<p>ನಂಜನಗೂಡು: ತಾಲ್ಲೂಕಿನ ಸುತ್ತೂರು ಮಠದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಮೇಳ, ರಂಗೋಲಿ ಸ್ಪರ್ಧೆ, ಸೋಬಾನೆ ಪದ ಸ್ಪರ್ಧೆ ಕಾರ್ಯಕ್ರಮದೊಂದಿಗೆ ಶುರುವಾದ ಜಾತ್ರಾ ಮಹೋತ್ಸವ ಜ.24ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.<br /> <br /> ಸುತ್ತೂರಿನ ರಸ್ತೆಯ ತುಂಬೆಲ್ಲಾ ಬಣ್ಣ ಬಣ್ಣದ ರಂಗೋಲಿಗಳು ಗಮನ ಸೆಳೆದವು. ಸೋಬಾನೆ ಪದ ಸ್ಪರ್ಧೆ ಆರಂಭವಾಗುತ್ತಿದ್ದಂತೆ ಸುತ್ತೂರು ಎಂಬ ಈ ಪುಟ್ಟ ಗ್ರಾಮ ಸೋಬಾನೆಯ ಗುಂಗಿನಲ್ಲಿ ಮುಳುಗಿತು. ಕಪಿಲಾ ನದಿ ದಡದಲ್ಲಿರುವ ಸುತ್ತೂರು ಜಾತ್ರೆಯಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆಯುವುದಿಲ್ಲ. ವಸ್ತು ಪ್ರದರ್ಶನ, ಕೃಷಿ ಮೇಳ, ಜಾನುವಾರು ಮೇಳ ಮುಂತಾದವುಗಳೂ ನಡೆಯುವುದರಿಂದ ನಿಜವಾದ ಅರ್ಥದಲ್ಲಿ ಇಲ್ಲಿ ಜನಜಾತ್ರೆ ನೆರೆಯುತ್ತದೆ. <br /> <br /> ಗುರುವಾರ ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಮೇಳ, ರಂಗೋಲಿ ಸ್ಪರ್ಧೆ, ಸೋಬಾನೆ ಪದ ಉದ್ಘಾಟನೆಯೊಂದಿಗೆ ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. <br /> <br /> ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಕೆ.ಆರ್. ಸುಬ್ಬಣ್ಣ ಮಾತನಾಡಿ ಮೈಸೂರಿನಲ್ಲಿ ಅಂತರರಾಷ್ಟ್ರೀಯ ಚಿತ್ರಕಲಾ ಶಾಲೆ ತೆರೆಯಲಾಗುವುದು ಎಂದು ಹೇಳಿದರು. ಜ. 20 ರಂದು 175ಕ್ಕೂ ಅಧಿಕ ಜೋಡಿಗಳ ಸಾಮೂಹಿಕ ವಿವಾಹ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಭಾಗವಹಿಸಲಿದ್ದಾರೆ.<br /> <br /> ಜ.21 ರಂದು ಬೆಳಿಗ್ಗೆ 10.45ಕ್ಕೆ ಶಿವಯೋಗಿಗಳ ರಥೋತ್ಸವ ಜರುಗಲಿದೆ. ಜ.23 ರಂದು ರಾತ್ರಿ 9.45ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ತಾಲ್ಲೂಕಿನ ಸುತ್ತೂರು ಮಠದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಮೇಳ, ರಂಗೋಲಿ ಸ್ಪರ್ಧೆ, ಸೋಬಾನೆ ಪದ ಸ್ಪರ್ಧೆ ಕಾರ್ಯಕ್ರಮದೊಂದಿಗೆ ಶುರುವಾದ ಜಾತ್ರಾ ಮಹೋತ್ಸವ ಜ.24ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.<br /> <br /> ಸುತ್ತೂರಿನ ರಸ್ತೆಯ ತುಂಬೆಲ್ಲಾ ಬಣ್ಣ ಬಣ್ಣದ ರಂಗೋಲಿಗಳು ಗಮನ ಸೆಳೆದವು. ಸೋಬಾನೆ ಪದ ಸ್ಪರ್ಧೆ ಆರಂಭವಾಗುತ್ತಿದ್ದಂತೆ ಸುತ್ತೂರು ಎಂಬ ಈ ಪುಟ್ಟ ಗ್ರಾಮ ಸೋಬಾನೆಯ ಗುಂಗಿನಲ್ಲಿ ಮುಳುಗಿತು. ಕಪಿಲಾ ನದಿ ದಡದಲ್ಲಿರುವ ಸುತ್ತೂರು ಜಾತ್ರೆಯಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆಯುವುದಿಲ್ಲ. ವಸ್ತು ಪ್ರದರ್ಶನ, ಕೃಷಿ ಮೇಳ, ಜಾನುವಾರು ಮೇಳ ಮುಂತಾದವುಗಳೂ ನಡೆಯುವುದರಿಂದ ನಿಜವಾದ ಅರ್ಥದಲ್ಲಿ ಇಲ್ಲಿ ಜನಜಾತ್ರೆ ನೆರೆಯುತ್ತದೆ. <br /> <br /> ಗುರುವಾರ ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಮೇಳ, ರಂಗೋಲಿ ಸ್ಪರ್ಧೆ, ಸೋಬಾನೆ ಪದ ಉದ್ಘಾಟನೆಯೊಂದಿಗೆ ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. <br /> <br /> ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಕೆ.ಆರ್. ಸುಬ್ಬಣ್ಣ ಮಾತನಾಡಿ ಮೈಸೂರಿನಲ್ಲಿ ಅಂತರರಾಷ್ಟ್ರೀಯ ಚಿತ್ರಕಲಾ ಶಾಲೆ ತೆರೆಯಲಾಗುವುದು ಎಂದು ಹೇಳಿದರು. ಜ. 20 ರಂದು 175ಕ್ಕೂ ಅಧಿಕ ಜೋಡಿಗಳ ಸಾಮೂಹಿಕ ವಿವಾಹ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಭಾಗವಹಿಸಲಿದ್ದಾರೆ.<br /> <br /> ಜ.21 ರಂದು ಬೆಳಿಗ್ಗೆ 10.45ಕ್ಕೆ ಶಿವಯೋಗಿಗಳ ರಥೋತ್ಸವ ಜರುಗಲಿದೆ. ಜ.23 ರಂದು ರಾತ್ರಿ 9.45ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>