<p><strong>ರಾಂಚಿ (ಐಎಎನ್ಎಸ್): </strong>ಇಲ್ಲಿ ನಡೆದ 34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಳಸಿದ ಸೀಟಿ (ವಿಷಲ್)ಗಳ ಮಾರುಕಟ್ಟೆ ದರ ತಲಾ ರೂ 90 ಇದ್ದರೂ ಅದನ್ನು ತಲಾ ರೂ 450 ಕ್ಕೆ ಖರೀದಿಸಿರುವುದು ಸೇರಿದಂತೆ ಕ್ರೀಡಾಕೂಟಕ್ಕೆ ಬಳಸಿದ ಸಲಕರಣೆಗಳನ್ನು ಹೆಚ್ಚಿನ ದರಕ್ಕೆ ಖರೀದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಜಾಗೃತ ದಳವು ಮಂಗಳವಾರ ಸಂಘಟನಾ ಸಮಿತಿಯ ಹಿರಿಯ ಅಧಿಕಾರಿಗಳ ವಿಚಾರಣೆ ನಡೆಸಿತು.</p>.<p>ರಾಷ್ಟ್ರೀಯ ಕ್ರೀಡಾಕೂಟದ ಸಂಘಟನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಹಶ್ಮಿ ಅವರನ್ನು ಜಾಗೃತ ದಳದ ಕಚೇರಿಯಲ್ಲಿ ನಾಲ್ಕು ತಾಸಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಲಾಯಿತು.</p>.<p>ವಿಚಾರಣೆಯ ವಿವರಗಳನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಕಳೆದ ವಾರ ಜಾಗೃತ ದಳವು ಸಂಘಟನಾ ಸಮಿತಿಯ ಕಚೇರಿ ಮತ್ತು ಜಾರ್ಖಂಡ್ ಒಲಿಂಪಿಕ್ ಅಸೋಸಿಯೇಶನ್ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಹಶ್ಮಿ ಮತ್ತು ಅಸೋಸಿಯೇಶನ್ನ ಖಜಾಂಚಿ ಮಧುಕಾಂತ್ ಪಾಠಕ್ ಅವರ ಮನೆಗಳ ಮೇಲೆ ದಾಳಿ ನಡೆಸಿತ್ತು.</p>.<p>ಪಾಠಕ್ ಮತ್ತು ಸಂಘಟನಾ ಸಮಿತಿಯ ಇತರ ಅಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಗುರಿ ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಐಎಎನ್ಎಸ್): </strong>ಇಲ್ಲಿ ನಡೆದ 34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಳಸಿದ ಸೀಟಿ (ವಿಷಲ್)ಗಳ ಮಾರುಕಟ್ಟೆ ದರ ತಲಾ ರೂ 90 ಇದ್ದರೂ ಅದನ್ನು ತಲಾ ರೂ 450 ಕ್ಕೆ ಖರೀದಿಸಿರುವುದು ಸೇರಿದಂತೆ ಕ್ರೀಡಾಕೂಟಕ್ಕೆ ಬಳಸಿದ ಸಲಕರಣೆಗಳನ್ನು ಹೆಚ್ಚಿನ ದರಕ್ಕೆ ಖರೀದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಜಾಗೃತ ದಳವು ಮಂಗಳವಾರ ಸಂಘಟನಾ ಸಮಿತಿಯ ಹಿರಿಯ ಅಧಿಕಾರಿಗಳ ವಿಚಾರಣೆ ನಡೆಸಿತು.</p>.<p>ರಾಷ್ಟ್ರೀಯ ಕ್ರೀಡಾಕೂಟದ ಸಂಘಟನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಹಶ್ಮಿ ಅವರನ್ನು ಜಾಗೃತ ದಳದ ಕಚೇರಿಯಲ್ಲಿ ನಾಲ್ಕು ತಾಸಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಲಾಯಿತು.</p>.<p>ವಿಚಾರಣೆಯ ವಿವರಗಳನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಕಳೆದ ವಾರ ಜಾಗೃತ ದಳವು ಸಂಘಟನಾ ಸಮಿತಿಯ ಕಚೇರಿ ಮತ್ತು ಜಾರ್ಖಂಡ್ ಒಲಿಂಪಿಕ್ ಅಸೋಸಿಯೇಶನ್ನ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಹಶ್ಮಿ ಮತ್ತು ಅಸೋಸಿಯೇಶನ್ನ ಖಜಾಂಚಿ ಮಧುಕಾಂತ್ ಪಾಠಕ್ ಅವರ ಮನೆಗಳ ಮೇಲೆ ದಾಳಿ ನಡೆಸಿತ್ತು.</p>.<p>ಪಾಠಕ್ ಮತ್ತು ಸಂಘಟನಾ ಸಮಿತಿಯ ಇತರ ಅಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಗುರಿ ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>