<p>ರಾಯಪುರ (ಪಿಟಿಐ): ಜಿಲ್ಲಾಧಿಕಾರಿ ಅಲೆಕ್ಸ್ ಪಾಲ್ ಮೆನನ್ ಅವರನ್ನು ಮಾವೋವಾದಿ ನಕ್ಸಲೀಯರು ಅಪಹರಿಸಿರುವ ಪ್ರಕರಣದ ಪರಿಶೀಲನೆಗಾಗಿ ಮುಖ್ಯಮಂತ್ರಿ ರಮಣ್ ಸಿಂಗ್ ಅಧ್ಯಕ್ಷತೆಯಲ್ಲಿ ಉಪ ಸಮಿತಿಯೊಂದರನ್ನು ರಚಿಸಲು ಛತ್ತೀಸ್ ಗಡ ಸರ್ಕಾರ ಸೋಮವಾರ ತೀರ್ಮಾನಿಸಿದೆ.<br /> <br /> ಮುಖ್ಯಮಂತ್ರಿಯವರ ನಿವಾಸದಲ್ಲಿ ಕಳೆದ ರಾತ್ರಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.<br /> <br /> 2006ರ ತಂಡದ ಐಎಎಸ್ ಅಧಿಕಾರಿ ಮೆನನ್ ಬಿಡುಗಡೆಗೆ ತಮ್ಮ 8 ಮಂದಿ ಸಹೋದ್ಯೋಗಿಗಳನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಆಗ್ರಹಿಸಿರುವ ನಕ್ಸಲೀಯರು ಬೇಡಿಕೆ ಈಡೇರಿಕೆಗೆ ಏಪ್ರಿಲ್ 24ರ ಗಡುವು ವಿಧಿಸಿದ್ದನ್ನು ಅನುಸರಿಸಿ ಕಳೆದ ರಾತ್ರಿ ತುರ್ತು ಸಭೆ ನಡೆಯಿತು ಎಂದು ಮೂಲಗಳು ಹೇಳಿವೆ.<br /> <br /> ರಾಜ್ಯ ಗೃಹ ಸಚಿವ ನಂಕಿ ರಾಮ್ ಕನ್ವರ್, ಗುಡ್ಡಗಾಡು ಕಲ್ಯಾಣ ಸಚಿವ ಕೇದಾರ ಕಶ್ಯಪ್, ಜಲ ಸಂಪನ್ಮೂಲ ಸಚಿವ ರಾಮ್ವಿಚಾರ್ ನೇತಂ ಮತ್ತು ಶಾಲಾ ಶಿಕ್ಷಣ ಸಚಿವ ಬ್ರಿಜ್ ಮೋಹನ್ ಅಗರ್ ವಾಲ್ ಉಪಸಮಿತಿಯ ಸದಸ್ಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಪ್ರಕರಣದ ಬಗ್ಗೆ ಚರ್ಚಿಸಲು ಶೀಘ್ರವೇ ಸರ್ವ ಪಕ್ಷ ಸಭೆ ನಡೆಸಲೂ ನಿರ್ಧರಿಸಲಾಗಿದೆ ಎಂದೂ ಮೂಲಗಳು ಹೇಳಿವೆ.<br /> <br /> ಸುಕ್ಮಾ ಜಿಲ್ಲಾಧಿಕಾರಿಯ ಬಿಡುಗಡೆಗೆ ಬದಲಾಗಿ ಛತ್ತೀಸ್ ಗಡ ಸೆರೆಮನೆಯಲ್ಲಿ ಇರುವ ತಮ್ಮ ಎಂಟು ಮಂದಿ ನಾಯಕರನ್ನು ಬಿಡುಗಡೆ ಮಾಡಬೇಕು ಮತ್ತು ~ಗ್ರೀನ್ ಹಂಟ್ ಕಾರ್ಯಾಚರಣೆ~ಯನ್ನು ಸ್ಥಗಿತಗೊಳಿಸಬೇಕು ಎಂಬುದಾಗಿ ಭಾನುವಾರ ಮಾವೋವಾದಿ ನಕ್ಸಲೀಯರು ಬೇಡಿಕೆ ಮುಂದಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಪುರ (ಪಿಟಿಐ): ಜಿಲ್ಲಾಧಿಕಾರಿ ಅಲೆಕ್ಸ್ ಪಾಲ್ ಮೆನನ್ ಅವರನ್ನು ಮಾವೋವಾದಿ ನಕ್ಸಲೀಯರು ಅಪಹರಿಸಿರುವ ಪ್ರಕರಣದ ಪರಿಶೀಲನೆಗಾಗಿ ಮುಖ್ಯಮಂತ್ರಿ ರಮಣ್ ಸಿಂಗ್ ಅಧ್ಯಕ್ಷತೆಯಲ್ಲಿ ಉಪ ಸಮಿತಿಯೊಂದರನ್ನು ರಚಿಸಲು ಛತ್ತೀಸ್ ಗಡ ಸರ್ಕಾರ ಸೋಮವಾರ ತೀರ್ಮಾನಿಸಿದೆ.<br /> <br /> ಮುಖ್ಯಮಂತ್ರಿಯವರ ನಿವಾಸದಲ್ಲಿ ಕಳೆದ ರಾತ್ರಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.<br /> <br /> 2006ರ ತಂಡದ ಐಎಎಸ್ ಅಧಿಕಾರಿ ಮೆನನ್ ಬಿಡುಗಡೆಗೆ ತಮ್ಮ 8 ಮಂದಿ ಸಹೋದ್ಯೋಗಿಗಳನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಆಗ್ರಹಿಸಿರುವ ನಕ್ಸಲೀಯರು ಬೇಡಿಕೆ ಈಡೇರಿಕೆಗೆ ಏಪ್ರಿಲ್ 24ರ ಗಡುವು ವಿಧಿಸಿದ್ದನ್ನು ಅನುಸರಿಸಿ ಕಳೆದ ರಾತ್ರಿ ತುರ್ತು ಸಭೆ ನಡೆಯಿತು ಎಂದು ಮೂಲಗಳು ಹೇಳಿವೆ.<br /> <br /> ರಾಜ್ಯ ಗೃಹ ಸಚಿವ ನಂಕಿ ರಾಮ್ ಕನ್ವರ್, ಗುಡ್ಡಗಾಡು ಕಲ್ಯಾಣ ಸಚಿವ ಕೇದಾರ ಕಶ್ಯಪ್, ಜಲ ಸಂಪನ್ಮೂಲ ಸಚಿವ ರಾಮ್ವಿಚಾರ್ ನೇತಂ ಮತ್ತು ಶಾಲಾ ಶಿಕ್ಷಣ ಸಚಿವ ಬ್ರಿಜ್ ಮೋಹನ್ ಅಗರ್ ವಾಲ್ ಉಪಸಮಿತಿಯ ಸದಸ್ಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಪ್ರಕರಣದ ಬಗ್ಗೆ ಚರ್ಚಿಸಲು ಶೀಘ್ರವೇ ಸರ್ವ ಪಕ್ಷ ಸಭೆ ನಡೆಸಲೂ ನಿರ್ಧರಿಸಲಾಗಿದೆ ಎಂದೂ ಮೂಲಗಳು ಹೇಳಿವೆ.<br /> <br /> ಸುಕ್ಮಾ ಜಿಲ್ಲಾಧಿಕಾರಿಯ ಬಿಡುಗಡೆಗೆ ಬದಲಾಗಿ ಛತ್ತೀಸ್ ಗಡ ಸೆರೆಮನೆಯಲ್ಲಿ ಇರುವ ತಮ್ಮ ಎಂಟು ಮಂದಿ ನಾಯಕರನ್ನು ಬಿಡುಗಡೆ ಮಾಡಬೇಕು ಮತ್ತು ~ಗ್ರೀನ್ ಹಂಟ್ ಕಾರ್ಯಾಚರಣೆ~ಯನ್ನು ಸ್ಥಗಿತಗೊಳಿಸಬೇಕು ಎಂಬುದಾಗಿ ಭಾನುವಾರ ಮಾವೋವಾದಿ ನಕ್ಸಲೀಯರು ಬೇಡಿಕೆ ಮುಂದಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>