<p><strong>ನವದೆಹಲಿ (ಪಿಟಿಐ): </strong>ಪಂದ್ಯದ ಮಹತ್ವದ ಘಟ್ಟದಲ್ಲಿ ವೀರೇಂದ್ರ ಸೆಹ್ವಾಗ್ ಅವರ ವಿಕೆಟ್ ದೊರೆತದ್ದು ನಮ್ಮ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು ಎಂದು ಪುಣೆ ವಾರಿಯರ್ಸ್ ತಂಡದ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.<br /> <br /> ನವದೆಹಲಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್ 20 ರನ್ಗಳಿಂದ ಡೆಲ್ಲಿ ಡೇರ್ಡೆವಿಲ್ಸ್ ವಿರುದ್ಧ ಜಯ ಪಡೆದಿತ್ತು. ಗೆಲುವಿಗೆ 193 ರನ್ಗಳ ಗುರಿ ಬೆನ್ನಟ್ಟಿದ್ದ ಡೇರ್ಡೆವಿಲ್ಸ್ 20 ಓವರ್ಗಳಲ್ಲಿ 7 ವಿಕೆಟ್ಗೆ 172 ರನ್ ಗಳಿಸಲು ಶಕ್ತವಾಗಿತ್ತು. 32 ಎಸೆತಗಳಲ್ಲಿ 57 ರನ್ ಗಳಿಸಿದ್ದ ಸೆಹ್ವಾಗ್ ಅವರು ಮುರಳಿ ಕಾರ್ತಿಕ್ಗೆ ವಿಕೆಟ್ ಒಪ್ಪಿಸಿದ್ದರು.<br /> <br /> `ಸೆಹ್ವಾಗ್ ದೊಡ್ಡ ಹೊಡೆತಗಳ ಮೂಲಕ ಎಲ್ಲ ಬೌಲರ್ಗಳ ಮೇಲೂ ಪ್ರಭುತ್ವ ಸಾಧಿಸಿದ್ದರು. ಅವರು ಔಟಾದ ಬಳಿಕವಷ್ಟೇ ನಾವು ಪಂದ್ಯದ ಮೇಲೆ ಹಿಡಿತ ಸಾಧಿಸಿದೆವು~ ಎಂದು ಗಂಗೂಲಿ ನುಡಿದಿದ್ದಾರೆ. <br /> <br /> ಕೆವಿನ್ ಪೀಟರ್ಸನ್ ಅವರ ವಿಕೆಟ್ ಪಡೆದ ಬಳಿಕ ಅತಿಯಾಗಿ ಸಂಭ್ರಮಿಸಿದ್ದರ ಬಗ್ಗೆ ಕೇಳಿದಾಗ ಗಂಗೂಲಿ, `ಪೀಟರ್ಸನ್ ವಿಕೆಟ್ ದೊರೆತಾಗ ನಿರಾಳನಾದೆ. ಇದು ಸಂಭ್ರಮಕ್ಕೆ ಕಾರಣ~ ಎಂದು ಉತ್ತರಿಸಿದರು. ಗಂಗೂಲಿ ತಮ್ಮ ಮೊದಲ ಎಸೆತದಲ್ಲಿ ಪೀಟರ್ಸನ್ ಅವರನ್ನು ಕ್ಲೀನ್ಬೌಲ್ಡ್ ಮಾಡಿದ್ದರು.ಆಲ್ರೌಂಡ್ ಪ್ರದರ್ಶನ ನೀಡಿದ ಗಂಗೂಲಿ `ಪಂದ್ಯಶ್ರೇಷ್ಠ~ ಪ್ರಶಸ್ತಿ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಪಂದ್ಯದ ಮಹತ್ವದ ಘಟ್ಟದಲ್ಲಿ ವೀರೇಂದ್ರ ಸೆಹ್ವಾಗ್ ಅವರ ವಿಕೆಟ್ ದೊರೆತದ್ದು ನಮ್ಮ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು ಎಂದು ಪುಣೆ ವಾರಿಯರ್ಸ್ ತಂಡದ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.<br /> <br /> ನವದೆಹಲಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್ 20 ರನ್ಗಳಿಂದ ಡೆಲ್ಲಿ ಡೇರ್ಡೆವಿಲ್ಸ್ ವಿರುದ್ಧ ಜಯ ಪಡೆದಿತ್ತು. ಗೆಲುವಿಗೆ 193 ರನ್ಗಳ ಗುರಿ ಬೆನ್ನಟ್ಟಿದ್ದ ಡೇರ್ಡೆವಿಲ್ಸ್ 20 ಓವರ್ಗಳಲ್ಲಿ 7 ವಿಕೆಟ್ಗೆ 172 ರನ್ ಗಳಿಸಲು ಶಕ್ತವಾಗಿತ್ತು. 32 ಎಸೆತಗಳಲ್ಲಿ 57 ರನ್ ಗಳಿಸಿದ್ದ ಸೆಹ್ವಾಗ್ ಅವರು ಮುರಳಿ ಕಾರ್ತಿಕ್ಗೆ ವಿಕೆಟ್ ಒಪ್ಪಿಸಿದ್ದರು.<br /> <br /> `ಸೆಹ್ವಾಗ್ ದೊಡ್ಡ ಹೊಡೆತಗಳ ಮೂಲಕ ಎಲ್ಲ ಬೌಲರ್ಗಳ ಮೇಲೂ ಪ್ರಭುತ್ವ ಸಾಧಿಸಿದ್ದರು. ಅವರು ಔಟಾದ ಬಳಿಕವಷ್ಟೇ ನಾವು ಪಂದ್ಯದ ಮೇಲೆ ಹಿಡಿತ ಸಾಧಿಸಿದೆವು~ ಎಂದು ಗಂಗೂಲಿ ನುಡಿದಿದ್ದಾರೆ. <br /> <br /> ಕೆವಿನ್ ಪೀಟರ್ಸನ್ ಅವರ ವಿಕೆಟ್ ಪಡೆದ ಬಳಿಕ ಅತಿಯಾಗಿ ಸಂಭ್ರಮಿಸಿದ್ದರ ಬಗ್ಗೆ ಕೇಳಿದಾಗ ಗಂಗೂಲಿ, `ಪೀಟರ್ಸನ್ ವಿಕೆಟ್ ದೊರೆತಾಗ ನಿರಾಳನಾದೆ. ಇದು ಸಂಭ್ರಮಕ್ಕೆ ಕಾರಣ~ ಎಂದು ಉತ್ತರಿಸಿದರು. ಗಂಗೂಲಿ ತಮ್ಮ ಮೊದಲ ಎಸೆತದಲ್ಲಿ ಪೀಟರ್ಸನ್ ಅವರನ್ನು ಕ್ಲೀನ್ಬೌಲ್ಡ್ ಮಾಡಿದ್ದರು.ಆಲ್ರೌಂಡ್ ಪ್ರದರ್ಶನ ನೀಡಿದ ಗಂಗೂಲಿ `ಪಂದ್ಯಶ್ರೇಷ್ಠ~ ಪ್ರಶಸ್ತಿ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>