<p>ಬೆಂಗಳೂರು: ಪದ್ಮಶ್ರೀ ವೈದ್ಯಕೀಯ ಪ್ರಯೋಗಾಲಯ ಸಂಸ್ಥೆಯು ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ವೈದ್ಯಕೀಯ ಪ್ರಯೋಗಾಲಯ ಸಪ್ತಾಹದ ಅಂಗವಾಗಿ ರೋಗಿಯ ರಕ್ತನಾಳದಿಂದ ಸುರಕ್ಷಿತ ವಿಧಾನದ ಮೂಲಕ ರಕ್ತ ಪಡೆಯುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.<br /> <br /> ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪ್ರಯೋಗಾಲಯ ವೃತ್ತಿಪರರೊಂದಿಗೆ ಸಮಾಲೋಚಿಸುವುದರ ಜತೆಗೆ, ಈ ಬಗ್ಗೆ ಸೂಕ್ತ ಅರಿವು ಮೂಡಿಸಿದರು.<br /> <br /> ಸಪ್ತಾ ಉದ್ಘಾಟಿಸಿ ಮಾತನಾಡಿದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ರಮಾನಂದಶೆಟ್ಟಿ, ‘ಪ್ರಯೋಗಾಲಯದ ಪರೀಕ್ಷೆಗಳ ಮೇಲೆ ಪರಿಣಾಮ ಬೀರುವ ಬಹುತೇಕ ದೋಷಗಳು ಪರೀಕ್ಷಾಪೂರ್ವ ಹಂತದಲ್ಲಿ ಕಂಡು ಬರುತ್ತವೆ. <br /> <br /> ಏಕೆಂದರೆ, ರಕ್ತವನ್ನು ತೆಗೆದುಕೊಳ್ಳಲು ನಿರ್ದಿಷ್ಟ ಮಾನದಂಡಗಳಿಲ್ಲ. ಇದು ಪ್ರಯೋಗಾಲಯಗಳ ಅಧಿಕಾರ ವ್ಯಾಪ್ತಿಯಲ್ಲಿಲ್ಲದಿದ್ದರೂ ದೋಷಗಳಿಂದ ಪ್ರಯೋಗಾಲಯಗಳು ಅಪಖ್ಯಾತಿಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಪದ್ಮಶ್ರೀ ಸಮೂಹ ವಿದ್ಯಾ ಸಂಸ್ಥೆಗಳ ನಿರ್ದೇಶಕ ರಾಜೇಶ್ ಶೆಣೈ ಕಾರ್ಯಕ್ರಮದ ಬಗ್ಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪದ್ಮಶ್ರೀ ವೈದ್ಯಕೀಯ ಪ್ರಯೋಗಾಲಯ ಸಂಸ್ಥೆಯು ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ವೈದ್ಯಕೀಯ ಪ್ರಯೋಗಾಲಯ ಸಪ್ತಾಹದ ಅಂಗವಾಗಿ ರೋಗಿಯ ರಕ್ತನಾಳದಿಂದ ಸುರಕ್ಷಿತ ವಿಧಾನದ ಮೂಲಕ ರಕ್ತ ಪಡೆಯುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.<br /> <br /> ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪ್ರಯೋಗಾಲಯ ವೃತ್ತಿಪರರೊಂದಿಗೆ ಸಮಾಲೋಚಿಸುವುದರ ಜತೆಗೆ, ಈ ಬಗ್ಗೆ ಸೂಕ್ತ ಅರಿವು ಮೂಡಿಸಿದರು.<br /> <br /> ಸಪ್ತಾ ಉದ್ಘಾಟಿಸಿ ಮಾತನಾಡಿದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ರಮಾನಂದಶೆಟ್ಟಿ, ‘ಪ್ರಯೋಗಾಲಯದ ಪರೀಕ್ಷೆಗಳ ಮೇಲೆ ಪರಿಣಾಮ ಬೀರುವ ಬಹುತೇಕ ದೋಷಗಳು ಪರೀಕ್ಷಾಪೂರ್ವ ಹಂತದಲ್ಲಿ ಕಂಡು ಬರುತ್ತವೆ. <br /> <br /> ಏಕೆಂದರೆ, ರಕ್ತವನ್ನು ತೆಗೆದುಕೊಳ್ಳಲು ನಿರ್ದಿಷ್ಟ ಮಾನದಂಡಗಳಿಲ್ಲ. ಇದು ಪ್ರಯೋಗಾಲಯಗಳ ಅಧಿಕಾರ ವ್ಯಾಪ್ತಿಯಲ್ಲಿಲ್ಲದಿದ್ದರೂ ದೋಷಗಳಿಂದ ಪ್ರಯೋಗಾಲಯಗಳು ಅಪಖ್ಯಾತಿಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಪದ್ಮಶ್ರೀ ಸಮೂಹ ವಿದ್ಯಾ ಸಂಸ್ಥೆಗಳ ನಿರ್ದೇಶಕ ರಾಜೇಶ್ ಶೆಣೈ ಕಾರ್ಯಕ್ರಮದ ಬಗ್ಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>