<p>ಬಾಗೇಪಲ್ಲಿ: ಬೆಂಗಳೂರು ವಿಶ್ವವಿದ್ಯಾನಿಲಯದ ಪದವಿಯ ಪ್ರಥಮ, ತೃತೀಯ ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ತರಗತಿ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ನೂರಾರು ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸೇರಿದರು. ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಿರುವ ವಿಶ್ವವಿದ್ಯಾಲಯ ಕ್ರಮದ ವಿರುದ್ಧ ಧಿಕ್ಕಾರ ಕೂಗಿದರು.<br /> <br /> ವಿದ್ಯಾರ್ಥಿ ಮುಖಂಡ ಎ.ಶಂಕರಪ್ರಸಾದ್ ಮಾತನಾಡಿ, ಪ್ರಥಮ ಬಿಎ, ಬಿಕಾಂ, ಬಿಬಿಎಂ ತರಗತಿಗಳಿಗೆ ದಾಖಲಾತಿ ನಡೆದು ಕೇವಲ ಒಂದು ತಿಂಗಳು ಕಳೆದಿದೆ. ಕನ್ನಡ ಹಾಗೂ ಇಂಗ್ಲಿಷ್ ಪಠ್ಯಗಳು ಒಂದೂವರೆ ತಿಂಗಳ ನಂತರ ವಿದ್ಯಾರ್ಥಿಗಳಿಗೆ ಲಭಿಸಿದೆ. <br /> <br /> ಹೀಗಾಗಿ ಸೂಕ್ತ ರೀತಿಯಲ್ಲಿ ಅಭ್ಯಾಸ ಮಾಡಲು ಅವಕಾಶ ಸಿಕ್ಕಿಲ್ಲ. ವಿದ್ಯಾರ್ಥಿಗಳ ಸಂಕಷ್ಟ ಪರಿಗಣಿಸದೆ ಏಕಪಕ್ಷೀಯವಾಗಿ ಬೆಂಗಳೂರು ವಿ.ವಿ ತೀರ್ಮಾನ ತೆಗೆದುಕೊಂಡಿದೆ ಎಂದು ದೂರಿದರು.<br /> <br /> ಸೆಮಿಸ್ಟರ್ ಪರೀಕ್ಷೆಗಳನ್ನು ಕನಿಷ್ಠ ಒಂದು ತಿಂಗಳ ಮಟ್ಟಿಗೆ ಮುಂದೂಡಿ ಪರಿಕ್ಷಾ ಸಿದ್ಧತೆಗೆ ಅವಕಾಶ ಮಾಡಿಕೊಡಬೇಕು ಎಂಬ ಮನವಿಯನ್ನು ಕುಲಸಚಿವರಿಗೆ ತಹಶೀಲ್ದಾರ್ ಮೂಲಕ ಸಲ್ಲಿಸಿದರು.<br /> <br /> ವಿದ್ಯಾರ್ಥಿ ಮುಖಂಡರಾದ ಎ.ರೆಡ್ಡಪ್ಪ, ಎಂ.ಆರ್.ಶ್ರೀನಿವಾಸ್, ಎಚ್.ಎನ್.ಸಂತೋಷ, ಈರಪ್ಪ, ಇ.ಮಧು, ಬಿ.ಎನ್.ನಂದಿನಿ, ಶೈಲಜ ಮತ್ತಿತರರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಬೆಂಗಳೂರು ವಿಶ್ವವಿದ್ಯಾನಿಲಯದ ಪದವಿಯ ಪ್ರಥಮ, ತೃತೀಯ ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ತರಗತಿ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.<br /> <br /> ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹೊರಟ ನೂರಾರು ವಿದ್ಯಾರ್ಥಿಗಳು ಮುಖ್ಯ ಬೀದಿಗಳಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸೇರಿದರು. ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಿರುವ ವಿಶ್ವವಿದ್ಯಾಲಯ ಕ್ರಮದ ವಿರುದ್ಧ ಧಿಕ್ಕಾರ ಕೂಗಿದರು.<br /> <br /> ವಿದ್ಯಾರ್ಥಿ ಮುಖಂಡ ಎ.ಶಂಕರಪ್ರಸಾದ್ ಮಾತನಾಡಿ, ಪ್ರಥಮ ಬಿಎ, ಬಿಕಾಂ, ಬಿಬಿಎಂ ತರಗತಿಗಳಿಗೆ ದಾಖಲಾತಿ ನಡೆದು ಕೇವಲ ಒಂದು ತಿಂಗಳು ಕಳೆದಿದೆ. ಕನ್ನಡ ಹಾಗೂ ಇಂಗ್ಲಿಷ್ ಪಠ್ಯಗಳು ಒಂದೂವರೆ ತಿಂಗಳ ನಂತರ ವಿದ್ಯಾರ್ಥಿಗಳಿಗೆ ಲಭಿಸಿದೆ. <br /> <br /> ಹೀಗಾಗಿ ಸೂಕ್ತ ರೀತಿಯಲ್ಲಿ ಅಭ್ಯಾಸ ಮಾಡಲು ಅವಕಾಶ ಸಿಕ್ಕಿಲ್ಲ. ವಿದ್ಯಾರ್ಥಿಗಳ ಸಂಕಷ್ಟ ಪರಿಗಣಿಸದೆ ಏಕಪಕ್ಷೀಯವಾಗಿ ಬೆಂಗಳೂರು ವಿ.ವಿ ತೀರ್ಮಾನ ತೆಗೆದುಕೊಂಡಿದೆ ಎಂದು ದೂರಿದರು.<br /> <br /> ಸೆಮಿಸ್ಟರ್ ಪರೀಕ್ಷೆಗಳನ್ನು ಕನಿಷ್ಠ ಒಂದು ತಿಂಗಳ ಮಟ್ಟಿಗೆ ಮುಂದೂಡಿ ಪರಿಕ್ಷಾ ಸಿದ್ಧತೆಗೆ ಅವಕಾಶ ಮಾಡಿಕೊಡಬೇಕು ಎಂಬ ಮನವಿಯನ್ನು ಕುಲಸಚಿವರಿಗೆ ತಹಶೀಲ್ದಾರ್ ಮೂಲಕ ಸಲ್ಲಿಸಿದರು.<br /> <br /> ವಿದ್ಯಾರ್ಥಿ ಮುಖಂಡರಾದ ಎ.ರೆಡ್ಡಪ್ಪ, ಎಂ.ಆರ್.ಶ್ರೀನಿವಾಸ್, ಎಚ್.ಎನ್.ಸಂತೋಷ, ಈರಪ್ಪ, ಇ.ಮಧು, ಬಿ.ಎನ್.ನಂದಿನಿ, ಶೈಲಜ ಮತ್ತಿತರರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>