<p><strong>ಬಾಗಲಕೋಟೆ:</strong> ‘ಕಬ್ಬು ಬೆಳೆಗೆ ಯೋಗ್ಯ ಬೆಲೆ ನೀಡುವಂತೆ ಒತ್ತಾಯಿಸಿ ಇದೇ 4 ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.<br /> <br /> ‘ಬಾಗಲಕೋಟೆ, ಬೆಳಗಾವಿ, ವಿಜಾಪುರ, ಗದಗ ಮತ್ತು ಧಾರವಾಡ ಜಿಲ್ಲೆಗಳ ಸಾವಿರಾರು ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.<br /> <br /> ‘ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಅಂದು ನಡೆಯುವ ರೈತರ ಹೋರಾಟ ಉಗ್ರ ಸ್ವರೂಪ ತಾಳಲಿದೆ’ ಎಂದು ಹೇಳಿದರು.<br /> <br /> ‘ಎರಡು ತಿಂಗಳಿಂದ ರೈತರ ನಡೆಸುತ್ತಿರುವ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಸರ್ಕಾರ ಕೆಲವು ಒತ್ತಡಗಳಲ್ಲಿ ಸಿಲುಕಿ ಹಗ್ಗಜಗ್ಗಾಟದಲ್ಲಿ ತೊಡಗಿದೆ’ ಎಂದರು.<br /> <br /> ‘ಕಾರ್ಖಾನೆಗಳು ₨2500 ಮತ್ತು ಸರ್ಕಾರ ಪ್ರೋತ್ಸಾಹದ ಧನವಾಗಿ ₨ 1000 ಬೆಂಬಲ ಬೆಲೆ ನೀಡುವ ಮೂಲಕ ಕಬ್ಬು ಬೆಳೆ ರೈತರನ್ನು ಸಂಕಷ್ಟವನ್ನು ದೂರ ಮಾಡಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕಬ್ಬು ಅಧಿನಿಯಮ 2013ರ ಎಸ್ಎಪಿ ಕಾಯ್ದೆಯನ್ನು ಮರುಪರಿಶೀಲನೆ ಮಾಡಿ ತಿದ್ದುಪಡೆ ಮಾಡಬೇಕಾಗಿದೆ. ಕಾರ್ಖಾನೆ ಮಾಲೀಕರು ಮತ್ತು ತಜ್ಞರು ಹೇಳುವ ಪ್ರಕಾರ ಪ್ರತಿ ಟನ್ ಕಬ್ಬಿಗೆ ₨ 4,500 ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಯಾಗುತ್ತಿದೆ. 14 ತಿಂಗಳ ಕಾಲ ಸಾಲ ಮಾಡಿ ಕಬ್ಬು ಬೆಳೆಯುವ ರೈತನಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ’ ಎಂದರು.<br /> <br /> <strong>ಬ್ಲ್ಯಾಕ್ ಮೇಲ್: </strong>‘ಕೆಲವೊಂದು ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ ₨ 2000 ಕ್ಕಿಂತ ಹೆಚ್ಚಿಗೆ ಹಣವನ್ನು ರೈತರಿಗೆ ಕೊಡಲಾಗುವುದಿಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕುವ ಮೂಲಕ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿರುವುದು ಖಂಡನೀಯ’ ಎಂದರು.<br /> <br /> ‘ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಳ್ಳುವುದು ಎಷ್ಟು ಸೂಕ್ತ. ಸರ್ಕಾರಕ್ಕೆ ಸವಾಲು ಹಾಕುವ ಹೇಳಿಕೆಗಳನ್ನು ಕೊಡುತ್ತಿರುವ ಕಾರ್ಖಾನೆಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಪಡಿಸಿದರು.<br /> ‘ಬಿಜೆಪಿ ಶಾಸಕ ಉಮೇಶ ಕತ್ತಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ ಹೇಳಿಕೆ ನೀಡುತ್ತಿರುವುದು ಅಷ್ಟೊಂದು ಸಮಂಜಸವಲ್ಲ. ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಪ್ರತಿಭಟಿಸುವ ಸಂದರ್ಭದಲ್ಲಿ ಈ ರೀತಿ ರಾಜಕಾರಣ ಮಾಡುವುದು ಅವರಿಗೆ ರೂಢಿಯಾಗಿದೆ’ ಎಂದರು.<br /> <br /> ‘ಕಾರ್ಖಾನೆಯವರು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರೈತರ ಧ್ವನಿಯನ್ನು ಅಡಗಿಸುತ್ತಿದ್ದಾರೆ. ರೈತರನ್ನು ಕಡೆಗಣಿಸಿದರೆ ಕಾರ್ಖಾನೆಗಳು ನಷ್ಟ ಅನುಭವಿಸಬೇಕಾಗುತ್ತದೆ’ ಎಂದರು.<br /> <br /> <strong>ಆತ್ಮಹತ್ಯೆ ಬೇಡ: ‘</strong>ಸಾಲಕ್ಕೆ ಅಂಜಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ರೈತರು ಆತ್ಮಹತ್ಯೆ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಇರಬೇಕು’ ಎಂದು ತಿಳಿಸಿದರು. <br /> <br /> ‘ಕೃಷಿ ಬೆಲೆ ಆಯೋಗವನ್ನು ಕೂಡಲೇ ಜಾರಿಗೆ ತರಬೇಕು’ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಸಿದರು. ರೈತ ಮುಖಂಡ ಸುಭಾಸ ಶಿರಬೂರು, ಶಶಿಕಾಂತ ಬಾಳಿಕಾಯಿ, ಮಲ್ಲಪ್ಪ ಕೋಮಾರ, ಹನಮಂತ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಕಬ್ಬು ಬೆಳೆಗೆ ಯೋಗ್ಯ ಬೆಲೆ ನೀಡುವಂತೆ ಒತ್ತಾಯಿಸಿ ಇದೇ 4 ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.<br /> <br /> ‘ಬಾಗಲಕೋಟೆ, ಬೆಳಗಾವಿ, ವಿಜಾಪುರ, ಗದಗ ಮತ್ತು ಧಾರವಾಡ ಜಿಲ್ಲೆಗಳ ಸಾವಿರಾರು ರೈತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.<br /> <br /> ‘ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸದೇ ಇದ್ದರೆ ಅಂದು ನಡೆಯುವ ರೈತರ ಹೋರಾಟ ಉಗ್ರ ಸ್ವರೂಪ ತಾಳಲಿದೆ’ ಎಂದು ಹೇಳಿದರು.<br /> <br /> ‘ಎರಡು ತಿಂಗಳಿಂದ ರೈತರ ನಡೆಸುತ್ತಿರುವ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಸರ್ಕಾರ ಕೆಲವು ಒತ್ತಡಗಳಲ್ಲಿ ಸಿಲುಕಿ ಹಗ್ಗಜಗ್ಗಾಟದಲ್ಲಿ ತೊಡಗಿದೆ’ ಎಂದರು.<br /> <br /> ‘ಕಾರ್ಖಾನೆಗಳು ₨2500 ಮತ್ತು ಸರ್ಕಾರ ಪ್ರೋತ್ಸಾಹದ ಧನವಾಗಿ ₨ 1000 ಬೆಂಬಲ ಬೆಲೆ ನೀಡುವ ಮೂಲಕ ಕಬ್ಬು ಬೆಳೆ ರೈತರನ್ನು ಸಂಕಷ್ಟವನ್ನು ದೂರ ಮಾಡಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕಬ್ಬು ಅಧಿನಿಯಮ 2013ರ ಎಸ್ಎಪಿ ಕಾಯ್ದೆಯನ್ನು ಮರುಪರಿಶೀಲನೆ ಮಾಡಿ ತಿದ್ದುಪಡೆ ಮಾಡಬೇಕಾಗಿದೆ. ಕಾರ್ಖಾನೆ ಮಾಲೀಕರು ಮತ್ತು ತಜ್ಞರು ಹೇಳುವ ಪ್ರಕಾರ ಪ್ರತಿ ಟನ್ ಕಬ್ಬಿಗೆ ₨ 4,500 ತೆರಿಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಯಾಗುತ್ತಿದೆ. 14 ತಿಂಗಳ ಕಾಲ ಸಾಲ ಮಾಡಿ ಕಬ್ಬು ಬೆಳೆಯುವ ರೈತನಿಗೆ ಪ್ರೋತ್ಸಾಹ ಧನ ನೀಡಲು ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ’ ಎಂದರು.<br /> <br /> <strong>ಬ್ಲ್ಯಾಕ್ ಮೇಲ್: </strong>‘ಕೆಲವೊಂದು ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ ₨ 2000 ಕ್ಕಿಂತ ಹೆಚ್ಚಿಗೆ ಹಣವನ್ನು ರೈತರಿಗೆ ಕೊಡಲಾಗುವುದಿಲ್ಲ ಎಂದು ಸರ್ಕಾರಕ್ಕೆ ಸವಾಲು ಹಾಕುವ ಮೂಲಕ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿರುವುದು ಖಂಡನೀಯ’ ಎಂದರು.<br /> <br /> ‘ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸದ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಳ್ಳುವುದು ಎಷ್ಟು ಸೂಕ್ತ. ಸರ್ಕಾರಕ್ಕೆ ಸವಾಲು ಹಾಕುವ ಹೇಳಿಕೆಗಳನ್ನು ಕೊಡುತ್ತಿರುವ ಕಾರ್ಖಾನೆಗಳ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಪಡಿಸಿದರು.<br /> ‘ಬಿಜೆಪಿ ಶಾಸಕ ಉಮೇಶ ಕತ್ತಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ ಹೇಳಿಕೆ ನೀಡುತ್ತಿರುವುದು ಅಷ್ಟೊಂದು ಸಮಂಜಸವಲ್ಲ. ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಪ್ರತಿಭಟಿಸುವ ಸಂದರ್ಭದಲ್ಲಿ ಈ ರೀತಿ ರಾಜಕಾರಣ ಮಾಡುವುದು ಅವರಿಗೆ ರೂಢಿಯಾಗಿದೆ’ ಎಂದರು.<br /> <br /> ‘ಕಾರ್ಖಾನೆಯವರು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರೈತರ ಧ್ವನಿಯನ್ನು ಅಡಗಿಸುತ್ತಿದ್ದಾರೆ. ರೈತರನ್ನು ಕಡೆಗಣಿಸಿದರೆ ಕಾರ್ಖಾನೆಗಳು ನಷ್ಟ ಅನುಭವಿಸಬೇಕಾಗುತ್ತದೆ’ ಎಂದರು.<br /> <br /> <strong>ಆತ್ಮಹತ್ಯೆ ಬೇಡ: ‘</strong>ಸಾಲಕ್ಕೆ ಅಂಜಿ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ರೈತರು ಆತ್ಮಹತ್ಯೆ ಮಾಡಿಕೊಳ್ಳದೇ ಆತ್ಮವಿಶ್ವಾಸದಿಂದ ಇರಬೇಕು’ ಎಂದು ತಿಳಿಸಿದರು. <br /> <br /> ‘ಕೃಷಿ ಬೆಲೆ ಆಯೋಗವನ್ನು ಕೂಡಲೇ ಜಾರಿಗೆ ತರಬೇಕು’ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಸಿದರು. ರೈತ ಮುಖಂಡ ಸುಭಾಸ ಶಿರಬೂರು, ಶಶಿಕಾಂತ ಬಾಳಿಕಾಯಿ, ಮಲ್ಲಪ್ಪ ಕೋಮಾರ, ಹನಮಂತ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>