<p>ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಕುಟುಕು ಕಾರ್ಯಾಚರಣೆ ನಡೆಸಲು ತೆರಳಿದ್ದ ನ್ಯೂಸ್ 9 ಆಂಗ್ಲ ಸುದ್ದಿವಾಹಿನಿಯ ವರದಿಗಾರರನ್ನು ಬಂಧಿಸಿದ ಮತ್ತು ಇಡೀ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ‘ನ್ಯಾಯಕ್ಕಾಗಿ ನಾವು’ ಸಂಘಟನೆಯು ಆಗ್ರಹಿಸಿದೆ.<br /> <br /> ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಇಂದೂಧರ ಹೊನ್ನಾಪುರ, ‘ಪ್ರಕರಣದಲ್ಲಿ ಸರ್ಕಾರವು ಬೇಜವಾಬ್ದಾರಿಯಾಗಿ ವರ್ತಿಸದೆ, ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸಬೇಕು. ಇಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅಥವಾ ನ್ಯೂಸ್ 9 ಆಂಗ್ಲ ಸುದ್ದಿವಾಹಿನಿಯ ತಪ್ಪಿದೆಯೇ ಎಂಬುದರ ಕುರಿತು ಸಮಗ್ರ ತನಿಖೆಯಾಗಬೇಕು’ ಎಂದರು.<br /> <br /> ‘ನ್ಯೂಸ್ 9 ಸುದ್ದಿವಾಹಿನಿಯ ಮುಖ್ಯಸ್ಥ ಮಹೇಶ್ ಮಿಶ್ರಾ ಅವರು ತಲೆಮರೆಸಿಕೊಳ್ಳುವ ಅಗತ್ಯವಿಲ್ಲ. ಅವರು ನ್ಯಾಯವಾಗಿ, ಸಮಾಜದ ಒಳಿತಿಗಾಗಿ ಕುಟುಕು ಕಾರ್ಯಾಚರಣೆ , ಅದರ ಕುರಿತು ಸಮರ್ಥನೆಯನ್ನು ನೀಡಲಿ. ಪ್ರಕರಣವನ್ನು ಧೈರ್ಯದಿಂದ ಎದುರಿಸಲಿ’ ಎಂದರು.<br /> <br /> ಸಂಘಟನೆಯ ಕಾರ್ಯಾಧ್ಯಕ್ಷ ಅಗ್ನಿ ಶ್ರೀಧರ್ ಮಾತನಾಡಿ, ‘ನ್ಯೂಸ್ 9 ಸುದ್ದಿವಾಹಿನಿಯ ಮುಖ್ಯಸ್ಥ ತಲೆಮರೆಸಿಕೊಂಡಿರುವುದು ಅನೇಕ ಊಹಾ ಪೋಹಗಳಿಗೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್ ಅವರಲ್ಲಿ ₨ 5 ಕೋಟಿ ಹಣವನ್ನು ಕೇಳಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದರಿಂದ, ಒಟ್ಟಾರೆ ಪ್ರಕರಣದ ಸತ್ಯಾಂಶವು ಜನತೆಯ ಮುಂದೆ ಬರಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಕುಟುಕು ಕಾರ್ಯಾಚರಣೆ ನಡೆಸಲು ತೆರಳಿದ್ದ ನ್ಯೂಸ್ 9 ಆಂಗ್ಲ ಸುದ್ದಿವಾಹಿನಿಯ ವರದಿಗಾರರನ್ನು ಬಂಧಿಸಿದ ಮತ್ತು ಇಡೀ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ‘ನ್ಯಾಯಕ್ಕಾಗಿ ನಾವು’ ಸಂಘಟನೆಯು ಆಗ್ರಹಿಸಿದೆ.<br /> <br /> ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಇಂದೂಧರ ಹೊನ್ನಾಪುರ, ‘ಪ್ರಕರಣದಲ್ಲಿ ಸರ್ಕಾರವು ಬೇಜವಾಬ್ದಾರಿಯಾಗಿ ವರ್ತಿಸದೆ, ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸಬೇಕು. ಇಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅಥವಾ ನ್ಯೂಸ್ 9 ಆಂಗ್ಲ ಸುದ್ದಿವಾಹಿನಿಯ ತಪ್ಪಿದೆಯೇ ಎಂಬುದರ ಕುರಿತು ಸಮಗ್ರ ತನಿಖೆಯಾಗಬೇಕು’ ಎಂದರು.<br /> <br /> ‘ನ್ಯೂಸ್ 9 ಸುದ್ದಿವಾಹಿನಿಯ ಮುಖ್ಯಸ್ಥ ಮಹೇಶ್ ಮಿಶ್ರಾ ಅವರು ತಲೆಮರೆಸಿಕೊಳ್ಳುವ ಅಗತ್ಯವಿಲ್ಲ. ಅವರು ನ್ಯಾಯವಾಗಿ, ಸಮಾಜದ ಒಳಿತಿಗಾಗಿ ಕುಟುಕು ಕಾರ್ಯಾಚರಣೆ , ಅದರ ಕುರಿತು ಸಮರ್ಥನೆಯನ್ನು ನೀಡಲಿ. ಪ್ರಕರಣವನ್ನು ಧೈರ್ಯದಿಂದ ಎದುರಿಸಲಿ’ ಎಂದರು.<br /> <br /> ಸಂಘಟನೆಯ ಕಾರ್ಯಾಧ್ಯಕ್ಷ ಅಗ್ನಿ ಶ್ರೀಧರ್ ಮಾತನಾಡಿ, ‘ನ್ಯೂಸ್ 9 ಸುದ್ದಿವಾಹಿನಿಯ ಮುಖ್ಯಸ್ಥ ತಲೆಮರೆಸಿಕೊಂಡಿರುವುದು ಅನೇಕ ಊಹಾ ಪೋಹಗಳಿಗೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್ ಅವರಲ್ಲಿ ₨ 5 ಕೋಟಿ ಹಣವನ್ನು ಕೇಳಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದರಿಂದ, ಒಟ್ಟಾರೆ ಪ್ರಕರಣದ ಸತ್ಯಾಂಶವು ಜನತೆಯ ಮುಂದೆ ಬರಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>