<p><strong>ಮಡಿಕೇರಿ: </strong> ವಿದ್ಯುತ್ ಕಳ್ಳತನವನ್ನು ಪತ್ತೆ ಹಚ್ಚಲು ಹಾಗೂ ತಡೆಗಟ್ಟುವ ಉದ್ದೇಶದಿಂದ ನಗರದ ಸುದರ್ಶನ ವೃತ್ತದ ಸೆಸ್ಕ್ ಕಾಲೋನಿ ಬಳಿ ಸೆಸ್ಕ್ ಜಾಗೃತ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ.ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠ ಮಂಜುನಾಥ ಅಣ್ಣಿಗೇರಿ ಅವರು ಈ ಠಾಣೆಯನ್ನು ಉದ್ಘಾಟಿಸಿದರು.<br /> <br /> ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ದಿವಾಕರ್ ಸುದ್ದಿಗಾರರ ಜೊತೆ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸೋರಿಕೆ ಹಾಗೂ ಕಳ್ಳತನವನ್ನು ತಡೆಯುವ ಉದ್ದೇಶದಿಂದ ಈ ಜಾಗೃತ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ ಎಂದರು. <br /> <br /> ತಾಂತ್ರಿಕ ಕಾರಣಗಳಿಂದ ವಿದ್ಯುತ್ ಸೋರಿಕೆಯಾಗುತ್ತಿದ್ದರೆ ಅದನ್ನು ಕೂಡ ಪತ್ತೆ ಹಚ್ಚುವ ಕೆಲಸವನ್ನು ಜಾಗೃತ ಪೊಲೀಸರು ಮಾಡುತ್ತಾರೆ. ಬಳಕೆದಾರರು ವಿದ್ಯುತ್ ಕಳ್ಳತನ ಮಾಡುತ್ತಿದ್ದರೆ ಅದನ್ನು ಪತ್ತೆ ಹಚ್ಚಿ, ಕಾನೂನು ಪ್ರಕಾರ ದಂಡ- ಶಿಕ್ಷೆಯನ್ನು ಇವರು ವಿಧಿಸುತ್ತಾರೆ. ಇದರಿಂದ ವಿದ್ಯುತ್ ಸೋರಿಕೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ಹೇಳಿದರು. <br /> <br /> ವಿದ್ಯುತ್ ಕಳ್ಳತನ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಬಳಿ ಮಾಹಿತಿ ಇದ್ದರೆ ಕಚೇರಿಗೆ ಬಂದು ದೂರು ನೀಡಬಹುದು. ಕಚೇರಿಗೆ ಸದ್ಯದಲ್ಲಿಯೇ ಸ್ಥಿರ ದೂರವಾಣಿ ಸಂಪರ್ಕ ಬರಲಿದ್ದು, ನಂತರ ಈ ಸಂಖ್ಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. <br /> <br /> ಸಮಾರಂಭದಲ್ಲಿ ಜಾಗೃತ ದಳದ ಎಸ್ಪಿ ರವಿ ನಾರಾಯಣ, ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ, ಡಿವೈಎಸ್ಪಿ ನಾಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong> ವಿದ್ಯುತ್ ಕಳ್ಳತನವನ್ನು ಪತ್ತೆ ಹಚ್ಚಲು ಹಾಗೂ ತಡೆಗಟ್ಟುವ ಉದ್ದೇಶದಿಂದ ನಗರದ ಸುದರ್ಶನ ವೃತ್ತದ ಸೆಸ್ಕ್ ಕಾಲೋನಿ ಬಳಿ ಸೆಸ್ಕ್ ಜಾಗೃತ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ.ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠ ಮಂಜುನಾಥ ಅಣ್ಣಿಗೇರಿ ಅವರು ಈ ಠಾಣೆಯನ್ನು ಉದ್ಘಾಟಿಸಿದರು.<br /> <br /> ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ದಿವಾಕರ್ ಸುದ್ದಿಗಾರರ ಜೊತೆ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸೋರಿಕೆ ಹಾಗೂ ಕಳ್ಳತನವನ್ನು ತಡೆಯುವ ಉದ್ದೇಶದಿಂದ ಈ ಜಾಗೃತ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ ಎಂದರು. <br /> <br /> ತಾಂತ್ರಿಕ ಕಾರಣಗಳಿಂದ ವಿದ್ಯುತ್ ಸೋರಿಕೆಯಾಗುತ್ತಿದ್ದರೆ ಅದನ್ನು ಕೂಡ ಪತ್ತೆ ಹಚ್ಚುವ ಕೆಲಸವನ್ನು ಜಾಗೃತ ಪೊಲೀಸರು ಮಾಡುತ್ತಾರೆ. ಬಳಕೆದಾರರು ವಿದ್ಯುತ್ ಕಳ್ಳತನ ಮಾಡುತ್ತಿದ್ದರೆ ಅದನ್ನು ಪತ್ತೆ ಹಚ್ಚಿ, ಕಾನೂನು ಪ್ರಕಾರ ದಂಡ- ಶಿಕ್ಷೆಯನ್ನು ಇವರು ವಿಧಿಸುತ್ತಾರೆ. ಇದರಿಂದ ವಿದ್ಯುತ್ ಸೋರಿಕೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ಹೇಳಿದರು. <br /> <br /> ವಿದ್ಯುತ್ ಕಳ್ಳತನ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಬಳಿ ಮಾಹಿತಿ ಇದ್ದರೆ ಕಚೇರಿಗೆ ಬಂದು ದೂರು ನೀಡಬಹುದು. ಕಚೇರಿಗೆ ಸದ್ಯದಲ್ಲಿಯೇ ಸ್ಥಿರ ದೂರವಾಣಿ ಸಂಪರ್ಕ ಬರಲಿದ್ದು, ನಂತರ ಈ ಸಂಖ್ಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. <br /> <br /> ಸಮಾರಂಭದಲ್ಲಿ ಜಾಗೃತ ದಳದ ಎಸ್ಪಿ ರವಿ ನಾರಾಯಣ, ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ, ಡಿವೈಎಸ್ಪಿ ನಾಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>