<p><strong>ಬೆಳಗಾವಿ:</strong> ತಮ್ಮ ಸೇವೆಯನ್ನು ಮುಂದುವರಿಸುವಂತೆ ಒತ್ತಾಯಿಸಿ ಇಲ್ಲಿನ ಮಜಗಾಂವದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆಯಿತು.<br /> <br /> ಕಸ ಹೊಡೆಯುವ ಕೆಲಸ ಮಾಡುತ್ತಿದ್ದ 55 ಗುತ್ತಿಗೆ ಪೌರ ಕಾರ್ಮಿಕರನ್ನು ಅಕ್ಟೋಬರ್ 22ರಿಂದ ಕೈಬಿಡಲಾಗಿತ್ತು. ಹೀಗಾಗಿ ತಮ್ಮನ್ನೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಕಚೇರಿ ಎದುರು ಬುಧವಾರವು ಧರಣಿ ಕುಳಿತಿದ್ದರು. ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಚನ್ನವ್ವ ಹಾಗೂ ಯಲ್ಲವ್ವ ಎಂಬುವವರು ಸೇರಿದಂತೆ ನಾಲ್ವರು ಏಕಾಏಕಿ ಸೀಮೆ ಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು ಮುಂದಾಗಲಿದ್ದ ಅನಾಹುತವನ್ನು ತಪ್ಪಿಸಿದರು. ನಾಲ್ವರನ್ನು ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.<br /> <br /> <strong>ಹಿನ್ನೆಲೆ: </strong>ನಗರದ ವಡಗಾವಿ, ಶಹಾಪುರ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಮಹಾನಗರ ಪಾಲಿಕೆಯು ಮೋಹನ್ ಎಂಬುವವರಿಗೆ ಗುತ್ತಿಗೆ ನೀಡಿತ್ತು. ಅವರ ಬಳಿ 55 ಕಾರ್ಮಿಕರು ಕಳೆದ ಎಂಟು– ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಕಾರಣಾಂತರದಿಂದ ಇವರ ಗುತ್ತಿಗೆಯನ್ನು ರದ್ದುಗೊಳಿಸಿದ ಪಾಲಿಕೆಯು, ಇಲ್ಲಿನ ಕೆಲಸವನ್ನು ವೈ.ಬಿ. ಗೊಲ್ಲರ ಎಂಬುವವರಿಗೆ ಎರಡು ತಿಂಗಳ ಹಿಂದೆ ಗುತ್ತಿಗೆ ನೀಡಿತ್ತು.<br /> <br /> ಗೊಲ್ಲರ ಅವರು ಈ ಹಿಂದಿನ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದ 55 ಕಾರ್ಮಿಕರನ್ನು ಕೈ ಬಿಟ್ಟು ಬೇರೆಯವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಇದರಿಂದಾಗಿ ಕೆಲಸ ಕಳೆದುಕೊಂಡ ಕಾರ್ಮಿಕರು, ಗೊಲ್ಲರ ಅವರಿಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ತಮ್ಮನ್ನೇ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸಿದ್ದರು. ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ. ಜಾನ್ಸನ್ ಅವರು ಸಂಧಾನಕಾರರಾಗಿ ಮಾತುಕತೆ ನಡೆಸುತ್ತಿದ್ದರು. ಪಾಲಿಕೆಯವರು ಹಳೆಯ ಕಾರ್ಮಿಕರನ್ನೇ ಮುಂದುವರಿಸಬೇಕು ಎಂಬ ಷರತ್ತನ್ನು ವಿಧಿಸದೇ ಗುತ್ತಿಗೆ ನೀಡಿರುವುದೇ ಸಮಸ್ಯೆ ಉಲ್ಭವಿಸಲು ಕಾರಣ ಎನ್ನಲಾಗಿದೆ.<br /> <br /> ಎರಡು ತಿಂಗಳಿನಿಂದ ಕೆಲಸ ಇಲ್ಲದೇ ಊಟಕ್ಕೆ ತೊಂದರೆಯಾಗುತ್ತಿದೆ. ನಮಗೆ ನ್ಯಾಯ ಸಿಗುವುದು ವಿಳಂಬವಾಗುತ್ತಿದೆ ಎಂದು ಆಕ್ರೋಶಗೊಂಡ ಕಾರ್ಮಿಕರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು.<br /> <br /> ಬಳಿಕ ಉಪ ಕಾರ್ಮಿಕ ಆಯುಕ್ತ ಇ. ಲಕ್ಷ್ಮಪ್ಪ ಅವರು ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ರಾತ್ರಿಯವರೆಗೂ ಕಾರ್ಮಿಕರ ಪ್ರತಿಭಟನೆ ಮುಂದುವರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಮ್ಮ ಸೇವೆಯನ್ನು ಮುಂದುವರಿಸುವಂತೆ ಒತ್ತಾಯಿಸಿ ಇಲ್ಲಿನ ಮಜಗಾಂವದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸುತ್ತಿದ್ದ ಮಹಾನಗರ ಪಾಲಿಕೆಯ ಗುತ್ತಿಗೆ ಪೌರಕಾರ್ಮಿಕರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆಯಿತು.<br /> <br /> ಕಸ ಹೊಡೆಯುವ ಕೆಲಸ ಮಾಡುತ್ತಿದ್ದ 55 ಗುತ್ತಿಗೆ ಪೌರ ಕಾರ್ಮಿಕರನ್ನು ಅಕ್ಟೋಬರ್ 22ರಿಂದ ಕೈಬಿಡಲಾಗಿತ್ತು. ಹೀಗಾಗಿ ತಮ್ಮನ್ನೇ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆ ಕಚೇರಿ ಎದುರು ಬುಧವಾರವು ಧರಣಿ ಕುಳಿತಿದ್ದರು. ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಚನ್ನವ್ವ ಹಾಗೂ ಯಲ್ಲವ್ವ ಎಂಬುವವರು ಸೇರಿದಂತೆ ನಾಲ್ವರು ಏಕಾಏಕಿ ಸೀಮೆ ಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ತಕ್ಷಣವೇ ಮಧ್ಯಪ್ರವೇಶಿಸಿದ ಪೊಲೀಸರು ಮುಂದಾಗಲಿದ್ದ ಅನಾಹುತವನ್ನು ತಪ್ಪಿಸಿದರು. ನಾಲ್ವರನ್ನು ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.<br /> <br /> <strong>ಹಿನ್ನೆಲೆ: </strong>ನಗರದ ವಡಗಾವಿ, ಶಹಾಪುರ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಮಹಾನಗರ ಪಾಲಿಕೆಯು ಮೋಹನ್ ಎಂಬುವವರಿಗೆ ಗುತ್ತಿಗೆ ನೀಡಿತ್ತು. ಅವರ ಬಳಿ 55 ಕಾರ್ಮಿಕರು ಕಳೆದ ಎಂಟು– ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಕಾರಣಾಂತರದಿಂದ ಇವರ ಗುತ್ತಿಗೆಯನ್ನು ರದ್ದುಗೊಳಿಸಿದ ಪಾಲಿಕೆಯು, ಇಲ್ಲಿನ ಕೆಲಸವನ್ನು ವೈ.ಬಿ. ಗೊಲ್ಲರ ಎಂಬುವವರಿಗೆ ಎರಡು ತಿಂಗಳ ಹಿಂದೆ ಗುತ್ತಿಗೆ ನೀಡಿತ್ತು.<br /> <br /> ಗೊಲ್ಲರ ಅವರು ಈ ಹಿಂದಿನ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದ 55 ಕಾರ್ಮಿಕರನ್ನು ಕೈ ಬಿಟ್ಟು ಬೇರೆಯವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ಇದರಿಂದಾಗಿ ಕೆಲಸ ಕಳೆದುಕೊಂಡ ಕಾರ್ಮಿಕರು, ಗೊಲ್ಲರ ಅವರಿಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ತಮ್ಮನ್ನೇ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸಿದ್ದರು. ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ. ಜಾನ್ಸನ್ ಅವರು ಸಂಧಾನಕಾರರಾಗಿ ಮಾತುಕತೆ ನಡೆಸುತ್ತಿದ್ದರು. ಪಾಲಿಕೆಯವರು ಹಳೆಯ ಕಾರ್ಮಿಕರನ್ನೇ ಮುಂದುವರಿಸಬೇಕು ಎಂಬ ಷರತ್ತನ್ನು ವಿಧಿಸದೇ ಗುತ್ತಿಗೆ ನೀಡಿರುವುದೇ ಸಮಸ್ಯೆ ಉಲ್ಭವಿಸಲು ಕಾರಣ ಎನ್ನಲಾಗಿದೆ.<br /> <br /> ಎರಡು ತಿಂಗಳಿನಿಂದ ಕೆಲಸ ಇಲ್ಲದೇ ಊಟಕ್ಕೆ ತೊಂದರೆಯಾಗುತ್ತಿದೆ. ನಮಗೆ ನ್ಯಾಯ ಸಿಗುವುದು ವಿಳಂಬವಾಗುತ್ತಿದೆ ಎಂದು ಆಕ್ರೋಶಗೊಂಡ ಕಾರ್ಮಿಕರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು.<br /> <br /> ಬಳಿಕ ಉಪ ಕಾರ್ಮಿಕ ಆಯುಕ್ತ ಇ. ಲಕ್ಷ್ಮಪ್ಪ ಅವರು ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ರಾತ್ರಿಯವರೆಗೂ ಕಾರ್ಮಿಕರ ಪ್ರತಿಭಟನೆ ಮುಂದುವರಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>