<p>ಕೊಪ್ಪಳ: ಐಟಿಐಯನ್ನು ಪದವಿಪೂರ್ವ ಕೋರ್ಸ್ಗೆ ಸಮಾನದ ಅರ್ಹತೆ ಎಂಬುದಾಗಿ ಪರಿಗಣಿಸಬೇಕು, ಸೆಮಿಸ್ಟರ್ ಪದ್ಧತಿಯನ್ನು ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.<br /> <br /> ಗದಗ ರಸ್ತೆಯ ಖಾಸಗಿ ಐಟಿಐ ಕಾಲೇಜಿನಿಂದ ಅಶೋಕ ವೃತ್ತದ ವರೆಗೆ ಮೆರವಣಿಗೆ ನಡೆಸಿದರು.<br /> ಸೆಮಿಸ್ಟರ್ ಪದ್ಧತಿಯಲ್ಲಿ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಅಲ್ಲದೇ, ಈ ಪದ್ಧತಿ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪದ್ಧತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪಿಯುಸಿ ಮತ್ತು ಐಟಿಐಗೆ ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಎರಡೂ ಕೋರ್ಸ್ಗಳ ಅವಧಿ ಎರಡು ವರ್ಷಗಳೇ ಆಗಿದೆ. ಈ ಹಿನ್ನೆಲೆಯಲ್ಲಿ ಐಟಿಐಯನ್ನು ಪಿಯುಸಿಗೆ ಸಮಾನವಾದ ಅರ್ಹತೆ ಎಂದು ಪರಿಗಣಿಸಿದರೆ, ಐಟಿಐ ಉತ್ತೀರ್ಣರಾದವರು ಉನ್ನತ ವ್ಯಾಸಂಗ ಕೈಗೊಳ್ಳಬಹುದಾಗಿದೆ ಎಂದೂ ಮನವಿ ಮಾಡಿದರು.<br /> <br /> ಬಸ್ ಪಾಸ್ ನೀಡಲು ಇರುವ ವಯೋಮಿತಿಯನ್ನು 42 ವರ್ಷಕ್ಕೆ ಹೆಚ್ಚಿಸಬೇಕು, ಲೈನ್ಮೆನ್ ಹುದ್ದೆಗಳಿಗೆ ಐಟಿಐ ಉತ್ತೀರ್ಣರಾದವರನ್ನು ಮಾತ್ರ ಪರಿಗಣಿಸಬೇಕು ಎಂದು ಆಗ್ರಹಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಂಘಟನೆಯ ನಗರ ಕಾರ್ಯದರ್ಶಿ ಸಂಕೇತ ಪಾಟೀಲ, ರಾಕೇಶ ಪಾನಘಂಟಿ, ಅಮಿತ್ ಕಂಪ್ಲೀಕರ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಐಟಿಐಯನ್ನು ಪದವಿಪೂರ್ವ ಕೋರ್ಸ್ಗೆ ಸಮಾನದ ಅರ್ಹತೆ ಎಂಬುದಾಗಿ ಪರಿಗಣಿಸಬೇಕು, ಸೆಮಿಸ್ಟರ್ ಪದ್ಧತಿಯನ್ನು ರದ್ದುಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.<br /> <br /> ಗದಗ ರಸ್ತೆಯ ಖಾಸಗಿ ಐಟಿಐ ಕಾಲೇಜಿನಿಂದ ಅಶೋಕ ವೃತ್ತದ ವರೆಗೆ ಮೆರವಣಿಗೆ ನಡೆಸಿದರು.<br /> ಸೆಮಿಸ್ಟರ್ ಪದ್ಧತಿಯಲ್ಲಿ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಅಲ್ಲದೇ, ಈ ಪದ್ಧತಿ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪದ್ಧತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪಿಯುಸಿ ಮತ್ತು ಐಟಿಐಗೆ ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಎರಡೂ ಕೋರ್ಸ್ಗಳ ಅವಧಿ ಎರಡು ವರ್ಷಗಳೇ ಆಗಿದೆ. ಈ ಹಿನ್ನೆಲೆಯಲ್ಲಿ ಐಟಿಐಯನ್ನು ಪಿಯುಸಿಗೆ ಸಮಾನವಾದ ಅರ್ಹತೆ ಎಂದು ಪರಿಗಣಿಸಿದರೆ, ಐಟಿಐ ಉತ್ತೀರ್ಣರಾದವರು ಉನ್ನತ ವ್ಯಾಸಂಗ ಕೈಗೊಳ್ಳಬಹುದಾಗಿದೆ ಎಂದೂ ಮನವಿ ಮಾಡಿದರು.<br /> <br /> ಬಸ್ ಪಾಸ್ ನೀಡಲು ಇರುವ ವಯೋಮಿತಿಯನ್ನು 42 ವರ್ಷಕ್ಕೆ ಹೆಚ್ಚಿಸಬೇಕು, ಲೈನ್ಮೆನ್ ಹುದ್ದೆಗಳಿಗೆ ಐಟಿಐ ಉತ್ತೀರ್ಣರಾದವರನ್ನು ಮಾತ್ರ ಪರಿಗಣಿಸಬೇಕು ಎಂದು ಆಗ್ರಹಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಂಘಟನೆಯ ನಗರ ಕಾರ್ಯದರ್ಶಿ ಸಂಕೇತ ಪಾಟೀಲ, ರಾಕೇಶ ಪಾನಘಂಟಿ, ಅಮಿತ್ ಕಂಪ್ಲೀಕರ್ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>