<p><strong>ನವದೆಹಲಿ: </strong>ಅಕ್ರಮ ಗಣಿಗಾರಿಕೆ ಹಗರಣದಲ್ಲಿ `ದೇಣಿಗೆ~ ಪಡೆದ ಆರೋಪಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ `ಕೇಂದ್ರ ಉನ್ನತಾಧಿಕಾರ ಸಮಿತಿ~ (ಸಿಇಸಿ)ಗೆ ಮನವಿ ಮಾಡಿದೆ.<br /> <br /> ಯಡಿಯೂರಪ್ಪ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಸಲ್ಲಿಸಿದ್ದ `ಪ್ರಥಮ ಮಾಹಿತಿ ವರದಿ~ (ಎಫ್ಐಆರ್) ಅನ್ನು ರಾಜ್ಯ ಹೈಕೋರ್ಟ್ ಬುಧವಾರ ರದ್ದುಪಡಿಸಿದ್ದು, ಇದಕ್ಕೆ ಕೆಲ ದಿನಗಳ ಮೊದಲು ರಾಜ್ಯ ಸರ್ಕಾರ ಸಿಇಸಿ ಮುಂದೆ ಸಲ್ಲಿಸಿರುವ ಹೆಚ್ಚುವರಿ ಪ್ರಮಾಣ ಪತ್ರದಲ್ಲಿ, ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದೆ.<br /> <br /> ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಧಾರವಾಡದ `ಸಮಾಜ ಪರಿವರ್ತನಾ ಸಮುದಾಯ~ (ಎಸ್ಪಿಎಸ್) ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರು `ಜಿಂದಾಲ್ ಸ್ಟೀಲ್ ವರ್ಕ್ಸ್~ (ಜೆಎಸ್ಡಬ್ಲ್ಯು) ಮತ್ತು `ಸೌತ್ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲ್ಯುಎಂಸಿ) ಜತೆ ನಡೆಸಿದ್ದಾರೆನ್ನಲಾದ ಅಕ್ರಮ ವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೇಳಿದೆ.<br /> <br /> ಎಸ್ಪಿಎಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. 2007ರಲ್ಲಿ `ಜೆಎಸ್ಡಡಬ್ಲ್ಯು~, `ಎಸ್ಡಬ್ಲ್ಯುಎಂಸಿ~ ಮತ್ತು `ವಿಎಂಪಿಎಲ್~ಗೆ ಗಣಿ ಗುತ್ತಿಗೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿದಾಗ ಯಡಿಯೂರಪ್ಪ ಮುಖ್ಯಮಂತ್ರಿಯೂ ಅಲ್ಲ. <br /> <br /> ಗಣಿ ಸಚಿವರೂ ಆಗಿರಲಿಲ್ಲ. ಗುತ್ತಿಗೆಗೆ ಶಿಫಾರಸು ಮಾಡಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಪಾತ್ರವೇನೂ ಇಲ್ಲ. ಅಷ್ಟಕ್ಕೂ ರಾಜ್ಯ ಸರ್ಕಾರ ಮಾಡಿರುವುದು ಶಿಫಾರಸು ಮಾತ್ರ. ತೀರ್ಮಾನ ಏನಿದ್ದರೂ ಕೇಂದ್ರದ್ದು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾರಿಗೂ ಅನುಕೂಲ ಮಾಡಿಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.<br /> <br /> ಸಮಾಜ ಪರಿವರ್ತನಾ ಸಮುದಾಯದ ಆರೋಪ ಕುರಿತು ಪರಿಶೀಲಿಸಿ ಸಿಬಿಐ ತನಿಖೆ ಅಗತ್ಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸಿಇಸಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸಿಇಸಿ ಸದ್ಯದಲ್ಲೇ ವರದಿ ಸಲ್ಲಿಸಲಿದೆ.<br /> <br /> ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಅರಣ್ಯ ಪೀಠ ವರದಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಕ್ರಮ ಗಣಿಗಾರಿಕೆ ಹಗರಣದಲ್ಲಿ `ದೇಣಿಗೆ~ ಪಡೆದ ಆರೋಪಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ರಾಜ್ಯ ಸರ್ಕಾರ `ಕೇಂದ್ರ ಉನ್ನತಾಧಿಕಾರ ಸಮಿತಿ~ (ಸಿಇಸಿ)ಗೆ ಮನವಿ ಮಾಡಿದೆ.<br /> <br /> ಯಡಿಯೂರಪ್ಪ ವಿರುದ್ಧ ಅಕ್ರಮ ಗಣಿಗಾರಿಕೆ ಸಂಬಂಧ ಸಲ್ಲಿಸಿದ್ದ `ಪ್ರಥಮ ಮಾಹಿತಿ ವರದಿ~ (ಎಫ್ಐಆರ್) ಅನ್ನು ರಾಜ್ಯ ಹೈಕೋರ್ಟ್ ಬುಧವಾರ ರದ್ದುಪಡಿಸಿದ್ದು, ಇದಕ್ಕೆ ಕೆಲ ದಿನಗಳ ಮೊದಲು ರಾಜ್ಯ ಸರ್ಕಾರ ಸಿಇಸಿ ಮುಂದೆ ಸಲ್ಲಿಸಿರುವ ಹೆಚ್ಚುವರಿ ಪ್ರಮಾಣ ಪತ್ರದಲ್ಲಿ, ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದೆ.<br /> <br /> ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಧಾರವಾಡದ `ಸಮಾಜ ಪರಿವರ್ತನಾ ಸಮುದಾಯ~ (ಎಸ್ಪಿಎಸ್) ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರು `ಜಿಂದಾಲ್ ಸ್ಟೀಲ್ ವರ್ಕ್ಸ್~ (ಜೆಎಸ್ಡಬ್ಲ್ಯು) ಮತ್ತು `ಸೌತ್ವೆಸ್ಟ್ ಮೈನಿಂಗ್ ಕಂಪೆನಿ~ (ಎಸ್ಡಬ್ಲ್ಯುಎಂಸಿ) ಜತೆ ನಡೆಸಿದ್ದಾರೆನ್ನಲಾದ ಅಕ್ರಮ ವ್ಯವಹಾರ ಕುರಿತು ಸಿಬಿಐ ತನಿಖೆ ನಡೆಸುವಂತೆ ಕೇಳಿದೆ.<br /> <br /> ಎಸ್ಪಿಎಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. 2007ರಲ್ಲಿ `ಜೆಎಸ್ಡಡಬ್ಲ್ಯು~, `ಎಸ್ಡಬ್ಲ್ಯುಎಂಸಿ~ ಮತ್ತು `ವಿಎಂಪಿಎಲ್~ಗೆ ಗಣಿ ಗುತ್ತಿಗೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿದಾಗ ಯಡಿಯೂರಪ್ಪ ಮುಖ್ಯಮಂತ್ರಿಯೂ ಅಲ್ಲ. <br /> <br /> ಗಣಿ ಸಚಿವರೂ ಆಗಿರಲಿಲ್ಲ. ಗುತ್ತಿಗೆಗೆ ಶಿಫಾರಸು ಮಾಡಿರುವುದರ ಹಿಂದೆ ಮಾಜಿ ಮುಖ್ಯಮಂತ್ರಿ ಪಾತ್ರವೇನೂ ಇಲ್ಲ. ಅಷ್ಟಕ್ಕೂ ರಾಜ್ಯ ಸರ್ಕಾರ ಮಾಡಿರುವುದು ಶಿಫಾರಸು ಮಾತ್ರ. ತೀರ್ಮಾನ ಏನಿದ್ದರೂ ಕೇಂದ್ರದ್ದು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾರಿಗೂ ಅನುಕೂಲ ಮಾಡಿಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ.<br /> <br /> ಸಮಾಜ ಪರಿವರ್ತನಾ ಸಮುದಾಯದ ಆರೋಪ ಕುರಿತು ಪರಿಶೀಲಿಸಿ ಸಿಬಿಐ ತನಿಖೆ ಅಗತ್ಯವಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸಿಇಸಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸಿಇಸಿ ಸದ್ಯದಲ್ಲೇ ವರದಿ ಸಲ್ಲಿಸಲಿದೆ.<br /> <br /> ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ನೇತೃತ್ವದ ಅರಣ್ಯ ಪೀಠ ವರದಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>