<p><strong>ನವದೆಹಲಿ (ಐಎಎನ್ಎಸ್):</strong> ವಯಸ್ಕರ ನಡುವೆ ಸಮ್ಮತಿಯ ಸಲಿಂಗರತಿ ಅಪರಾಧ ಎಂದಿರುವ ಸುಪ್ರೀಂ ಕೋರ್ಟ್ನ ತೀರ್ಪು `ನಿರಾಶೆ' ಉಂಟುಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಹೇಳಿದರು.</p>.<p>`ಈ ಹಿಂದೆ ದೆಹಲಿ ಹೈಕೋರ್ಟ್ ಸಲಿಂಗಿಗಳ ಹಕ್ಕು ಕುರಿತಂತೆ ನೀಡಿದ್ದ ತೀರ್ಪಿಗೆ ವಿರುದ್ಧವಾಗಿರುವ ಸುಪ್ರಿಂ ಕೋರ್ಟ್ನ ಈ ತೀರ್ಪಿನಿಂದ ನನಗೆ ಆಶಾಭಂಗವಾಗಿದೆ'ಎಂದು ಅವರು ತಿಳಿಸಿದರು.</p>.<p>ಇದೇ ವೇಳೆ ಅವರು ಸಲಿಂಗರತಿ ಸೇರಿದಂತೆ ಎಲ್ಲ ನಾಗರೀಕರಿಗೆ ಇರುವ ಜೀವನ ಮತ್ತು ಸ್ವಾತಂತ್ರ್ಯದ ಸಾಂವಿಧಾನಿಕ ಭರವಸೆಯನ್ನು ಸಂಸತ್ತು ಎತ್ತಿಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ದೆಹಲಿ ಹೈಕೋರ್ಟ್ 2009ರಲ್ಲಿ ಸಮ್ಮತಿಯ ಸಲಿಂಗರತಿಯನ್ನು ಅಪರಾಧಮುಕ್ತಗೊಳಿಸಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎಸ್.ಜೆ.ಮುಖ್ಯೋಪಾಧ್ಯಾಯ ಅವರ ಪೀಠ ಗುರುವಾರ ವಜಾಗೊಳಿಸಿದೆ. ಇದು ಸಲಿಂಗಿ, ದ್ವಿಲಿಂಗಿ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಅತೃಪ್ತಿಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ವಯಸ್ಕರ ನಡುವೆ ಸಮ್ಮತಿಯ ಸಲಿಂಗರತಿ ಅಪರಾಧ ಎಂದಿರುವ ಸುಪ್ರೀಂ ಕೋರ್ಟ್ನ ತೀರ್ಪು `ನಿರಾಶೆ' ಉಂಟುಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಹೇಳಿದರು.</p>.<p>`ಈ ಹಿಂದೆ ದೆಹಲಿ ಹೈಕೋರ್ಟ್ ಸಲಿಂಗಿಗಳ ಹಕ್ಕು ಕುರಿತಂತೆ ನೀಡಿದ್ದ ತೀರ್ಪಿಗೆ ವಿರುದ್ಧವಾಗಿರುವ ಸುಪ್ರಿಂ ಕೋರ್ಟ್ನ ಈ ತೀರ್ಪಿನಿಂದ ನನಗೆ ಆಶಾಭಂಗವಾಗಿದೆ'ಎಂದು ಅವರು ತಿಳಿಸಿದರು.</p>.<p>ಇದೇ ವೇಳೆ ಅವರು ಸಲಿಂಗರತಿ ಸೇರಿದಂತೆ ಎಲ್ಲ ನಾಗರೀಕರಿಗೆ ಇರುವ ಜೀವನ ಮತ್ತು ಸ್ವಾತಂತ್ರ್ಯದ ಸಾಂವಿಧಾನಿಕ ಭರವಸೆಯನ್ನು ಸಂಸತ್ತು ಎತ್ತಿಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ದೆಹಲಿ ಹೈಕೋರ್ಟ್ 2009ರಲ್ಲಿ ಸಮ್ಮತಿಯ ಸಲಿಂಗರತಿಯನ್ನು ಅಪರಾಧಮುಕ್ತಗೊಳಿಸಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಮತ್ತು ಎಸ್.ಜೆ.ಮುಖ್ಯೋಪಾಧ್ಯಾಯ ಅವರ ಪೀಠ ಗುರುವಾರ ವಜಾಗೊಳಿಸಿದೆ. ಇದು ಸಲಿಂಗಿ, ದ್ವಿಲಿಂಗಿ ಮತ್ತು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಅತೃಪ್ತಿಗೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>