<p><strong>ನವದೆಹಲಿ (ಪಿಟಿಐ): </strong>ಪುರಾಣ ಪ್ರಸಿದ್ಧ ರಾಮ ಸೇತುವೆಗೆ ಹಾನಿ ಮಾಡದೇ ವಿವಾದಾತ್ಮಕ ಸೇತು ಸಮುದ್ರ ಯೋಜನೆಗೆ ಪರ್ಯಾಯ ಮಾರ್ಗ ಹುಡುಕುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ಉನ್ನತ ಮಟ್ಟದ ಸಮಿತಿ ನೀಡಿರುವ ವರದಿಯನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದೆ.<br /> <br /> ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಎಂದು ಉನ್ನತ ಸಮಿತಿ ಹೇಳಿದೆ. ಸಮಿತಿ ನೀಡಿದ 37 ಪುಟಗಳ ವರದಿಯನ್ನು ಸಾಲಿಸಿಟರ್ ಜನರಲ್ ರೋಹಿಂಟನ್ ನಾರಿಮನ್ ಅವರು ಎಚ್.ಎಲ್.ದತ್ತು ಮತ್ತು ಸಿ.ಕೆ. ಪ್ರಸಾದ್ ಅವರನ್ನು ಒಳಗೊಂಡ ಪೀಠಕ್ಕೆ ಸಲ್ಲಿಸಿದರು.<br /> <br /> ವಿವಾದಾತ್ಮಕ ಸೇತುಸಮುದ್ರ ಯೋಜನೆ ಕುರಿತು ವರದಿ ನೀಡುವಂತೆ ಪರಿಸರ ತಜ್ಞ ಆರ್.ಕೆ. ಪಚೌರಿ ಅವರ ನೇತೃತ್ವದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಮಿತಿಯೊಂದನ್ನು ನೇಮಕ ಮಾಡಿದ್ದರು. ಈ ಬಗ್ಗೆ ವಿಚಾರಣೆ ಮಾಡಿದ ಪೀಠ ಯೋಜನೆ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಎಂಟು ವಾರಗಳ ಗಡುವು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಪುರಾಣ ಪ್ರಸಿದ್ಧ ರಾಮ ಸೇತುವೆಗೆ ಹಾನಿ ಮಾಡದೇ ವಿವಾದಾತ್ಮಕ ಸೇತು ಸಮುದ್ರ ಯೋಜನೆಗೆ ಪರ್ಯಾಯ ಮಾರ್ಗ ಹುಡುಕುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ಉನ್ನತ ಮಟ್ಟದ ಸಮಿತಿ ನೀಡಿರುವ ವರದಿಯನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದೆ.<br /> <br /> ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಎಂದು ಉನ್ನತ ಸಮಿತಿ ಹೇಳಿದೆ. ಸಮಿತಿ ನೀಡಿದ 37 ಪುಟಗಳ ವರದಿಯನ್ನು ಸಾಲಿಸಿಟರ್ ಜನರಲ್ ರೋಹಿಂಟನ್ ನಾರಿಮನ್ ಅವರು ಎಚ್.ಎಲ್.ದತ್ತು ಮತ್ತು ಸಿ.ಕೆ. ಪ್ರಸಾದ್ ಅವರನ್ನು ಒಳಗೊಂಡ ಪೀಠಕ್ಕೆ ಸಲ್ಲಿಸಿದರು.<br /> <br /> ವಿವಾದಾತ್ಮಕ ಸೇತುಸಮುದ್ರ ಯೋಜನೆ ಕುರಿತು ವರದಿ ನೀಡುವಂತೆ ಪರಿಸರ ತಜ್ಞ ಆರ್.ಕೆ. ಪಚೌರಿ ಅವರ ನೇತೃತ್ವದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಮಿತಿಯೊಂದನ್ನು ನೇಮಕ ಮಾಡಿದ್ದರು. ಈ ಬಗ್ಗೆ ವಿಚಾರಣೆ ಮಾಡಿದ ಪೀಠ ಯೋಜನೆ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಎಂಟು ವಾರಗಳ ಗಡುವು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>