<p><strong>ಶಿವಮೊಗ್ಗ:</strong> ಮಾಧ್ಯಮಗಳ ಮೇಲೆ ವಕೀಲರು ನಡೆಸಿದ ಕೃತ್ಯಯಾವುದೇ ನಾಗರಿಕ ಸಮಾಜ ಒಪ್ಪುವುದಿಲ್ಲ. ಇದೊಂದು ರಾಕ್ಷಸೀ ಕೃತ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎ. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.<br /> <br /> ವಿದ್ಯಾವಂತರೇ ಈ ರೀತಿ ಗೂಂಡಾಗಳಂತೆ ನಡೆದುಕೊಂಡರೆ ರಾಜ್ಯದ ರಕ್ಷಣೆ ಮಾಡುವವರು ಯಾರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.<br /> <br /> ಘಟನೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದ ಅವರು, ಘಟನೆ ಕುರಿತಂತೆ ಸಂಬಂಧಪಟ್ಟ ವಕೀಲರ ಸಂಘಗಳೇ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದರು.<br /> <br /> ಹಾಗೆಯೇ, ಮಾಧ್ಯಮಗಳಲ್ಲಿ ಹಸಿ, ಹಸಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ್ದೂ ಕೂಡ ಅಷ್ಟೆ ಖಂಡನಾರ್ಹ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಪೊಲೀಸರು ಸತ್ತಿದ್ದಾರೆಂದು ಕೆಲ ಮಾಧ್ಯಮಗಳು ತಪ್ಪು ಸುದ್ದಿ ಬಿತ್ತರಿಸಿದವು. <br /> <br /> ಸುಳ್ಳು ಸುದ್ದಿ ಬಿತ್ತರಿಸುವುದು ಮನುಷ್ಯರ ಕೆಲಸ ಅಲ್ಲ ಎಂದ ಅವರು, ಇಂತಹ ಪ್ರವೃತ್ತಿ ವಿರುದ್ಧ ಮಾಧ್ಯಮ ಸಂಘಗಳೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.</p>.<p><strong>ವ್ಯವಸ್ಥಿತ ಪಿತೂರಿ: ಯಡಿಯೂರಪ್ಪ</strong></p>.<p><strong>ಶಿವಮೊಗ್ಗ: </strong>ವಕೀಲರು ಮಾಧ್ಯಮಗಳ ನಡೆಸಿದ ಹಲ್ಲೆ ಘಟನೆಯನ್ನು ಖಂಡಿಸಿದ ಅವರು, ಇದರ ಹಿಂದೆ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವ್ಯವಸ್ಥಿತ ಪಿತೂರಿ ನಡೆದಿದೆ. ತನಿಖೆ ನಂತರ ಇದು ಸ್ಪಷ್ಟವಾಗಲಿದೆ ಎಂದು ಯಡಿಯೂರಪ್ಪ ಶನಿವಾರ ಇಲ್ಲಿ ಹೇಳಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಈಗಾಗಲೇ ಗೃಹ ಸಚಿವ ಆರ್. ಅಶೋಕ್ ಜತೆ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು.<br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮಾಧ್ಯಮಗಳ ಮೇಲೆ ವಕೀಲರು ನಡೆಸಿದ ಕೃತ್ಯಯಾವುದೇ ನಾಗರಿಕ ಸಮಾಜ ಒಪ್ಪುವುದಿಲ್ಲ. ಇದೊಂದು ರಾಕ್ಷಸೀ ಕೃತ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎ. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.<br /> <br /> ವಿದ್ಯಾವಂತರೇ ಈ ರೀತಿ ಗೂಂಡಾಗಳಂತೆ ನಡೆದುಕೊಂಡರೆ ರಾಜ್ಯದ ರಕ್ಷಣೆ ಮಾಡುವವರು ಯಾರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.<br /> <br /> ಘಟನೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದ ಅವರು, ಘಟನೆ ಕುರಿತಂತೆ ಸಂಬಂಧಪಟ್ಟ ವಕೀಲರ ಸಂಘಗಳೇ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದರು.<br /> <br /> ಹಾಗೆಯೇ, ಮಾಧ್ಯಮಗಳಲ್ಲಿ ಹಸಿ, ಹಸಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ್ದೂ ಕೂಡ ಅಷ್ಟೆ ಖಂಡನಾರ್ಹ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಪೊಲೀಸರು ಸತ್ತಿದ್ದಾರೆಂದು ಕೆಲ ಮಾಧ್ಯಮಗಳು ತಪ್ಪು ಸುದ್ದಿ ಬಿತ್ತರಿಸಿದವು. <br /> <br /> ಸುಳ್ಳು ಸುದ್ದಿ ಬಿತ್ತರಿಸುವುದು ಮನುಷ್ಯರ ಕೆಲಸ ಅಲ್ಲ ಎಂದ ಅವರು, ಇಂತಹ ಪ್ರವೃತ್ತಿ ವಿರುದ್ಧ ಮಾಧ್ಯಮ ಸಂಘಗಳೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.</p>.<p><strong>ವ್ಯವಸ್ಥಿತ ಪಿತೂರಿ: ಯಡಿಯೂರಪ್ಪ</strong></p>.<p><strong>ಶಿವಮೊಗ್ಗ: </strong>ವಕೀಲರು ಮಾಧ್ಯಮಗಳ ನಡೆಸಿದ ಹಲ್ಲೆ ಘಟನೆಯನ್ನು ಖಂಡಿಸಿದ ಅವರು, ಇದರ ಹಿಂದೆ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವ್ಯವಸ್ಥಿತ ಪಿತೂರಿ ನಡೆದಿದೆ. ತನಿಖೆ ನಂತರ ಇದು ಸ್ಪಷ್ಟವಾಗಲಿದೆ ಎಂದು ಯಡಿಯೂರಪ್ಪ ಶನಿವಾರ ಇಲ್ಲಿ ಹೇಳಿದರು.<br /> <br /> ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಈಗಾಗಲೇ ಗೃಹ ಸಚಿವ ಆರ್. ಅಶೋಕ್ ಜತೆ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು.<br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>