<p><strong>ಬೆಂಗಳೂರು: </strong>ರಾಜ್ಯಸಭಾ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ.ಜೆ.ಪುಟ್ಟಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಅವರ ಸೂಚನಾ ಪತ್ರಕ್ಕೆ ಸಹಿ ಮಾಡಿರುವ ಶಾಸಕ ಅರವಿಂದ ಲಿಂಬಾವಳಿ ಅದನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಚುನಾವಣಾಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಮುಂದೆ ಪ್ರಮಾಣ ಪತ್ರವನ್ನೂ ಸಲ್ಲಿಸಿದ್ದಾರೆ.<br /> <br /> ಈ ಮೂಲಕ ಪುಟ್ಟಸ್ವಾಮಿ ಅವರ ನಾಮಪತ್ರ ಸಿಂಧು ಆಗುತ್ತದೊ ಇಲ್ಲವೊ ಎಂಬುದು ಕುತೂಹಲ ಮೂಡಿಸಿದ್ದು, ಲಿಂಬಾವಳಿ ಎತ್ತಿರುವ ತಕರಾರಿಗೆ ಪುಟ್ಟಸ್ವಾಮಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೌಖಿಕವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ಅದನ್ನು ಲಿಖಿತ ರೂಪದಲ್ಲಿ ನೀಡುವಂತೆ ಇಬ್ಬರಿಗೂ ಓಂಪ್ರಕಾಶ್ ಸೂಚಿಸಿದ್ದಾರೆ.<br /> <br /> ಬುಧವಾರ ಮಧ್ಯಾಹ್ನ 2.30ಕ್ಕೆ ಮತ್ತೆ ಈ ಕುರಿತು ವಿಚಾರಣೆ ನಡೆಯಲಿದ್ದು, ಎರಡೂ ಕಡೆಯವರ ಅಹವಾಲುಗಳನ್ನು ಆಲಿಸಲಿದ್ದಾರೆ. `ಬಿಜೆಪಿಯ ಅಧಿಕೃತ ಅಭ್ಯರ್ಥಿಯೆಂದು ತಿಳಿದು ಪುಟ್ಟಸ್ವಾಮಿಯ ಸೂಚನಾ ಪತ್ರಕ್ಕೆ ಸಹಿ ಮಾಡಲಾಯಿತು. ಆದರೆ, ತದನಂತರ ಅವರು ಬಂಡಾಯ ಅಭ್ಯರ್ಥಿ ಎಂಬುದು ಗೊತ್ತಾಯಿತು. ಹೀಗಾಗಿ ಸೂಚನಾ ಪತ್ರಕ್ಕೆ ಮಾಡಿದ್ದ ಸಹಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ~ ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ.<br /> <br /> ಈ ನಡುವೆ ಜೆಡಿಎಸ್ನ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪುಟ್ಟಸ್ವಾಮಿ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಪುಟ್ಟಸ್ವಾಮಿ ಅವರು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದು, ಆ ಹುದ್ದೆಗೆ ರಾಜೀನಾಮೆ ನೀಡದೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವುದು ಸರಿಯಲ್ಲ ಎಂಬುದು ಅವರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯಸಭಾ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ.ಜೆ.ಪುಟ್ಟಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಅವರ ಸೂಚನಾ ಪತ್ರಕ್ಕೆ ಸಹಿ ಮಾಡಿರುವ ಶಾಸಕ ಅರವಿಂದ ಲಿಂಬಾವಳಿ ಅದನ್ನು ಹಿಂದಕ್ಕೆ ಪಡೆಯಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಚುನಾವಣಾಧಿಕಾರಿಯೂ ಆದ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಮುಂದೆ ಪ್ರಮಾಣ ಪತ್ರವನ್ನೂ ಸಲ್ಲಿಸಿದ್ದಾರೆ.<br /> <br /> ಈ ಮೂಲಕ ಪುಟ್ಟಸ್ವಾಮಿ ಅವರ ನಾಮಪತ್ರ ಸಿಂಧು ಆಗುತ್ತದೊ ಇಲ್ಲವೊ ಎಂಬುದು ಕುತೂಹಲ ಮೂಡಿಸಿದ್ದು, ಲಿಂಬಾವಳಿ ಎತ್ತಿರುವ ತಕರಾರಿಗೆ ಪುಟ್ಟಸ್ವಾಮಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೌಖಿಕವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ಅದನ್ನು ಲಿಖಿತ ರೂಪದಲ್ಲಿ ನೀಡುವಂತೆ ಇಬ್ಬರಿಗೂ ಓಂಪ್ರಕಾಶ್ ಸೂಚಿಸಿದ್ದಾರೆ.<br /> <br /> ಬುಧವಾರ ಮಧ್ಯಾಹ್ನ 2.30ಕ್ಕೆ ಮತ್ತೆ ಈ ಕುರಿತು ವಿಚಾರಣೆ ನಡೆಯಲಿದ್ದು, ಎರಡೂ ಕಡೆಯವರ ಅಹವಾಲುಗಳನ್ನು ಆಲಿಸಲಿದ್ದಾರೆ. `ಬಿಜೆಪಿಯ ಅಧಿಕೃತ ಅಭ್ಯರ್ಥಿಯೆಂದು ತಿಳಿದು ಪುಟ್ಟಸ್ವಾಮಿಯ ಸೂಚನಾ ಪತ್ರಕ್ಕೆ ಸಹಿ ಮಾಡಲಾಯಿತು. ಆದರೆ, ತದನಂತರ ಅವರು ಬಂಡಾಯ ಅಭ್ಯರ್ಥಿ ಎಂಬುದು ಗೊತ್ತಾಯಿತು. ಹೀಗಾಗಿ ಸೂಚನಾ ಪತ್ರಕ್ಕೆ ಮಾಡಿದ್ದ ಸಹಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ~ ಎಂದು ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಲಿಂಬಾವಳಿ ತಿಳಿಸಿದ್ದಾರೆ.<br /> <br /> ಈ ನಡುವೆ ಜೆಡಿಎಸ್ನ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪುಟ್ಟಸ್ವಾಮಿ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಪುಟ್ಟಸ್ವಾಮಿ ಅವರು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದು, ಆ ಹುದ್ದೆಗೆ ರಾಜೀನಾಮೆ ನೀಡದೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವುದು ಸರಿಯಲ್ಲ ಎಂಬುದು ಅವರ ವಾದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>