<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಅರ್ಜುನ ಹಳ್ಳಿ ಬಳಿ ಓಮ್ನಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟು, ಆರು ಮಂದಿ ಆಸ್ಪತ್ರೆ ಸೇರಿದ ಘಟನೆ ಬುಧವಾರ ಬೆಳಗಿನಜಾವ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ.<br /> <br /> ಹಾಸನದ ಪುಟ್ಟರಾಜು ಅವರ ಮಗ ಶಕ್ತಿಪ್ರಸಾದ್ (26) ಮತ್ತು ರಾಮಯ್ಯ ಅವರ ಮಗ ಶಿವಪ್ರಸಾದ್ (26) ಮೃತಪಟ್ಟವರು. ರೂಪೇಶ್ (26) ದೀಪಕ್ (25) ಅವರನ್ನು ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಸೇರಿಸಲಾಗಿದೆ. ಇನ್ನುಳಿದ ರಾಘವೇಂದ್ರ, ಶಶಿ, ಕಾಂತರಾಜು ಅವರು ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ಮಾರುತಿ ಓಮ್ನಿ ಕಾರಿನಲ್ಲಿ ಒಟ್ಟು ಎಂಟು ಯುವಕರು ಕುಶಾಲನಗರ ದಿಂದ ಕೆ.ಆರ್.ನಗರ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಗಿನ ಜಾವ 3.30 ಕ್ಕೆ ತಾಲ್ಲೂಕಿನ ಅರ್ಜುನಹಳ್ಳಿ ಗೇಟ್ ಬಳಿ ಬರುತ್ತಿದ್ದಂತೆ ಅಲ್ಲಿಯೇ ಇದ್ದ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಲವರು ಕೈ ಹಾಗೂ ಕಾಲು ಕಳೆದುಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಅರ್ಜುನ ಹಳ್ಳಿ ಬಳಿ ಓಮ್ನಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟು, ಆರು ಮಂದಿ ಆಸ್ಪತ್ರೆ ಸೇರಿದ ಘಟನೆ ಬುಧವಾರ ಬೆಳಗಿನಜಾವ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ.<br /> <br /> ಹಾಸನದ ಪುಟ್ಟರಾಜು ಅವರ ಮಗ ಶಕ್ತಿಪ್ರಸಾದ್ (26) ಮತ್ತು ರಾಮಯ್ಯ ಅವರ ಮಗ ಶಿವಪ್ರಸಾದ್ (26) ಮೃತಪಟ್ಟವರು. ರೂಪೇಶ್ (26) ದೀಪಕ್ (25) ಅವರನ್ನು ಮೈಸೂರಿನ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಸೇರಿಸಲಾಗಿದೆ. ಇನ್ನುಳಿದ ರಾಘವೇಂದ್ರ, ಶಶಿ, ಕಾಂತರಾಜು ಅವರು ಒಳ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ಮಾರುತಿ ಓಮ್ನಿ ಕಾರಿನಲ್ಲಿ ಒಟ್ಟು ಎಂಟು ಯುವಕರು ಕುಶಾಲನಗರ ದಿಂದ ಕೆ.ಆರ್.ನಗರ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಬುಧವಾರ ಬೆಳಗಿನ ಜಾವ 3.30 ಕ್ಕೆ ತಾಲ್ಲೂಕಿನ ಅರ್ಜುನಹಳ್ಳಿ ಗೇಟ್ ಬಳಿ ಬರುತ್ತಿದ್ದಂತೆ ಅಲ್ಲಿಯೇ ಇದ್ದ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕೆಲವರು ಕೈ ಹಾಗೂ ಕಾಲು ಕಳೆದುಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>