<p><strong>ಬೆಂಗಳೂರು:</strong> ರಾಜ್ಯದಲ್ಲಿ 1987ರಿಂದ 95ರ ಅವಧಿಯಲ್ಲಿ ಪ್ರಾರಂಭಗೊಂಡಿರುವ ಅನುದಾನ ರಹಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ಜೂನ್ ಒಂದರಿಂದ ಸಂಬಳ ನೀಡುವ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. <br /> ಅನುದಾನಕ್ಕೆ ಆಗ್ರಹಿಸಿ ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿ ಈಚೆಗೆ ಐದು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿ ಸಭೆ ಕರೆದು ಚರ್ಚಿಸಿದ ಯಡಿಯೂರಪ್ಪ ಸಂಬಳ ನೀಡಲು ಸಮ್ಮತಿಸಿದ್ದಾರೆ.<br /> <br /> ಅನುದಾನ ನೀಡುವುದಕ್ಕೆ ಸದ್ಯ ಅಡ್ಡಿಯಾಗಿರುವ ಆರ್ಥಿಕ ನಿರ್ಬಂಧವನ್ನು ತೆಗೆದು ಹಾಕುವಂತೆ ಹಣಕಾಸು ಇಲಾಖೆಗೆ ಸೂಚಿಸಲಾಗುವುದು. ನಂತರ ಅರ್ಹ ಶಾಲಾ- ಕಾಲೇಜುಗಳನ್ನು ನಿಯಮಾನುಸಾರ ಅನುದಾನ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು ಎಂದು ಹೊರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಎಕ್ಸ್ಗ್ರೇಶಿಯಾ ಸೌಲಭ್ಯವನ್ನು ಪ್ರಾಚಾರ್ಯರು, ಮುಖ್ಯೋಪಾಧ್ಯಾಯರಿಗೆ ವಿಸ್ತರಿಸುವುದು, ಅನುದಾನರಹಿತ ಶಾಲಾ- ಕಾಲೇಜುಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕನಿಷ್ಠ ವೇತನ ಕಡ್ಡಾಯಗೊಳಿಸುವುದು, ಬೋಧಕೇತರ ಸಿಬ್ಬಂದಿಯಲ್ಲಿ ಒಬ್ಬ ದ್ವಿತೀಯ ದರ್ಜೆ ಸಹಾಯಕ ಹಾಗೂ ಅಟೆಂಡರ್ ನೇಮಕ, ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ.ವಿ.ಎಸ್.ಆಚಾರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಶಿಕ್ಷಕರ ಕ್ಷೇತ್ರಗಳ ಶಾಸಕರು, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ 1987ರಿಂದ 95ರ ಅವಧಿಯಲ್ಲಿ ಪ್ರಾರಂಭಗೊಂಡಿರುವ ಅನುದಾನ ರಹಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ಜೂನ್ ಒಂದರಿಂದ ಸಂಬಳ ನೀಡುವ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. <br /> ಅನುದಾನಕ್ಕೆ ಆಗ್ರಹಿಸಿ ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿ ಈಚೆಗೆ ಐದು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿ ಸಭೆ ಕರೆದು ಚರ್ಚಿಸಿದ ಯಡಿಯೂರಪ್ಪ ಸಂಬಳ ನೀಡಲು ಸಮ್ಮತಿಸಿದ್ದಾರೆ.<br /> <br /> ಅನುದಾನ ನೀಡುವುದಕ್ಕೆ ಸದ್ಯ ಅಡ್ಡಿಯಾಗಿರುವ ಆರ್ಥಿಕ ನಿರ್ಬಂಧವನ್ನು ತೆಗೆದು ಹಾಕುವಂತೆ ಹಣಕಾಸು ಇಲಾಖೆಗೆ ಸೂಚಿಸಲಾಗುವುದು. ನಂತರ ಅರ್ಹ ಶಾಲಾ- ಕಾಲೇಜುಗಳನ್ನು ನಿಯಮಾನುಸಾರ ಅನುದಾನ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು ಎಂದು ಹೊರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಎಕ್ಸ್ಗ್ರೇಶಿಯಾ ಸೌಲಭ್ಯವನ್ನು ಪ್ರಾಚಾರ್ಯರು, ಮುಖ್ಯೋಪಾಧ್ಯಾಯರಿಗೆ ವಿಸ್ತರಿಸುವುದು, ಅನುದಾನರಹಿತ ಶಾಲಾ- ಕಾಲೇಜುಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕನಿಷ್ಠ ವೇತನ ಕಡ್ಡಾಯಗೊಳಿಸುವುದು, ಬೋಧಕೇತರ ಸಿಬ್ಬಂದಿಯಲ್ಲಿ ಒಬ್ಬ ದ್ವಿತೀಯ ದರ್ಜೆ ಸಹಾಯಕ ಹಾಗೂ ಅಟೆಂಡರ್ ನೇಮಕ, ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ.ವಿ.ಎಸ್.ಆಚಾರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಶಿಕ್ಷಕರ ಕ್ಷೇತ್ರಗಳ ಶಾಸಕರು, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>