<p><strong>ಗೌರಿಬಿದನೂರು</strong>: ಸುಮಾರು ಹದಿನೈದು ದಿನಗಳಿಂದ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆ ತಲೆದೋರಿದ್ದು, ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಸಿಲಿಂಡರ್ ವಿತರಣೆ ಮಾಡುವ ಏಜೆನ್ಸಿ ಮಳಿಗೆಯೊಂದರ ಎದುರು ಕೆಲ ಕಾಲ ಪ್ರತಿಭಟನೆ ಕೈಗೊಂಡು ನಂತರ ರಸ್ತೆ ತಡೆ ನಡೆಸಿದರು.ಪ್ರತಿಭಟನೆ ನೇತೃತ್ವ ವಹಿಸಿದ್ದ ಪುರಸಭೆ ಸದಸ್ಯ ನಾಗಾಸ್ವಾಮಿ ಮಾತನಾಡಿ, ~ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ತುಂಬಾ ತೊಂದರೆಯಾಗಿದೆ. ಅನಿವಾರ್ಯವಾಗಿ ಹೋಟೆಲ್ಗಳಲ್ಲಿ ತಿಂಡಿ ಮತ್ತು ಊಟ ಮಾಡಬೇಕಾದ ಪರಿಸ್ಥಿತಿ ಬಂದಿದೆ~ ಎಂದರು.<br /> <br /> ಇತ್ತೀಚೆಗೆ ತಾಲ್ಲೂಕಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ, ಸಿಲಿಂಡರ್ ಪೂರೈಕೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೇ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಉಪತಹಶೀಲ್ದಾರ್ ಚನ್ನಬಸಪ್ಪ ಮನವಿಪತ್ರ ಸ್ವೀಕರಿಸಿ, ಸಿಲಿಂಡರ್ ವಿತರಣೆಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಮಾಜ ಸೇವಕಿ ಪ್ರಮೀಳಾ ರಾಧಾಕೃಷ್ಣ, ಕರ್ನಾಟಕ ರಕ್ಷಣಾ ವೇದಿಕೆಯ ಅಶ್ವತ್ಥನಾರಾಯಣ, ಹನುಮಂತರಾಯಪ್ಪ, ಶಿವಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಸುಮಾರು ಹದಿನೈದು ದಿನಗಳಿಂದ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆ ತಲೆದೋರಿದ್ದು, ಕೂಡಲೇ ಬಗೆಹರಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಸಿಲಿಂಡರ್ ವಿತರಣೆ ಮಾಡುವ ಏಜೆನ್ಸಿ ಮಳಿಗೆಯೊಂದರ ಎದುರು ಕೆಲ ಕಾಲ ಪ್ರತಿಭಟನೆ ಕೈಗೊಂಡು ನಂತರ ರಸ್ತೆ ತಡೆ ನಡೆಸಿದರು.ಪ್ರತಿಭಟನೆ ನೇತೃತ್ವ ವಹಿಸಿದ್ದ ಪುರಸಭೆ ಸದಸ್ಯ ನಾಗಾಸ್ವಾಮಿ ಮಾತನಾಡಿ, ~ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ತುಂಬಾ ತೊಂದರೆಯಾಗಿದೆ. ಅನಿವಾರ್ಯವಾಗಿ ಹೋಟೆಲ್ಗಳಲ್ಲಿ ತಿಂಡಿ ಮತ್ತು ಊಟ ಮಾಡಬೇಕಾದ ಪರಿಸ್ಥಿತಿ ಬಂದಿದೆ~ ಎಂದರು.<br /> <br /> ಇತ್ತೀಚೆಗೆ ತಾಲ್ಲೂಕಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ, ಸಿಲಿಂಡರ್ ಪೂರೈಕೆಗೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೇ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಉಪತಹಶೀಲ್ದಾರ್ ಚನ್ನಬಸಪ್ಪ ಮನವಿಪತ್ರ ಸ್ವೀಕರಿಸಿ, ಸಿಲಿಂಡರ್ ವಿತರಣೆಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಮಾಜ ಸೇವಕಿ ಪ್ರಮೀಳಾ ರಾಧಾಕೃಷ್ಣ, ಕರ್ನಾಟಕ ರಕ್ಷಣಾ ವೇದಿಕೆಯ ಅಶ್ವತ್ಥನಾರಾಯಣ, ಹನುಮಂತರಾಯಪ್ಪ, ಶಿವಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>