸಮಿತಿ ಎರಡು ಸಭೆ ನಡೆಸಿದೆ. ಆದರೆ ಸಿಬಿಐ ಮೇಲಿರುವ ಹಿಡಿತ ಕಳೆದುಕೊಳ್ಳಲು ಸಿದ್ಧವಿಲ್ಲದ ಕೇಂದ್ರ ಈ ಕುರಿತು ಯಾವುದೇ ಉತ್ಸಾಹ ತೋರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ (ಡಿಎಸ್ಪಿಇ) ಅಡಿ ಸದ್ಯ ಸಿಬಿಐ ಕಾರ್ಯನಿರ್ವಹಿಸುತ್ತಿದ್ದು ಸ್ವಾಯತ್ತತೆಗಾಗಿ ಹೊಸ ಕಾಯಿದೆ ಜಾರಿಗೆ ತರುವ ಬದಲಿಗೆ ಪ್ರಸ್ತುತ ಇರುವ ಕಾಯಿದೆಯಲ್ಲಿ ಬದಲಾವಣೆ ತರಲು ಸಚಿವರ ಸಮಿತಿ ಒಲವು ವ್ಯಕ್ತಪಡಿಸಿದೆ ಎನ್ನಲಾಗಿದೆ.<br /> <br /> ಸದ್ಯ ಕೇಂದ್ರ ಸರ್ಕಾರ ಸೂಚಿಸುವ ಅಪರಾಧ ಪ್ರಕರಣಗಳ ಕುರಿತು ಮಾತ್ರ ಸಿಬಿಐ ತನಿಖೆ ಕೈಗೊಳ್ಳಬಹುದು. ಆದರೆ ಕಾಯಿದೆಯಲ್ಲಿ ಬದಲಾವಣೆ ತಂದಲ್ಲಿ ವಿವಿಧ ರಾಜ್ಯಗಳ ಗಡಿಗುಂಟ ಇರುವ ಪ್ರಕರಣಗಳನ್ನು ರಾಜ್ಯಗಳ ಅನುಮತಿ ಪಡೆಯದೆಯೇ ತನಿಖೆ ನಡೆಸುವಅಧಿಕಾರವನ್ನು ಸಿಬಿಐ ಹೊಂದುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>