<div> ಹೈದರಾಬಾದ್ (ಪಿಟಿಐ): ಪಕ್ಷದ ಕಾರ್ಯಕರ್ತರು ಮತ್ತು ಮತದಾರರನ್ನು ಭೇಟಿ ಮಾಡಲು ಕೇಂದ್ರ ಸಚಿವ ಚಿರಂಜೀವಿ ಮತ್ತು ಸೀಮಾಂಧ್ರ ಭಾಗದ ಕಾಂಗ್ರೆಸ್ ನಾಯಕರು ಕರಾವಳಿ ಆಂಧ್ರ ಮತ್ತು ರಾಯಲಸೀಮಾ ಪ್ರದೇಶದಲ್ಲಿ ‘ಬಸ್ ಯಾತ್ರೆ’ ಕೈಗೊಳ್ಳಲಿದ್ದಾರೆ. <br /> <div> ಆಂಧ್ರವಿಭಜನೆಗೆ ಕೈಗೊಂಡ ಏಕಪಕ್ಷೀಯ ನಿರ್ಧಾರದಿಂದ ಸಿಟ್ಟಿಗೆದ್ದಿರುವ ಜನರ ಕೋಪ ಶಮನ ಮಾಡಲು ಕೈಗೊಂಡಿರುವ ಯಾತ್ರೆ ಇದಾಗಿದೆ. <br /> </div><div> ‘ಶ್ರೀಕಾಕುಳಂದಿಂದ ಅನಂತಪುರದವರೆಗೆ ಇದೇ 21ರಿಂದ 27ರ ವರೆಗೆ ಪಕ್ಷದ ಕಾರ್ಯಕರ್ತರ ಸಭೆ ಸಂಘಟಿಸಲಾಗಿದೆ. ಆ ಸಭೆಯಲ್ಲಿ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲಾಗುವುದು’ ಎಂದು ಪಕ್ಷ ಹೇಳಿದೆ.<br /> </div><div> ‘ ಆಂಧ್ರಪ್ರದೇಶ ವಿಭಜನೆ ನಿರ್ಧಾರದ ಉದ್ದೇಶ ಮತ್ತು ವಿಭಜನೆಯಿಂದ ಯಾವ ಪ್ರಯೋಜನ ಆಗಲಿದೆ ಎನ್ನುವುದನ್ನು ನಾವು </div><div> ಜನರಿಗೆ ತಿಳಿಸುತ್ತೇವೆ’ ಎಂದು ಸೀಮಾಂಧ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಚಿರಂಜೀವಿ ಸುದ್ದಿಗಾರರಿಗೆ ತಿಳಿಸಿದರು.<br /> </div><div> ‘ಸೀಮಾಂಧ್ರದ ಪ್ರತಿ ಜಿಲ್ಲೆಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಿ ಈಗಿನ ಬೆಳವಣಿಗೆ ಮತ್ತು ಮುಂದೆ ಕೈಗೊಳ್ಳುವ ನಿರ್ಧಾರ ಅವರಿಗೆ ತಿಳಿಸಲು ಈ ಬಸ್ ಯಾತ್ರೆ ಕೈಗೊಳ್ಳಲಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ </div><div> ಅನಂ ರಾಮನಾರಾಯಣ ರೆಡ್ಡಿ ಹೇಳಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> ಹೈದರಾಬಾದ್ (ಪಿಟಿಐ): ಪಕ್ಷದ ಕಾರ್ಯಕರ್ತರು ಮತ್ತು ಮತದಾರರನ್ನು ಭೇಟಿ ಮಾಡಲು ಕೇಂದ್ರ ಸಚಿವ ಚಿರಂಜೀವಿ ಮತ್ತು ಸೀಮಾಂಧ್ರ ಭಾಗದ ಕಾಂಗ್ರೆಸ್ ನಾಯಕರು ಕರಾವಳಿ ಆಂಧ್ರ ಮತ್ತು ರಾಯಲಸೀಮಾ ಪ್ರದೇಶದಲ್ಲಿ ‘ಬಸ್ ಯಾತ್ರೆ’ ಕೈಗೊಳ್ಳಲಿದ್ದಾರೆ. <br /> <div> ಆಂಧ್ರವಿಭಜನೆಗೆ ಕೈಗೊಂಡ ಏಕಪಕ್ಷೀಯ ನಿರ್ಧಾರದಿಂದ ಸಿಟ್ಟಿಗೆದ್ದಿರುವ ಜನರ ಕೋಪ ಶಮನ ಮಾಡಲು ಕೈಗೊಂಡಿರುವ ಯಾತ್ರೆ ಇದಾಗಿದೆ. <br /> </div><div> ‘ಶ್ರೀಕಾಕುಳಂದಿಂದ ಅನಂತಪುರದವರೆಗೆ ಇದೇ 21ರಿಂದ 27ರ ವರೆಗೆ ಪಕ್ಷದ ಕಾರ್ಯಕರ್ತರ ಸಭೆ ಸಂಘಟಿಸಲಾಗಿದೆ. ಆ ಸಭೆಯಲ್ಲಿ ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿಸಲಾಗುವುದು’ ಎಂದು ಪಕ್ಷ ಹೇಳಿದೆ.<br /> </div><div> ‘ ಆಂಧ್ರಪ್ರದೇಶ ವಿಭಜನೆ ನಿರ್ಧಾರದ ಉದ್ದೇಶ ಮತ್ತು ವಿಭಜನೆಯಿಂದ ಯಾವ ಪ್ರಯೋಜನ ಆಗಲಿದೆ ಎನ್ನುವುದನ್ನು ನಾವು </div><div> ಜನರಿಗೆ ತಿಳಿಸುತ್ತೇವೆ’ ಎಂದು ಸೀಮಾಂಧ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಚಿರಂಜೀವಿ ಸುದ್ದಿಗಾರರಿಗೆ ತಿಳಿಸಿದರು.<br /> </div><div> ‘ಸೀಮಾಂಧ್ರದ ಪ್ರತಿ ಜಿಲ್ಲೆಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಿ ಈಗಿನ ಬೆಳವಣಿಗೆ ಮತ್ತು ಮುಂದೆ ಕೈಗೊಳ್ಳುವ ನಿರ್ಧಾರ ಅವರಿಗೆ ತಿಳಿಸಲು ಈ ಬಸ್ ಯಾತ್ರೆ ಕೈಗೊಳ್ಳಲಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ </div><div> ಅನಂ ರಾಮನಾರಾಯಣ ರೆಡ್ಡಿ ಹೇಳಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>