<p><strong>ಮಂಗಳೂರು:</strong> ಸೇವಾ ಮನೋಭಾವ ಮತ್ತು ಪ್ರಾಮಾಣಿಕತೆಯು ಮಾರಾಟ ಅಧಿಕಾರಿಗಳಿಗೆ ಬಹಳ ಮಹತ್ವದ್ದಾಗಿದೆ ಎಂದು ನಿಟ್ಟೆ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ವಿಶಾಲ್ ಹೆಗ್ಡೆ ಅವರು ಐಸಿಐಸಿಐ ಬ್ಯಾಂಕಿನ ಮಾರಾಟ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.<br /> <br /> ಅವರು ದೇರಳಕಟ್ಟೆಯ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಫೈನಾನ್ಸ್ನಲ್ಲಿ ನಡೆದ 26 ದಿನಗಳ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತಮ್ಮ ದೈನಂದಿನ ಕೆಲಸದ ದಿನಚರಿಯನ್ನು ದಾಖಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಿ ಎಂದು ಅವರು ತಿಳಿಸಿದರು.<br /> <br /> ಸಂಸ್ಥೆ ನಿರ್ದೇಶಕ ಡಾ.ಎಂ.ಎಸ್.ಮೂಡಿತ್ತಾಯ ಅವರು, ಪ್ರಾಸ್ತಾವಿಕ ಭಾಷಣದಲ್ಲಿ ಮಾರಾಟ ಕ್ಷೇತ್ರದ ಸವಾಲುಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು. ನಿಟ್ಟೆ ಸಂಸ್ಥೆಯು ಅಧಿಕಾರಿಗಳಿಗೆ ಉತ್ತಮ ತರಬೇತಿ ಕೊಟ್ಟು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಒದಗಿಸಿದೆ ಎಂದರು.<br /> <br /> ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಾ.ಎನ್.ಕೆ. ತಿಂಗಳಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂದು ಬಹಳಷ್ಟು ಸಂಖ್ಯೆಯ ಜನರು ಬ್ಯಾಂಕಿಂಗ್ ಸೌಲಭ್ಯ ವಂಚಿತರು ಇದ್ದ ಅವರಿಗೆ ಸೌಲಭ್ಯ ಒದಗಿಸುವ ಗುರುತರ ಜವಾಬ್ದಾರಿ ಬ್ಯಾಂಕ್ ಅಧಿಕಾರಿಗಳ ಮೇಲಿದೆ ಎಂದು ಅವರು ಹೇಳಿದರು.<br /> <br /> ಐಸಿಐಸಿಐ ಮಂಗಳೂರು ಇದರ ಪ್ರಾದೇಶಿಕ ಪ್ರಬಂಧಕ ಪ್ರವೀಣ್ ಅಂಚನ್ ಅಧಿಕಾರಿಗಳಿಗೆ ತಮ್ಮ ಅನುಭವವನ್ನು ತಿಳಿಸಿದರು. ಕೆ.ಅರ್.ನಾಯಕ್ ಸ್ವಾಗತಿಸಿದರು. ಎಂ.ಎಸ್.ರಾವ್ ವಂದಿಸಿದರು. ಸೋನಾ ರೈ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಸೇವಾ ಮನೋಭಾವ ಮತ್ತು ಪ್ರಾಮಾಣಿಕತೆಯು ಮಾರಾಟ ಅಧಿಕಾರಿಗಳಿಗೆ ಬಹಳ ಮಹತ್ವದ್ದಾಗಿದೆ ಎಂದು ನಿಟ್ಟೆ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ವಿಶಾಲ್ ಹೆಗ್ಡೆ ಅವರು ಐಸಿಐಸಿಐ ಬ್ಯಾಂಕಿನ ಮಾರಾಟ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.<br /> <br /> ಅವರು ದೇರಳಕಟ್ಟೆಯ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಫೈನಾನ್ಸ್ನಲ್ಲಿ ನಡೆದ 26 ದಿನಗಳ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತಮ್ಮ ದೈನಂದಿನ ಕೆಲಸದ ದಿನಚರಿಯನ್ನು ದಾಖಲಿಸುವ ಪ್ರವೃತ್ತಿ ಬೆಳೆಸಿಕೊಳ್ಳಿ ಎಂದು ಅವರು ತಿಳಿಸಿದರು.<br /> <br /> ಸಂಸ್ಥೆ ನಿರ್ದೇಶಕ ಡಾ.ಎಂ.ಎಸ್.ಮೂಡಿತ್ತಾಯ ಅವರು, ಪ್ರಾಸ್ತಾವಿಕ ಭಾಷಣದಲ್ಲಿ ಮಾರಾಟ ಕ್ಷೇತ್ರದ ಸವಾಲುಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು. ನಿಟ್ಟೆ ಸಂಸ್ಥೆಯು ಅಧಿಕಾರಿಗಳಿಗೆ ಉತ್ತಮ ತರಬೇತಿ ಕೊಟ್ಟು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಒದಗಿಸಿದೆ ಎಂದರು.<br /> <br /> ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಾ.ಎನ್.ಕೆ. ತಿಂಗಳಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂದು ಬಹಳಷ್ಟು ಸಂಖ್ಯೆಯ ಜನರು ಬ್ಯಾಂಕಿಂಗ್ ಸೌಲಭ್ಯ ವಂಚಿತರು ಇದ್ದ ಅವರಿಗೆ ಸೌಲಭ್ಯ ಒದಗಿಸುವ ಗುರುತರ ಜವಾಬ್ದಾರಿ ಬ್ಯಾಂಕ್ ಅಧಿಕಾರಿಗಳ ಮೇಲಿದೆ ಎಂದು ಅವರು ಹೇಳಿದರು.<br /> <br /> ಐಸಿಐಸಿಐ ಮಂಗಳೂರು ಇದರ ಪ್ರಾದೇಶಿಕ ಪ್ರಬಂಧಕ ಪ್ರವೀಣ್ ಅಂಚನ್ ಅಧಿಕಾರಿಗಳಿಗೆ ತಮ್ಮ ಅನುಭವವನ್ನು ತಿಳಿಸಿದರು. ಕೆ.ಅರ್.ನಾಯಕ್ ಸ್ವಾಗತಿಸಿದರು. ಎಂ.ಎಸ್.ರಾವ್ ವಂದಿಸಿದರು. ಸೋನಾ ರೈ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>