<p><strong>ಶಿಡ್ಲಘಟ್ಟ:</strong> ಮಹಿಳೆಯರು ಅಕ್ಷರಸ್ಥರಾಗಿ ಸುತ್ತಮುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವಂತಾದರೆ ಸಮಾಜವು ಚೈತನ್ಯಯುತವಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಅಗತ್ಯ ಎಂದು ಪ್ರಾಧ್ಯಾಪಕ ಕೋಡಿರಂಗಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ತಾಲ್ಲೂಕು ಲೋಕಶಿಕ್ಷಣ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸಾಕ್ಷರ್ ಭಾರತ್-2012 ಯೋಜನೆಯ ಮಹತ್ವದ ಕುರಿತು ಆಯೋಜಿಸಿದ್ದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು. <br /> <br /> ಸ್ವಾತಂತ್ರ್ಯ ಬಂದು ಆರು ದಶಕಗಳು ಕಳೆದರೂ ಸಾಕ್ಷರತಾ ಪ್ರಮಾಣ ಕೇವಲ ಶೇ.65 ಮಾತ್ರ ಇರುವುದು ದುರಂತ. ಸ್ಥಳೀಯ ಜನ ಪ್ರತಿನಿಧಿಗಳು ಅಕ್ಷರಸ್ಥರಾಗಿ ಕಾನೂನಿನ ಅರಿವು ಪಡೆದು ಸಂವಿಧಾನತ್ಮಕ ಹಕ್ಕು ಚಲಾಯಿಸಿದಾಗ ಪಾರದರ್ಶಕ ಆಡಳಿತ ದೊರೆಯಲು ಸಾಧ್ಯ ಎಂದರು.<br /> <br /> ವಯಸ್ಕರ ಶಿಕ್ಷಣ ಸಮಿತಿಯ ಜಿಲ್ಲಾ ಅಧಿಕಾರಿ ನಾಝ್ಾಪಾರ್ಸಾ ಮಾತನಾಡಿ, ಸಾಕ್ಷರ್ ಭಾರತ್-ಯೋಜನೆಯನ್ನು ಸದುಪಯೋಗ ಪಡಿಸಿಕೊಂಡರೆ ಸಾಮಾಜಿಕ ಜೀವನ ಸುಧಾರಣೆ ಸಾಧ್ಯವಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿ.ಅಮರನಾಥ್, ಪ್ರೇರಕ ಕ್ಯಾತಪ್ಪ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಸಹಾಯಕ ಅಧಿಕಾರಿ ದಸ್ತಗೀರ್ಸಾಬ್, ತಾಲ್ಲೂಕು ಸಾಕ್ಷರತಾ ಸಂಯೋಜನಾಧಿಕಾರಿ ಮಂಜುನಾಥ್, ಶಿವಪ್ಪ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಮಹಿಳೆಯರು ಅಕ್ಷರಸ್ಥರಾಗಿ ಸುತ್ತಮುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವಂತಾದರೆ ಸಮಾಜವು ಚೈತನ್ಯಯುತವಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಅಗತ್ಯ ಎಂದು ಪ್ರಾಧ್ಯಾಪಕ ಕೋಡಿರಂಗಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ತಾಲ್ಲೂಕು ಲೋಕಶಿಕ್ಷಣ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸಾಕ್ಷರ್ ಭಾರತ್-2012 ಯೋಜನೆಯ ಮಹತ್ವದ ಕುರಿತು ಆಯೋಜಿಸಿದ್ದ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು. <br /> <br /> ಸ್ವಾತಂತ್ರ್ಯ ಬಂದು ಆರು ದಶಕಗಳು ಕಳೆದರೂ ಸಾಕ್ಷರತಾ ಪ್ರಮಾಣ ಕೇವಲ ಶೇ.65 ಮಾತ್ರ ಇರುವುದು ದುರಂತ. ಸ್ಥಳೀಯ ಜನ ಪ್ರತಿನಿಧಿಗಳು ಅಕ್ಷರಸ್ಥರಾಗಿ ಕಾನೂನಿನ ಅರಿವು ಪಡೆದು ಸಂವಿಧಾನತ್ಮಕ ಹಕ್ಕು ಚಲಾಯಿಸಿದಾಗ ಪಾರದರ್ಶಕ ಆಡಳಿತ ದೊರೆಯಲು ಸಾಧ್ಯ ಎಂದರು.<br /> <br /> ವಯಸ್ಕರ ಶಿಕ್ಷಣ ಸಮಿತಿಯ ಜಿಲ್ಲಾ ಅಧಿಕಾರಿ ನಾಝ್ಾಪಾರ್ಸಾ ಮಾತನಾಡಿ, ಸಾಕ್ಷರ್ ಭಾರತ್-ಯೋಜನೆಯನ್ನು ಸದುಪಯೋಗ ಪಡಿಸಿಕೊಂಡರೆ ಸಾಮಾಜಿಕ ಜೀವನ ಸುಧಾರಣೆ ಸಾಧ್ಯವಿದೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ಕೆ.ವಿ.ಅಮರನಾಥ್, ಪ್ರೇರಕ ಕ್ಯಾತಪ್ಪ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಸಹಾಯಕ ಅಧಿಕಾರಿ ದಸ್ತಗೀರ್ಸಾಬ್, ತಾಲ್ಲೂಕು ಸಾಕ್ಷರತಾ ಸಂಯೋಜನಾಧಿಕಾರಿ ಮಂಜುನಾಥ್, ಶಿವಪ್ಪ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>