<p>ಚಿತ್ರದುರ್ಗ: ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಮಠಾಧೀಶರ ಆಶೀರ್ವಾದ ಪಡೆಯಲು ಮಠ ಮಾನ್ಯಗಳಿಗೆ ಎಡತಾಕುವುದು ಸಾಮಾನ್ಯ. ಆಶೀರ್ವಾದ ಪಡೆಯಲು ಬಂದು ಸ್ವಾಮೀಜಿ ಜತೆ ಫೋಟೊ ಕ್ಲಿಕ್ಕಿಸಿಕೊಂಡು ಅದನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡು ‘ಸ್ವಾಮೀಜಿ ನಮ್ಮ ಪರ ಇದ್ದಾರೆ’ ಎಂದು ಬಿಂಬಿಸಿಕೊಳ್ಳುವುದುರಾಜಕಾರಣಿಗಳ ತಂತ್ರ.<br /> <br /> ರಾಜಕಾರಣಿಗಳ ಇಂತಹ ತಂತ್ರಕ್ಕೆ ಸಿರಿಗೆರೆ ಮಠದ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನಿರ್ಬಂಧ ಹೇರಿದ್ದಾರೆ.<br /> ‘ಯಾವ ಪಕ್ಷದ ಅಭ್ಯರ್ಥಿಗಳೇ ಆಗಲಿ. ಸಾಮಾನ್ಯ ಭಕ್ತರಂತೆ ಬಂದು ಆಶೀರ್ವಾದ ಪಡೆಯಲು ನನ್ನ ಅಭ್ಯಂತರವಿಲ್ಲ. ಆದರೆ, ಈ ಸಂದರ್ಭದಲ್ಲಿ ಫೋಟೊ ತೆಗೆಯುವುದು ಅಥವಾ ತೆಗೆದ ಫೋಟೊಗಳನ್ನು ಪತ್ರಿಕೆಗಳಲ್ಲಿ ಹಾಕಿಸುವುದು, ಸಾಮಾಜಿಕ ಜಾಲ ತಾಣಗಳಲ್ಲಿ ಬಿತ್ತರಿಸುವುದು, ಸ್ವಾಮೀಜಿ ನಮ್ಮ ಪರ ಇದ್ದಾರೆ ಎನ್ನುವ ರೀತಿಯಲ್ಲಿ ದುರುಪಯೋಗ ಪಡಿಸಿಕೊಳ್ಳುವುದನ್ನು ಮಾಡಬಾರದು’ ಎಂದು ಚುನಾವಣೆಯ ಸಂದರ್ಭದಲ್ಲಿ ಮಠಕ್ಕೆ ಬರುವ ರಾಜಕಾರಣಿಗಳಿಗೆ ಸ್ವಾಮೀಜಿ ತಾಕೀತು ಮಾಡಿದ್ದಾರೆ.<br /> <br /> ಹೀಗೆ ಮಠದ ಒಳಗೆ ನೀತಿ ಸಂಹಿತೆ ಜಾರಿ ಮಾಡುವ ಮೂಲಕ ಸಿರಿಗೆರೆ ಸ್ವಾಮೀಜಿ ರಾಜಕಾರಣಿಗಳಿಗೆ ಹೊಸ ನೀತಿ ಪಾಠ ಬೋಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಮಠಾಧೀಶರ ಆಶೀರ್ವಾದ ಪಡೆಯಲು ಮಠ ಮಾನ್ಯಗಳಿಗೆ ಎಡತಾಕುವುದು ಸಾಮಾನ್ಯ. ಆಶೀರ್ವಾದ ಪಡೆಯಲು ಬಂದು ಸ್ವಾಮೀಜಿ ಜತೆ ಫೋಟೊ ಕ್ಲಿಕ್ಕಿಸಿಕೊಂಡು ಅದನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡು ‘ಸ್ವಾಮೀಜಿ ನಮ್ಮ ಪರ ಇದ್ದಾರೆ’ ಎಂದು ಬಿಂಬಿಸಿಕೊಳ್ಳುವುದುರಾಜಕಾರಣಿಗಳ ತಂತ್ರ.<br /> <br /> ರಾಜಕಾರಣಿಗಳ ಇಂತಹ ತಂತ್ರಕ್ಕೆ ಸಿರಿಗೆರೆ ಮಠದ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನಿರ್ಬಂಧ ಹೇರಿದ್ದಾರೆ.<br /> ‘ಯಾವ ಪಕ್ಷದ ಅಭ್ಯರ್ಥಿಗಳೇ ಆಗಲಿ. ಸಾಮಾನ್ಯ ಭಕ್ತರಂತೆ ಬಂದು ಆಶೀರ್ವಾದ ಪಡೆಯಲು ನನ್ನ ಅಭ್ಯಂತರವಿಲ್ಲ. ಆದರೆ, ಈ ಸಂದರ್ಭದಲ್ಲಿ ಫೋಟೊ ತೆಗೆಯುವುದು ಅಥವಾ ತೆಗೆದ ಫೋಟೊಗಳನ್ನು ಪತ್ರಿಕೆಗಳಲ್ಲಿ ಹಾಕಿಸುವುದು, ಸಾಮಾಜಿಕ ಜಾಲ ತಾಣಗಳಲ್ಲಿ ಬಿತ್ತರಿಸುವುದು, ಸ್ವಾಮೀಜಿ ನಮ್ಮ ಪರ ಇದ್ದಾರೆ ಎನ್ನುವ ರೀತಿಯಲ್ಲಿ ದುರುಪಯೋಗ ಪಡಿಸಿಕೊಳ್ಳುವುದನ್ನು ಮಾಡಬಾರದು’ ಎಂದು ಚುನಾವಣೆಯ ಸಂದರ್ಭದಲ್ಲಿ ಮಠಕ್ಕೆ ಬರುವ ರಾಜಕಾರಣಿಗಳಿಗೆ ಸ್ವಾಮೀಜಿ ತಾಕೀತು ಮಾಡಿದ್ದಾರೆ.<br /> <br /> ಹೀಗೆ ಮಠದ ಒಳಗೆ ನೀತಿ ಸಂಹಿತೆ ಜಾರಿ ಮಾಡುವ ಮೂಲಕ ಸಿರಿಗೆರೆ ಸ್ವಾಮೀಜಿ ರಾಜಕಾರಣಿಗಳಿಗೆ ಹೊಸ ನೀತಿ ಪಾಠ ಬೋಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>