<p><strong>ಬೆಂಗಳೂರು:</strong> `ಕನಿಷ್ಠ ವೇತನ ಕೇಳಿದ್ದಕ್ಕೆ ಗುತ್ತಿಗೆ ಕಾರ್ಮಿಕರನ್ನು ಸೇವೆಯಿಂದ ವಜಾ ಮಾಡಲಾಗಿದೆ~ ಎಂದು ಆರೋಪಿಸಿ ರಾಜ್ಯ ಬಿಎಸ್ಎನ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಸದಸ್ಯರು ಆನಂದ್ರಾವ್ ವೃತ್ತ ಬಳಿಯ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>`ಬಹುತೇಕ ಕಾರ್ಮಿಕರು ಬಿಎಸ್ಎನ್ಎಲ್ ಸಂಸ್ಥೆಯ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯ ದೂರವಾಣಿ ಕೇಂದ್ರಗಳಲ್ಲಿ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ವೇತನವಾಗಲಿ, ಕೆಲಸದಲ್ಲಿ ಸೂಕ್ತ ಭದ್ರತೆಯಾಗಲಿ ಅವರಿಗೆ ಸಿಕ್ಕಿಲ್ಲ. ಈ ಬಗ್ಗೆ ಸಂಸ್ಥೆಯನ್ನು ಪ್ರಶ್ನಿಸಿದ್ದಕ್ಕೆ ಟೆಂಡರ್ ಮುಗಿದಿದೆ ನೀವಿನ್ನೂ ಕೆಲಸಕ್ಕೆ ಬರುವುದು ಬೇಡ ಎಂದು ಕಾರ್ಮಿಕರನ್ನು ಸೇವೆಯಿಂದ ವಜಾ ಮಾಡಿದೆ. ಕೆಲಸ ಕಳೆದುಕೊಂಡ ಕಾರ್ಮಿಕರ ಕುಟುಂಬಗಳು ಈಗ ಸಂಕಷ್ಟಕ್ಕೆ ಸಿಲುಕಿವೆ~ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಚೆಲುವರಾಜು ಹೇಳಿದರು.</p>.<p>`ಕಾನೂನುಬದ್ಧವಾಗಿ ನೀಡಬೇಕಾದ ಇಎಸ್ಐ, ಭವಿಷ್ಯ ನಿಧಿ, ವೇತನ ಚೀಟಿ ಸೌಲಭ್ಯಗಳು ನಮಗೆ ಸಿಗುತ್ತಿಲ್ಲ. ಅಲ್ಲದೇ, ನಾವು ಈ ಸಂಸ್ಥೆಯ ನೌಕರರೆಂದು ಹೇಳಿಕೊಳ್ಳಲು ಗುರುತಿನ ಚೀಟಿಯನ್ನೂ ಸಹ ನೀಡಿಲ್ಲ. ಇತ್ತೀಚೆಗೆ ನಮ್ಮ ಸಮಸ್ಯೆಗಳನ್ನು ಪರಿಶೀಲಿಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು, ನೌಕರರಿಗೆ ಭದ್ರತೆ ನೀಡುವಂತೆ ಸಂಸ್ಥೆಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಆಡಳಿತ ಮಂಡಳಿ ನಮ್ಮನ್ನು ಸೇವೆಯಿಂದ ವಜಾ ಮಾಡಿದೆ~ ಎಂದು ಪ್ರತಿಭಟನಾನಿರತ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಮ್ಮನ್ನೂ ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಜುಲೈ.16 ರಂದೇ ಸಂಸ್ಥೆಗೆ ಮನವಿ ಮಾಡಿದ್ದೇವೆ. ಆದರೆ, ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಾನವೀಯತೆ ದೃಷ್ಟಿಯಿಂದಾದರೂ ನಮ್ಮ ಸಮಸ್ಯೆಗಳಿಗೆ ಆಡಳಿತ ಮಂಡಳಿ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕನಿಷ್ಠ ವೇತನ ಕೇಳಿದ್ದಕ್ಕೆ ಗುತ್ತಿಗೆ ಕಾರ್ಮಿಕರನ್ನು ಸೇವೆಯಿಂದ ವಜಾ ಮಾಡಲಾಗಿದೆ~ ಎಂದು ಆರೋಪಿಸಿ ರಾಜ್ಯ ಬಿಎಸ್ಎನ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಸದಸ್ಯರು ಆನಂದ್ರಾವ್ ವೃತ್ತ ಬಳಿಯ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>`ಬಹುತೇಕ ಕಾರ್ಮಿಕರು ಬಿಎಸ್ಎನ್ಎಲ್ ಸಂಸ್ಥೆಯ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯ ದೂರವಾಣಿ ಕೇಂದ್ರಗಳಲ್ಲಿ 15 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ವೇತನವಾಗಲಿ, ಕೆಲಸದಲ್ಲಿ ಸೂಕ್ತ ಭದ್ರತೆಯಾಗಲಿ ಅವರಿಗೆ ಸಿಕ್ಕಿಲ್ಲ. ಈ ಬಗ್ಗೆ ಸಂಸ್ಥೆಯನ್ನು ಪ್ರಶ್ನಿಸಿದ್ದಕ್ಕೆ ಟೆಂಡರ್ ಮುಗಿದಿದೆ ನೀವಿನ್ನೂ ಕೆಲಸಕ್ಕೆ ಬರುವುದು ಬೇಡ ಎಂದು ಕಾರ್ಮಿಕರನ್ನು ಸೇವೆಯಿಂದ ವಜಾ ಮಾಡಿದೆ. ಕೆಲಸ ಕಳೆದುಕೊಂಡ ಕಾರ್ಮಿಕರ ಕುಟುಂಬಗಳು ಈಗ ಸಂಕಷ್ಟಕ್ಕೆ ಸಿಲುಕಿವೆ~ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಚೆಲುವರಾಜು ಹೇಳಿದರು.</p>.<p>`ಕಾನೂನುಬದ್ಧವಾಗಿ ನೀಡಬೇಕಾದ ಇಎಸ್ಐ, ಭವಿಷ್ಯ ನಿಧಿ, ವೇತನ ಚೀಟಿ ಸೌಲಭ್ಯಗಳು ನಮಗೆ ಸಿಗುತ್ತಿಲ್ಲ. ಅಲ್ಲದೇ, ನಾವು ಈ ಸಂಸ್ಥೆಯ ನೌಕರರೆಂದು ಹೇಳಿಕೊಳ್ಳಲು ಗುರುತಿನ ಚೀಟಿಯನ್ನೂ ಸಹ ನೀಡಿಲ್ಲ. ಇತ್ತೀಚೆಗೆ ನಮ್ಮ ಸಮಸ್ಯೆಗಳನ್ನು ಪರಿಶೀಲಿಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು, ನೌಕರರಿಗೆ ಭದ್ರತೆ ನೀಡುವಂತೆ ಸಂಸ್ಥೆಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಆಡಳಿತ ಮಂಡಳಿ ನಮ್ಮನ್ನು ಸೇವೆಯಿಂದ ವಜಾ ಮಾಡಿದೆ~ ಎಂದು ಪ್ರತಿಭಟನಾನಿರತ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ನಮ್ಮನ್ನೂ ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಜುಲೈ.16 ರಂದೇ ಸಂಸ್ಥೆಗೆ ಮನವಿ ಮಾಡಿದ್ದೇವೆ. ಆದರೆ, ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಾನವೀಯತೆ ದೃಷ್ಟಿಯಿಂದಾದರೂ ನಮ್ಮ ಸಮಸ್ಯೆಗಳಿಗೆ ಆಡಳಿತ ಮಂಡಳಿ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>