<p><strong>ಶಿಗ್ಗಾವಿ:</strong> `ಮಕ್ಕಳಲ್ಲಿ ಶಿಸ್ತುಬದ್ಧ ಶಿಕ್ಷಣ ಕಲಿಕೆ ಭಾರತ ಸೇವಾದಳದಿಂದ ಮಾತ್ರ ಸಾಧ್ಯವಿದೆ. ಹೀಗಾಗಿ ಸೇವಾದಳದ ನಿಯಮಾವಳಿಗಳನ್ನು ಪ್ರತಿ ಶಾಲೆಗಳಲ್ಲಿ ಅಳವಡಿಸುವುದು ಅಗತ್ಯವಾಗಿದೆ' ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಎಸ್.ಪಟ್ಟಣಶೆಟ್ಟರ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಗುರುಭವನದಲ್ಲಿ ಗುರುವಾರ ನಡೆದ ಭಾರತ ಸೇವಾದಳ ತಾಲ್ಲೂಕು ಘಟಕ, ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಾರ್ಯಾಲಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಭಾರತ ಸೇವಾದಳ ಶಿಕ್ಷಕರ ಶೈಕ್ಷಣಿಕ ವರ್ಷದ ಮಿಲಾಪ್ ಪುನಶ್ವೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಭಾರತ ಸೇವಾದಳ ಕಾರ್ಯಚಟುವಟಿಕೆಗಳನ್ನು ಶಿಕ್ಷಕರು ಮಕ್ಕಳಿಗೆ ಶಾಲೆಯಲ್ಲಿ ಅಳವಡಿಸಿಕೊಳ್ಳಬೇಕು. ರಾಷ್ಟ್ರೀಯ ನೇತಾರರ ಹೆಸರಲ್ಲಿ ಶಾಲೆಯಲ್ಲಿ ಘಟಕಗಳನ್ನು ಆರಂಭಿಸಿ ಮಕ್ಕಳಿಗೆ ಶಿಸ್ತು ದೇಶಪ್ರೇಮ, ರಾಷ್ಟ್ರಗೀತೆ ಹಾಗೂ ರಾಷ್ಟ್ರಲಾಂಛನದ ಬಗ್ಗೆ ತಿಳಿಸಬೇಕು' ಎಂದು ಹೇಳಿದರು.<br /> <br /> ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಪುರದ ಮಾತನಾಡಿ, `ಶಿಸ್ತು ಶಿಕ್ಷಣಕ್ಕೆ ಪೂರಕವಾಗಿದ್ದು, ಮನುಷ್ಯ ಶಿಸ್ತು ಅಳವಡಿಸಿಕೊಂಡಾಗ ಮಾತ್ರ ಕಾಯಕ ಯಶಸ್ವಿಯಾಗಲು ಸಾಧ್ಯ' ಎಂದರು. ಸೇವಾದಳ ಜಿಲ್ಲಾ ಸಂಚಾಲಕ ಸದಸ್ಯ ಪ್ರಕಾಶ ಗೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಎಂ.ಬಿ. ಹಳೇಮನಿ ಅಧ್ಯಕ್ಷತೆ ವಹಿಸಿದ್ದರು. ಎಲ್.ಎಸ್.ಲಮಾಣಿ . ಮುಖ್ಯಶಿಕ್ಷಕ ಸಿ.ಎನ್.ಚರಂತಿಮಠ, ಶೇತಸನದಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ವಿ.ಎಂ.ನರೇಗಲ್ಲ ಸ್ವಾಗತಿಸಿದರು. ಎಸ್. ಎಫ್.ಮಸಳೆ ನಿರೂಪಿಸಿದರು. ಬಿ.ಕೆ ಹೊಸಪೇಟೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> `ಮಕ್ಕಳಲ್ಲಿ ಶಿಸ್ತುಬದ್ಧ ಶಿಕ್ಷಣ ಕಲಿಕೆ ಭಾರತ ಸೇವಾದಳದಿಂದ ಮಾತ್ರ ಸಾಧ್ಯವಿದೆ. ಹೀಗಾಗಿ ಸೇವಾದಳದ ನಿಯಮಾವಳಿಗಳನ್ನು ಪ್ರತಿ ಶಾಲೆಗಳಲ್ಲಿ ಅಳವಡಿಸುವುದು ಅಗತ್ಯವಾಗಿದೆ' ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಬಿ.ಎಸ್.ಪಟ್ಟಣಶೆಟ್ಟರ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದ ಗುರುಭವನದಲ್ಲಿ ಗುರುವಾರ ನಡೆದ ಭಾರತ ಸೇವಾದಳ ತಾಲ್ಲೂಕು ಘಟಕ, ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಾರ್ಯಾಲಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಭಾರತ ಸೇವಾದಳ ಶಿಕ್ಷಕರ ಶೈಕ್ಷಣಿಕ ವರ್ಷದ ಮಿಲಾಪ್ ಪುನಶ್ವೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಭಾರತ ಸೇವಾದಳ ಕಾರ್ಯಚಟುವಟಿಕೆಗಳನ್ನು ಶಿಕ್ಷಕರು ಮಕ್ಕಳಿಗೆ ಶಾಲೆಯಲ್ಲಿ ಅಳವಡಿಸಿಕೊಳ್ಳಬೇಕು. ರಾಷ್ಟ್ರೀಯ ನೇತಾರರ ಹೆಸರಲ್ಲಿ ಶಾಲೆಯಲ್ಲಿ ಘಟಕಗಳನ್ನು ಆರಂಭಿಸಿ ಮಕ್ಕಳಿಗೆ ಶಿಸ್ತು ದೇಶಪ್ರೇಮ, ರಾಷ್ಟ್ರಗೀತೆ ಹಾಗೂ ರಾಷ್ಟ್ರಲಾಂಛನದ ಬಗ್ಗೆ ತಿಳಿಸಬೇಕು' ಎಂದು ಹೇಳಿದರು.<br /> <br /> ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಪುರದ ಮಾತನಾಡಿ, `ಶಿಸ್ತು ಶಿಕ್ಷಣಕ್ಕೆ ಪೂರಕವಾಗಿದ್ದು, ಮನುಷ್ಯ ಶಿಸ್ತು ಅಳವಡಿಸಿಕೊಂಡಾಗ ಮಾತ್ರ ಕಾಯಕ ಯಶಸ್ವಿಯಾಗಲು ಸಾಧ್ಯ' ಎಂದರು. ಸೇವಾದಳ ಜಿಲ್ಲಾ ಸಂಚಾಲಕ ಸದಸ್ಯ ಪ್ರಕಾಶ ಗೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮುಖ್ಯ ಶಿಕ್ಷಕ ಎಂ.ಬಿ. ಹಳೇಮನಿ ಅಧ್ಯಕ್ಷತೆ ವಹಿಸಿದ್ದರು. ಎಲ್.ಎಸ್.ಲಮಾಣಿ . ಮುಖ್ಯಶಿಕ್ಷಕ ಸಿ.ಎನ್.ಚರಂತಿಮಠ, ಶೇತಸನದಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ವಿ.ಎಂ.ನರೇಗಲ್ಲ ಸ್ವಾಗತಿಸಿದರು. ಎಸ್. ಎಫ್.ಮಸಳೆ ನಿರೂಪಿಸಿದರು. ಬಿ.ಕೆ ಹೊಸಪೇಟೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>