<p><strong>ಬೆಂಗಳೂರು: </strong>`ತಪ್ಪು ದಾಖಲೆ ನೀಡಿರುವುದಾಗಿ ಅಂಗವಿಕಲ ಕ್ರೀಡಾಪಟು ಪಿ.ಸೋಮಶೇಖರ್ ಒಪ್ಪಿಕೊಂಡಿದ್ದಾರೆ. ಹಾಗಾಗಿ ಏಕಲವ್ಯ ಪ್ರಶಸ್ತಿ ಬೇಡವೆಂದು ಅವರು ಇಲಾಖೆಗೆ ಪತ್ರ ಬರೆದಿದ್ದಾರೆ~ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ ಹೇಳಿದ್ದಾರೆ. <br /> <br /> ಆದರೆ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್) ಹಾಗೂ ಎಸ್. ನವೀನ್ (ಕರಾಟೆ) ಇನ್ನೂ ಸೂಕ್ತ ದಾಖಲೆ ನೀಡಿಲ್ಲ. ಹಾಗೂ ದಾಖಲೆಗಳ ಪರಿಶೀಲನೆ ವೇಳೆ ಅವರು ಹಾಜರಿರಲಿಲ್ಲ ಎಂದು ಪೆರುಮಾಳ್ ಮಂಗಳವಾರ `ಪ್ರಜಾವಾಣಿ~ಗೆ ತಿಳಿಸಿದರು. <br /> <br /> `ಇಲಾಖೆಯ ನಿರ್ದೇಶಕ ಸುರೇಶ್ ಸದ್ಯದಲ್ಲೇ ಪರಿಶೀಲನಾ ಸಮಿತಿ ಸಭೆ ಕರೆಯಲಿದ್ದಾರೆ. ಈ ಸಂದರ್ಭದಲ್ಲಿ ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ರೋಷನ್ ಹಾಗೂ ನವೀನ್ಗೆ ಸೂಚಿಸಲಾಗಿದೆ. ಆಕಸ್ಮಾತ್ ಅವರು ಸರಿಯಾದ ದಾಖಲೆ ನೀಡದಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು~ ಎಂದು ಅವರು ಹೇಳಿದ್ದಾರೆ. <br /> <br /> ಇಲಾಖೆಯು ಮೊದಲು ಪ್ರಕಟಿಸಿದ ಏಕಲವ್ಯ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ತಪ್ಪು ದಾಖಲೆ ನೀಡಿರುವುದಾಗಿ ಅಂಗವಿಕಲ ಕ್ರೀಡಾಪಟು ಪಿ.ಸೋಮಶೇಖರ್ ಒಪ್ಪಿಕೊಂಡಿದ್ದಾರೆ. ಹಾಗಾಗಿ ಏಕಲವ್ಯ ಪ್ರಶಸ್ತಿ ಬೇಡವೆಂದು ಅವರು ಇಲಾಖೆಗೆ ಪತ್ರ ಬರೆದಿದ್ದಾರೆ~ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ ಹೇಳಿದ್ದಾರೆ. <br /> <br /> ಆದರೆ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್) ಹಾಗೂ ಎಸ್. ನವೀನ್ (ಕರಾಟೆ) ಇನ್ನೂ ಸೂಕ್ತ ದಾಖಲೆ ನೀಡಿಲ್ಲ. ಹಾಗೂ ದಾಖಲೆಗಳ ಪರಿಶೀಲನೆ ವೇಳೆ ಅವರು ಹಾಜರಿರಲಿಲ್ಲ ಎಂದು ಪೆರುಮಾಳ್ ಮಂಗಳವಾರ `ಪ್ರಜಾವಾಣಿ~ಗೆ ತಿಳಿಸಿದರು. <br /> <br /> `ಇಲಾಖೆಯ ನಿರ್ದೇಶಕ ಸುರೇಶ್ ಸದ್ಯದಲ್ಲೇ ಪರಿಶೀಲನಾ ಸಮಿತಿ ಸಭೆ ಕರೆಯಲಿದ್ದಾರೆ. ಈ ಸಂದರ್ಭದಲ್ಲಿ ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ರೋಷನ್ ಹಾಗೂ ನವೀನ್ಗೆ ಸೂಚಿಸಲಾಗಿದೆ. ಆಕಸ್ಮಾತ್ ಅವರು ಸರಿಯಾದ ದಾಖಲೆ ನೀಡದಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು~ ಎಂದು ಅವರು ಹೇಳಿದ್ದಾರೆ. <br /> <br /> ಇಲಾಖೆಯು ಮೊದಲು ಪ್ರಕಟಿಸಿದ ಏಕಲವ್ಯ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>