<p><strong>ಹುಬ್ಬಳ್ಳಿ:</strong> ಬೆಂಗಳೂರು ಕೋರ್ಟ್ ಆವರಣದಲ್ಲಿ ಮಾಧ್ಯಮ ಹಾಗೂ ಪೊಲೀಸ್ ಸಿಬ್ಬಂದಿಯ ಮೇಲೆ ವಕೀಲರು ನಡೆಸಿದ ಹಲ್ಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಭಾನುವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, `ನ್ಯಾಯಾಂಗ ತನಿಖೆ ನಡೆಸುವುದಾಗಿ ಸರ್ಕಾರ ಹೇಳಿರುವುದು ಪಲಾಯನವಾದ~ ಎಂದು ಹೇಳಿದರು. <br /> <br /> ಈ ಹಿಂದೆ ಹಾವೇರಿ ಗೋಲಿಬಾರ್ ಹಾಗೂ ಚರ್ಚ್ ದಾಳಿ ಪ್ರಕರಣಗಳ ನ್ಯಾಯಾಂಗ ತನಿಖೆಯ ಫಲಿತಾಂಶ ಏನು ಎಂಬುದು ಇಡೀ ರಾಜ್ಯದ ಜನಕ್ಕೆ ಗೊತ್ತಿದೆ. ಗೋಲಿಬಾರ್ನಲ್ಲಿ ಸತ್ತವರು ರೈತರೇ ಅಲ್ಲ ಎಂದು ವರದಿ ನೀಡಲಾಯಿತು~ಎಂದರು.<br /> <br /> ನ್ಯಾಯಾಂಗ ತನಿಖೆ ತಡ ಆಗುವುದರಿಂದ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಪಾಯ ಇರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.<br /> <br /> ಗುಪ್ತಚರ ಇಲಾಖೆಯ ವೈಫಲ್ಯವೇ ಘಟನೆಗೆ ಕಾರಣ. ಆರಂಭದಲ್ಲಿಯೇ ಸ್ಪಂದಿಸಿ ಗಲಭೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರಲಿಲ್ಲ ಎಂದು ಅವರು ಹೇಳಿದರು.<br /> <br /> <strong>ಆರ್ಥಿಕ ಆಶಿಸ್ತು:</strong> ಬಿಜೆಪಿ ಸರ್ಕಾರದಲ್ಲಿ ಜಗಳ ತಾರಕಕ್ಕೇರಿದೆ. ಸಂಪುಟದ ಸಹೊದ್ಯೋಗಿಗಳೇ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ರಾಜೀನಾಮೆ ಕೇಳುತ್ತಿದ್ದಾರೆ ಎಂದು ಟೀಕಿಸಿದರು. <br /> <br /> ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಆರ್ಥಿಕ ಶಿಸ್ತು ಸರಿಪಡಿಸಲಾಗದಷ್ಟು ಹಾದಿ ತಪ್ಪಿದೆ ಇದರಿಂದ ಜನಪರ ಬಜೆಟ್ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಘೋಷಣೆಗೆ ಅಷ್ಟೇ ಬಜೆಟ್ ಸೀಮಿತಗೊಳ್ಳಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಬೆಂಗಳೂರು ಕೋರ್ಟ್ ಆವರಣದಲ್ಲಿ ಮಾಧ್ಯಮ ಹಾಗೂ ಪೊಲೀಸ್ ಸಿಬ್ಬಂದಿಯ ಮೇಲೆ ವಕೀಲರು ನಡೆಸಿದ ಹಲ್ಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಭಾನುವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, `ನ್ಯಾಯಾಂಗ ತನಿಖೆ ನಡೆಸುವುದಾಗಿ ಸರ್ಕಾರ ಹೇಳಿರುವುದು ಪಲಾಯನವಾದ~ ಎಂದು ಹೇಳಿದರು. <br /> <br /> ಈ ಹಿಂದೆ ಹಾವೇರಿ ಗೋಲಿಬಾರ್ ಹಾಗೂ ಚರ್ಚ್ ದಾಳಿ ಪ್ರಕರಣಗಳ ನ್ಯಾಯಾಂಗ ತನಿಖೆಯ ಫಲಿತಾಂಶ ಏನು ಎಂಬುದು ಇಡೀ ರಾಜ್ಯದ ಜನಕ್ಕೆ ಗೊತ್ತಿದೆ. ಗೋಲಿಬಾರ್ನಲ್ಲಿ ಸತ್ತವರು ರೈತರೇ ಅಲ್ಲ ಎಂದು ವರದಿ ನೀಡಲಾಯಿತು~ಎಂದರು.<br /> <br /> ನ್ಯಾಯಾಂಗ ತನಿಖೆ ತಡ ಆಗುವುದರಿಂದ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಪಾಯ ಇರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.<br /> <br /> ಗುಪ್ತಚರ ಇಲಾಖೆಯ ವೈಫಲ್ಯವೇ ಘಟನೆಗೆ ಕಾರಣ. ಆರಂಭದಲ್ಲಿಯೇ ಸ್ಪಂದಿಸಿ ಗಲಭೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರಲಿಲ್ಲ ಎಂದು ಅವರು ಹೇಳಿದರು.<br /> <br /> <strong>ಆರ್ಥಿಕ ಆಶಿಸ್ತು:</strong> ಬಿಜೆಪಿ ಸರ್ಕಾರದಲ್ಲಿ ಜಗಳ ತಾರಕಕ್ಕೇರಿದೆ. ಸಂಪುಟದ ಸಹೊದ್ಯೋಗಿಗಳೇ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ರಾಜೀನಾಮೆ ಕೇಳುತ್ತಿದ್ದಾರೆ ಎಂದು ಟೀಕಿಸಿದರು. <br /> <br /> ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಆರ್ಥಿಕ ಶಿಸ್ತು ಸರಿಪಡಿಸಲಾಗದಷ್ಟು ಹಾದಿ ತಪ್ಪಿದೆ ಇದರಿಂದ ಜನಪರ ಬಜೆಟ್ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಘೋಷಣೆಗೆ ಅಷ್ಟೇ ಬಜೆಟ್ ಸೀಮಿತಗೊಳ್ಳಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>