<p><strong>ಯಲಬುರ್ಗಾ:</strong> ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಸಭೆಗೆ ಹಾಜರಾಗದ ಅಧಿಕಾರಿಗಳು ಜನತೆಗೆ ಎಷ್ಟರ ಮಟ್ಟಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುತ್ತೀದ್ದೀರಿ ಎಂಬುದು ಈ ಮೂಲಕ ಸ್ಪಷ್ಟವಾಗುತ್ತಿದೆ. <br /> <br /> ಸುಮಾರು 23ಇಲಾಖೆಗಳ ಪೈಕಿ ಕೇವಲ 7ಇಲಾಖೆಯ ಅಧಿಕಾರಿಗಳು ಹಾಜರಾಗಿದ್ದನ್ನು ಗಮನಿಸಿದ್ದರೆ ಇಲ್ಲಿಯ ಅಧಿಕಾರಿಗಳು ನೌಕರಿ ಮಾಡುತ್ತಿದ್ದಾರೋ ಇಲ್ಲೋ ಎಂಬುದು ಗೊತ್ತಾಗುತ್ತಿಲ್ಲ, ಈ ಕುರಿತು ಪ್ರತಿ ಸಭೆಯಲ್ಲಿ ಕಟುವಾಗಿ ಟೀಕಿಸಿದರೂ ಸುಧಾರಿಸಿಕೊಳ್ಳದಿರುವುದು ನಿಜಕ್ಕು ವಿಪರ್ಯಾಸ ಸಂಗತಿ ಎಂದು ತಾಪಂ ಇಒ ಕೆ.ಬಿ. ಅಕ್ಕೋಜಿ ಅಸಮಾಧಾನ ವ್ಯಕ್ತಪಡಿಸಿದರು. <br /> <br /> ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಫಲಾನುಭವಿಗಳಿಗೆ ವಿವಿಧ ಯೋಜನೆಗಳು ಎಷ್ಟರಮಟ್ಟಿಗೆ ಅನುಷ್ಠಾನಗೊಳಿಸಲಾಗಿದೆ ಎಂಬುದರ ಬಗ್ಗೆ ಚರ್ಚಿಸಲಾಗುವುದು ಎಂದರು. <br /> <br /> ಪಶು ಸಂಗೋಪನೆ ಇಲಾಖೆಗೆ ಸಂಬಂಧಿಸಿದಂತೆ, ವಿಶೇಷ ಘಟಕ ಯೋಜನೆ ಅಡಿಯಲ್ಲಿ ನಾಲ್ಕು, ಗಿರಿಜನ ಉಪಯೋಜನೆಯಲ್ಲಿ ಎರಡು ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಇದರಲ್ಲಿ ಶೇ 3ರಷ್ಟು ಅಂಗವಿಕಲರಿಗೆ ಮೀಸಲಿಡುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಪಶು ವೈದ್ಯಾಧಿಕಾರಿ ಅನಂತರಾವ್ ತಿಳಿಸಿದರು. <br /> <br /> ಸುಧಾರಿತ ತರಕಾರಿ ಬೀಜಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತಿದ್ದು, ರೈತ ಮಹಿಳೆಯರಿಗೆ ಹಣ್ಣು ಸಂಸ್ಕರಣೆ ಕುರಿತ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು. `ಗುಚ್ಚ ಗ್ರಾಮ~ ಎಂಬ ನೂತನ ಯೋಜನೆಯನ್ನು ಪ್ರಸಕ್ತ ವರ್ಷದಿಂದ ಜಾರಿಗೊಳ್ಳಲಿದ್ದು, ಒಂದೇ ಪ್ರದೇಶದ ಸುಮಾರು 200ಎಕರೆ ಒಂದೇ ಬೆಳೆ ಬೆಳೆಯುವ ಉದ್ದೇಶ ಇದ್ದಾಗಿದ್ದು, ಇದಕ್ಕೆ ಸರ್ಕಾರ ವಿವಿಧ ರೀತಿಯ ಆರ್ಥಿಕ ನೆರವು ನೀಡಲಿದೆ ಎಂದು ಮಹಾದೇವಪ್ಪ ಕಮ್ಮಾರ ತಿಳಿಸಿದರು. <br /> <br /> ಸಭೆಗೆ ಸಂಬಂಧಿಸಿದ ವರದಿಯನ್ನು ಓದದೇ ಯಾವುದೋ ಹಳೆಯ ವರದಿಯನ್ನು ಓದಿ ಟೀಕೆಗೆ ಒಳಗಾದ ಅಂಗನವಾಡಿ ಮೇಲ್ವಿಚಾರಕಿ ಕುಲಕರ್ಣಿ ಅವರಿಗೆ, ಅರ್ಧಕ್ಕೆ ನಿಂತ ಅಂಗನವಾಡಿಗಳ ಪಟ್ಟಿಯನ್ನು ತಯಾರಿಸಿ ಕೊಡುವಂತೆ ಕಳೆದ ಸಭೆಯಲ್ಲಿಯೇ ಒತ್ತಾಯಿಸಿದ್ದರೂ ಇನ್ನೂವರೆಗೆ ಕೊಟ್ಟಿಲ್ಲ, ಈ ರೀತಿಯ ನಿರ್ಲಕ್ಷ್ಯ ಸರಿಯಲ್ಲ ಎಂದು ಇಒ ಬೇಸರ ವ್ಯಕ್ತಪಡಿಸಿದರು. <br /> <br /> ರೇಷ್ಮೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ದೊರೆಯುತ್ತಿಲ್ಲ, ಈ ನಿಟ್ಟಿನಲ್ಲಿ ವಿವಿಧ ಪ್ರಚಾರ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಪರಸಪ್ಪ ನಾಯಕ ಹಾಗೂ ಇಒ ಸಲಹೆ ನೀಡಿದರು. <br /> ತಾಪಂ ಸದಸ್ಯರಾದ ಲಕ್ಷ್ಮಿದೇವಿ ರಡ್ಡೇರ್, ಲಲಿತವ್ವ ಕೊಟಗಿ, ಫಕೀರಪ್ಪ ತಳವಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಸಭೆಗೆ ಹಾಜರಾಗದ ಅಧಿಕಾರಿಗಳು ಜನತೆಗೆ ಎಷ್ಟರ ಮಟ್ಟಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುತ್ತೀದ್ದೀರಿ ಎಂಬುದು ಈ ಮೂಲಕ ಸ್ಪಷ್ಟವಾಗುತ್ತಿದೆ. <br /> <br /> ಸುಮಾರು 23ಇಲಾಖೆಗಳ ಪೈಕಿ ಕೇವಲ 7ಇಲಾಖೆಯ ಅಧಿಕಾರಿಗಳು ಹಾಜರಾಗಿದ್ದನ್ನು ಗಮನಿಸಿದ್ದರೆ ಇಲ್ಲಿಯ ಅಧಿಕಾರಿಗಳು ನೌಕರಿ ಮಾಡುತ್ತಿದ್ದಾರೋ ಇಲ್ಲೋ ಎಂಬುದು ಗೊತ್ತಾಗುತ್ತಿಲ್ಲ, ಈ ಕುರಿತು ಪ್ರತಿ ಸಭೆಯಲ್ಲಿ ಕಟುವಾಗಿ ಟೀಕಿಸಿದರೂ ಸುಧಾರಿಸಿಕೊಳ್ಳದಿರುವುದು ನಿಜಕ್ಕು ವಿಪರ್ಯಾಸ ಸಂಗತಿ ಎಂದು ತಾಪಂ ಇಒ ಕೆ.ಬಿ. ಅಕ್ಕೋಜಿ ಅಸಮಾಧಾನ ವ್ಯಕ್ತಪಡಿಸಿದರು. <br /> <br /> ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಫಲಾನುಭವಿಗಳಿಗೆ ವಿವಿಧ ಯೋಜನೆಗಳು ಎಷ್ಟರಮಟ್ಟಿಗೆ ಅನುಷ್ಠಾನಗೊಳಿಸಲಾಗಿದೆ ಎಂಬುದರ ಬಗ್ಗೆ ಚರ್ಚಿಸಲಾಗುವುದು ಎಂದರು. <br /> <br /> ಪಶು ಸಂಗೋಪನೆ ಇಲಾಖೆಗೆ ಸಂಬಂಧಿಸಿದಂತೆ, ವಿಶೇಷ ಘಟಕ ಯೋಜನೆ ಅಡಿಯಲ್ಲಿ ನಾಲ್ಕು, ಗಿರಿಜನ ಉಪಯೋಜನೆಯಲ್ಲಿ ಎರಡು ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಇದರಲ್ಲಿ ಶೇ 3ರಷ್ಟು ಅಂಗವಿಕಲರಿಗೆ ಮೀಸಲಿಡುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಪಶು ವೈದ್ಯಾಧಿಕಾರಿ ಅನಂತರಾವ್ ತಿಳಿಸಿದರು. <br /> <br /> ಸುಧಾರಿತ ತರಕಾರಿ ಬೀಜಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತಿದ್ದು, ರೈತ ಮಹಿಳೆಯರಿಗೆ ಹಣ್ಣು ಸಂಸ್ಕರಣೆ ಕುರಿತ ತರಬೇತಿ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು. `ಗುಚ್ಚ ಗ್ರಾಮ~ ಎಂಬ ನೂತನ ಯೋಜನೆಯನ್ನು ಪ್ರಸಕ್ತ ವರ್ಷದಿಂದ ಜಾರಿಗೊಳ್ಳಲಿದ್ದು, ಒಂದೇ ಪ್ರದೇಶದ ಸುಮಾರು 200ಎಕರೆ ಒಂದೇ ಬೆಳೆ ಬೆಳೆಯುವ ಉದ್ದೇಶ ಇದ್ದಾಗಿದ್ದು, ಇದಕ್ಕೆ ಸರ್ಕಾರ ವಿವಿಧ ರೀತಿಯ ಆರ್ಥಿಕ ನೆರವು ನೀಡಲಿದೆ ಎಂದು ಮಹಾದೇವಪ್ಪ ಕಮ್ಮಾರ ತಿಳಿಸಿದರು. <br /> <br /> ಸಭೆಗೆ ಸಂಬಂಧಿಸಿದ ವರದಿಯನ್ನು ಓದದೇ ಯಾವುದೋ ಹಳೆಯ ವರದಿಯನ್ನು ಓದಿ ಟೀಕೆಗೆ ಒಳಗಾದ ಅಂಗನವಾಡಿ ಮೇಲ್ವಿಚಾರಕಿ ಕುಲಕರ್ಣಿ ಅವರಿಗೆ, ಅರ್ಧಕ್ಕೆ ನಿಂತ ಅಂಗನವಾಡಿಗಳ ಪಟ್ಟಿಯನ್ನು ತಯಾರಿಸಿ ಕೊಡುವಂತೆ ಕಳೆದ ಸಭೆಯಲ್ಲಿಯೇ ಒತ್ತಾಯಿಸಿದ್ದರೂ ಇನ್ನೂವರೆಗೆ ಕೊಟ್ಟಿಲ್ಲ, ಈ ರೀತಿಯ ನಿರ್ಲಕ್ಷ್ಯ ಸರಿಯಲ್ಲ ಎಂದು ಇಒ ಬೇಸರ ವ್ಯಕ್ತಪಡಿಸಿದರು. <br /> <br /> ರೇಷ್ಮೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ದೊರೆಯುತ್ತಿಲ್ಲ, ಈ ನಿಟ್ಟಿನಲ್ಲಿ ವಿವಿಧ ಪ್ರಚಾರ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಸ್ಥಾಯಿ ಸಮಿತಿ ಅಧ್ಯಕ್ಷ ಪರಸಪ್ಪ ನಾಯಕ ಹಾಗೂ ಇಒ ಸಲಹೆ ನೀಡಿದರು. <br /> ತಾಪಂ ಸದಸ್ಯರಾದ ಲಕ್ಷ್ಮಿದೇವಿ ರಡ್ಡೇರ್, ಲಲಿತವ್ವ ಕೊಟಗಿ, ಫಕೀರಪ್ಪ ತಳವಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>