<p><strong>ಬೆಂಗಳೂರು: </strong>`ಮೆಟ್ರೊ~ ರೈಲು ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇರುವುದರಿಂದ ಭದ್ರತೆಗೆ ಒಂದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದರು.<br /> <br /> `ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ. ಮೆಟ್ರೊ ಬಗ್ಗೆ ಜನರಲ್ಲಿ ನಿರೀಕ್ಷೆ ಹೆಚ್ಚಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಸೂಕ್ತ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ~ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ತಿಳಿಸಿದರು.<br /> <br /> ನೂರು ಮಂದಿ ಅಧಿಕಾರಿಗಳು ಸೇರಿದಂತೆ ಒಂದು ಸಾವಿರ ಜನರನ್ನು ನಿಯೋಜಿಸಲಾಗುತ್ತದೆ. 12 ತುಕಡಿ ಕೆಎಸ್ಆರ್ಪಿ ನಿಯೋಜಿಸಲಾಗುತ್ತದೆ. ಜಂಟಿ ಪೊಲೀಸ್ ಕಮಿಷನರ್ಗಳಾದ ಬಿ. ದಯಾನಂದ ಮತ್ತು ಬಿ.ಎನ್.ಎಸ್.ರೆಡ್ಡಿ ಅವರು ಉಸ್ತುವಾರಿ ವಹಿಸಲಿದ್ದಾರೆ. ಉದ್ಘಾಟನೆಯ ನಂತರವೂ ಭದ್ರತೆ ಮುಂದುವರೆಯಲಿದೆ.<br /> <br /> ಪ್ರತಿ ನಿಲ್ದಾಣಕ್ಕೆ ಎಸ್ಐ, ನಾಲ್ಕು ಮಂದಿ ಮುಖ್ಯ ಕಾನ್ಸ್ಟೇಬಲ್, ಆರು ಮಂದಿ ಕಾನ್ಸ್ಟೇಬಲ್ಗಳನ್ನು ನಿಯೋಜಿಸಲಾಗುತ್ತದೆ. ಭದ್ರತಾ ವ್ಯವಸ್ಥೆಯನ್ನು ಪರಿಸ್ಥಿತಿಗೆ ತಕ್ಕಂತೆ ಬದಲಾಯಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಮೆಟ್ರೊ~ ರೈಲು ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇರುವುದರಿಂದ ಭದ್ರತೆಗೆ ಒಂದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದರು.<br /> <br /> `ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ. ಮೆಟ್ರೊ ಬಗ್ಗೆ ಜನರಲ್ಲಿ ನಿರೀಕ್ಷೆ ಹೆಚ್ಚಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಸೂಕ್ತ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ~ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ತಿಳಿಸಿದರು.<br /> <br /> ನೂರು ಮಂದಿ ಅಧಿಕಾರಿಗಳು ಸೇರಿದಂತೆ ಒಂದು ಸಾವಿರ ಜನರನ್ನು ನಿಯೋಜಿಸಲಾಗುತ್ತದೆ. 12 ತುಕಡಿ ಕೆಎಸ್ಆರ್ಪಿ ನಿಯೋಜಿಸಲಾಗುತ್ತದೆ. ಜಂಟಿ ಪೊಲೀಸ್ ಕಮಿಷನರ್ಗಳಾದ ಬಿ. ದಯಾನಂದ ಮತ್ತು ಬಿ.ಎನ್.ಎಸ್.ರೆಡ್ಡಿ ಅವರು ಉಸ್ತುವಾರಿ ವಹಿಸಲಿದ್ದಾರೆ. ಉದ್ಘಾಟನೆಯ ನಂತರವೂ ಭದ್ರತೆ ಮುಂದುವರೆಯಲಿದೆ.<br /> <br /> ಪ್ರತಿ ನಿಲ್ದಾಣಕ್ಕೆ ಎಸ್ಐ, ನಾಲ್ಕು ಮಂದಿ ಮುಖ್ಯ ಕಾನ್ಸ್ಟೇಬಲ್, ಆರು ಮಂದಿ ಕಾನ್ಸ್ಟೇಬಲ್ಗಳನ್ನು ನಿಯೋಜಿಸಲಾಗುತ್ತದೆ. ಭದ್ರತಾ ವ್ಯವಸ್ಥೆಯನ್ನು ಪರಿಸ್ಥಿತಿಗೆ ತಕ್ಕಂತೆ ಬದಲಾಯಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>