<p>ಬೀದರ್: ಪರಿಸರವಾದಿ ಸುಂದರಲಾಲ್ ಬಹುಗುಣ ಇಕೋ ಕ್ಲಬ್ ಉದ್ಘಾಟನಾ ಸಮಾರಂಭ ತಾಲ್ಲೂಕಿನ ಕಮಠಾಣ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆಯಿತು.<br /> <br /> ರಾಷ್ಟ್ರೀಯ ಹಸಿರು ಪಡೆ ಯೋಜನೆ ನಿಮಿತ್ತ ಏರ್ಪಡಿಸಿದ್ದ ಪರಿಸರ ಸಂರಕ್ಷಣೆ ಕುರಿತ ಜನಜಾಗೃತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ವಾಹಿನಿಯ ಅಧ್ಯಕ್ಷ ಶೈಲೇಂದ್ರ ಕಾವಡಿ ಕ್ಲಬ್ನ್ನು ಉದ್ಘಾಟಿಸಿದರು.<br /> <br /> ಪರಿಸರ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಮಹತ್ವದ್ದಾಗಿದೆ. ಆದರೆ, ಪ್ರಸ್ತುತ ಕಾಡುಗಳು ನಾಶವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.<br /> <br /> ಪರಿಸರ ನಾಶ ಇದೇ ರೀತಿ ಮುಂದುವರೆದರೆ ಜೀವ ಸಂಕುಲಕ್ಕೆ ಭಾರಿ ಆಪತ್ತು ಎದುರಾಗಲಿದೆ. ತಾಪಮಾನ ಹೆಚ್ಚಳದಿಂದ ಪ್ರಕೃತ ವಿಕೋಪಗಳು ಸಂಭವಿಸಲಿವೆ ಎಂದು ಹೇಳಿದರು.<br /> <br /> ಪ್ರತಿಯೊಬ್ಬರು ಭವಿಷ್ಯಕ್ಕಾಗಿ ಮರಗಿಡಗಳನ್ನು ನೆಡಬೇಕು. ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದಕ್ಕಾಗಿ ಮಗುವಿಗೊಂದು ಮರ- ಶಾಲೆಗೊಂದು ವನ ಯೋಜನೆ ಜಾರಿಗೆ ಬಂದಿದೆ ಎಂದರು. <br /> <br /> ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಕಡ್ಡಾಯವಾಗಿ ಮನೆಗೆ ಎರಡು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಕಾಲೇಜಿನ ಪ್ರಾಚಾರ್ಯ ಸೋಮನಾಥ ವೊಲದೊಡ್ಡಿ ಕಿವಿಮಾತು ಹೇಳಿದರು.<br /> <br /> ವಿದ್ಯಾರ್ಥಿಗಳಾದ ಅಶ್ವಿನಿ, ಮಮಿತಾ, ಅಂಬಿಕಾ ಮಾತನಾಡಿದರು. ಪರಮೇಶ್ವರ ದಾಂಡೆ ಸಂಗೀತ ಪ್ರಸ್ತುತಪಡಿಸಿದರು. ಉಪನ್ಯಾಸಕರಾದಶ್ರೀನಿವಾಸ ಪಾಂಚಾಳ್, ಭಾರತಿ ವಸ್ತ್ರದ್, ಖುರ್ಷಿದ್ ಬೇಗಂ, ಶಿವರಾಜ ಶ್ರೀಮಂಗಲೆ, ಮೀನಾಕ್ಷಿ ಉಪಸ್ಥಿತರಿದ್ದರು.<br /> <br /> ಚಂದ್ರಶೇಖರ ವಾಘಮಾರೆ ಸ್ವಾಗತಿಸಿದರು. ಭೀಮಷಾ ನಾಟಿಕರ್ ನಿರೂಪಿಸಿದರು. ಉಪನ್ಯಾಸಕ ರಮೇಶ ವೈದ್ಯ ವಂದಿಸಿದರು. ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಪರಿಸರವಾದಿ ಸುಂದರಲಾಲ್ ಬಹುಗುಣ ಇಕೋ ಕ್ಲಬ್ ಉದ್ಘಾಟನಾ ಸಮಾರಂಭ ತಾಲ್ಲೂಕಿನ ಕಮಠಾಣ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆಯಿತು.<br /> <br /> ರಾಷ್ಟ್ರೀಯ ಹಸಿರು ಪಡೆ ಯೋಜನೆ ನಿಮಿತ್ತ ಏರ್ಪಡಿಸಿದ್ದ ಪರಿಸರ ಸಂರಕ್ಷಣೆ ಕುರಿತ ಜನಜಾಗೃತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ವಾಹಿನಿಯ ಅಧ್ಯಕ್ಷ ಶೈಲೇಂದ್ರ ಕಾವಡಿ ಕ್ಲಬ್ನ್ನು ಉದ್ಘಾಟಿಸಿದರು.<br /> <br /> ಪರಿಸರ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಮಹತ್ವದ್ದಾಗಿದೆ. ಆದರೆ, ಪ್ರಸ್ತುತ ಕಾಡುಗಳು ನಾಶವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.<br /> <br /> ಪರಿಸರ ನಾಶ ಇದೇ ರೀತಿ ಮುಂದುವರೆದರೆ ಜೀವ ಸಂಕುಲಕ್ಕೆ ಭಾರಿ ಆಪತ್ತು ಎದುರಾಗಲಿದೆ. ತಾಪಮಾನ ಹೆಚ್ಚಳದಿಂದ ಪ್ರಕೃತ ವಿಕೋಪಗಳು ಸಂಭವಿಸಲಿವೆ ಎಂದು ಹೇಳಿದರು.<br /> <br /> ಪ್ರತಿಯೊಬ್ಬರು ಭವಿಷ್ಯಕ್ಕಾಗಿ ಮರಗಿಡಗಳನ್ನು ನೆಡಬೇಕು. ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದಕ್ಕಾಗಿ ಮಗುವಿಗೊಂದು ಮರ- ಶಾಲೆಗೊಂದು ವನ ಯೋಜನೆ ಜಾರಿಗೆ ಬಂದಿದೆ ಎಂದರು. <br /> <br /> ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಕಡ್ಡಾಯವಾಗಿ ಮನೆಗೆ ಎರಡು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇಕು ಎಂದು ಕಾಲೇಜಿನ ಪ್ರಾಚಾರ್ಯ ಸೋಮನಾಥ ವೊಲದೊಡ್ಡಿ ಕಿವಿಮಾತು ಹೇಳಿದರು.<br /> <br /> ವಿದ್ಯಾರ್ಥಿಗಳಾದ ಅಶ್ವಿನಿ, ಮಮಿತಾ, ಅಂಬಿಕಾ ಮಾತನಾಡಿದರು. ಪರಮೇಶ್ವರ ದಾಂಡೆ ಸಂಗೀತ ಪ್ರಸ್ತುತಪಡಿಸಿದರು. ಉಪನ್ಯಾಸಕರಾದಶ್ರೀನಿವಾಸ ಪಾಂಚಾಳ್, ಭಾರತಿ ವಸ್ತ್ರದ್, ಖುರ್ಷಿದ್ ಬೇಗಂ, ಶಿವರಾಜ ಶ್ರೀಮಂಗಲೆ, ಮೀನಾಕ್ಷಿ ಉಪಸ್ಥಿತರಿದ್ದರು.<br /> <br /> ಚಂದ್ರಶೇಖರ ವಾಘಮಾರೆ ಸ್ವಾಗತಿಸಿದರು. ಭೀಮಷಾ ನಾಟಿಕರ್ ನಿರೂಪಿಸಿದರು. ಉಪನ್ಯಾಸಕ ರಮೇಶ ವೈದ್ಯ ವಂದಿಸಿದರು. ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>