<p>ಬಳ್ಳಾರಿ: ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಆಪ್ತರಾಗಿರುವ ಸಂಡೂರಿನ ಎಸ್ಟಿಡಿ ಮಂಜುನಾಥ ಹಾಗೂ ಹೊಸಪೇಟೆಯ ಸ್ವಸ್ತಿಕ್ ನಾಗರಾಜ್ ಅವರನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ನಗರದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. <br /> <br /> ಓಬಳಾಪುರಂ ಮೈನಿಂಗ್ ಕಂಪೆನಿ (ಒಎಂಸಿ) ಮತ್ತು ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ)ಗಳ ಅಕ್ರಮ ಗಣಿ ವ್ಯವಹಾರಕ್ಕೆ ಸಹಕಾರ ನೀಡಿರುವ ಈ ಇಬ್ಬರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದ್ದರಿಂದ, ನಗರದಲ್ಲಿರುವ ಪೊಲೀಸ್ ಜಿಮಖಾನಾ ವಸತಿಗೃಹದಲ್ಲಿ ತಂಗಿರುವ ಸಿಬಿಐ ಅಧಿಕಾರಿಗಳನ್ನು ಈ ಇಬ್ಬರು ಭೇಟಿ ಮಾಡಿ, ವಿಚಾರಣೆ ಎದುರಿಸಿದರು.<br /> <br /> ಕೆಲವು ದಿನಗಳ ಹಿಂದೆ ಸಿಬಿಐ ಸಿಬ್ಬಂದಿ ಸಂಡೂರು ಮತ್ತು ಹೊಸಪೇಟೆಯಲ್ಲಿರುವ ಈ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿ, ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಹೈದರಾಬಾದ್ನಲ್ಲಿರುವ ಸಿಬಿಐ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ನೋಟಿಸ್ ಪಡೆದು ಹೈದರಾಬಾದ್ನಲ್ಲೂ ಇವರು ವಿಚಾರಣೆ ಎದುರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಆಪ್ತರಾಗಿರುವ ಸಂಡೂರಿನ ಎಸ್ಟಿಡಿ ಮಂಜುನಾಥ ಹಾಗೂ ಹೊಸಪೇಟೆಯ ಸ್ವಸ್ತಿಕ್ ನಾಗರಾಜ್ ಅವರನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ನಗರದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. <br /> <br /> ಓಬಳಾಪುರಂ ಮೈನಿಂಗ್ ಕಂಪೆನಿ (ಒಎಂಸಿ) ಮತ್ತು ಅಸೋಸಿಯೇಟೆಡ್ ಮೈನಿಂಗ್ ಕಂಪೆನಿ (ಎಎಂಸಿ)ಗಳ ಅಕ್ರಮ ಗಣಿ ವ್ಯವಹಾರಕ್ಕೆ ಸಹಕಾರ ನೀಡಿರುವ ಈ ಇಬ್ಬರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದ್ದರಿಂದ, ನಗರದಲ್ಲಿರುವ ಪೊಲೀಸ್ ಜಿಮಖಾನಾ ವಸತಿಗೃಹದಲ್ಲಿ ತಂಗಿರುವ ಸಿಬಿಐ ಅಧಿಕಾರಿಗಳನ್ನು ಈ ಇಬ್ಬರು ಭೇಟಿ ಮಾಡಿ, ವಿಚಾರಣೆ ಎದುರಿಸಿದರು.<br /> <br /> ಕೆಲವು ದಿನಗಳ ಹಿಂದೆ ಸಿಬಿಐ ಸಿಬ್ಬಂದಿ ಸಂಡೂರು ಮತ್ತು ಹೊಸಪೇಟೆಯಲ್ಲಿರುವ ಈ ಇಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿ, ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಹೈದರಾಬಾದ್ನಲ್ಲಿರುವ ಸಿಬಿಐ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ನೋಟಿಸ್ ಪಡೆದು ಹೈದರಾಬಾದ್ನಲ್ಲೂ ಇವರು ವಿಚಾರಣೆ ಎದುರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>