<p>ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 7 ರ ಬಿಜೆಪಿ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಹಾಗೂ ಉಪಾಧ್ಯಕ್ಷರಾಗಿ ವಾರ್ಡ್ ಸಂಖ್ಯೆಯ 14 ಸದಸ್ಯೆ ಲಕ್ಷ್ಮಿ ವೆಂಕಟಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.<br /> <br /> ಶುಕ್ರವಾರ ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆದು ಒಂದು ವರ್ಷ ಕಳೆಯುತ್ತಾ ಬಂದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ನಿಗದಿಗೊಳ್ಳದೆ ಖಾಲಿಯಾಗಿತ್ತು.<br /> <br /> ಮುಂದಿನ 30 ತಿಂಗಳ ಅವಧಿಗೆ ಮೊದಲ 15 ತಿಂಗಳ ಅವಧಿಯನ್ನು ಸೊಪ್ಪುಗುಡ್ಡೆ ರಾಘವೇಂದ್ರ ಅವರನ್ನು ಪಕ್ಷ ನೇಮಕ ಮಾಡಿದೆ. ಪಟ್ಟಣ ಪಂಚಾಯ್ತಿ 15 ಸದಸ್ಯ ಬಲದಲ್ಲಿ ಬಿಜೆಪಿ 11ಕಾಂಗ್ರೆಸ್ 2, ಜೆಡಿಎಸ್1 ಹಾಗೂ ಕೆಜೆಪಿ 1ಸ್ಥಾನ ಗಳಿಸಿದೆ.<br /> <br /> ಅಧ್ಯಕ್ಷ ಹುದ್ದೆ ಬಿಸಿಎಂ(ಎ) ವರ್ಗಕ್ಕೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿದೆ. ಬಿಸಿಎಂ(ಎ) ವರ್ಗಕ್ಕೆ ಸೇರಿದ 4 ಮಂದಿ ಸದಸ್ಯರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು ಅಧ್ಯಕ್ಷ ಹುದ್ದೆ ನೇಮಕ ಬಿಜೆಪಿಗೆ ಸವಾಲಾಗಿ ಪರಿಣಮಿಸಿತ್ತು.<br /> ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ರಹಮತ್ ಉಲ್ಲಾ ಅಸಾದಿ, ನವೀನ್, ರಾಜೀವನ್ ಅವರ ನಡುವೆ ಮುಂದಿನ 15 ತಿಂಗಳ ಅವಧಿಯ ಅಧಿಕಾರ ಹಂಚಿಕೆಯಾಗುವ ಸಾಧ್ಯತೆಗಳಿವೆ.<br /> <br /> ಚುನಾವಣಾ ಅಧಿಕಾರಿಗಳಾಗಿ ತಹಶೀಲ್ದಾರ್ ಗಣೇಶ ಮೂರ್ತಿ ಕಾರ್ಯನಿರ್ವಹಿಸಿದರು.<br /> ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದ ಮಾಜಿ ಶಾಸಕ ಆರಗ ಜ್ಞಾನೇಂದ್ರ, ಪಕ್ಷದ ಮುಖಂಡರಾದ ನಾಗರಾಜಶೆಟ್ಟಿ, ಪಕ್ಷದ ಕ್ಷೇತ್ರ ಅಧ್ಯಕ್ಷ ಚಕ್ಕೂಡಬೈಲು ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 7 ರ ಬಿಜೆಪಿ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಹಾಗೂ ಉಪಾಧ್ಯಕ್ಷರಾಗಿ ವಾರ್ಡ್ ಸಂಖ್ಯೆಯ 14 ಸದಸ್ಯೆ ಲಕ್ಷ್ಮಿ ವೆಂಕಟಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.<br /> <br /> ಶುಕ್ರವಾರ ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆದು ಒಂದು ವರ್ಷ ಕಳೆಯುತ್ತಾ ಬಂದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆ ಮೀಸಲಾತಿ ನಿಗದಿಗೊಳ್ಳದೆ ಖಾಲಿಯಾಗಿತ್ತು.<br /> <br /> ಮುಂದಿನ 30 ತಿಂಗಳ ಅವಧಿಗೆ ಮೊದಲ 15 ತಿಂಗಳ ಅವಧಿಯನ್ನು ಸೊಪ್ಪುಗುಡ್ಡೆ ರಾಘವೇಂದ್ರ ಅವರನ್ನು ಪಕ್ಷ ನೇಮಕ ಮಾಡಿದೆ. ಪಟ್ಟಣ ಪಂಚಾಯ್ತಿ 15 ಸದಸ್ಯ ಬಲದಲ್ಲಿ ಬಿಜೆಪಿ 11ಕಾಂಗ್ರೆಸ್ 2, ಜೆಡಿಎಸ್1 ಹಾಗೂ ಕೆಜೆಪಿ 1ಸ್ಥಾನ ಗಳಿಸಿದೆ.<br /> <br /> ಅಧ್ಯಕ್ಷ ಹುದ್ದೆ ಬಿಸಿಎಂ(ಎ) ವರ್ಗಕ್ಕೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿದೆ. ಬಿಸಿಎಂ(ಎ) ವರ್ಗಕ್ಕೆ ಸೇರಿದ 4 ಮಂದಿ ಸದಸ್ಯರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು ಅಧ್ಯಕ್ಷ ಹುದ್ದೆ ನೇಮಕ ಬಿಜೆಪಿಗೆ ಸವಾಲಾಗಿ ಪರಿಣಮಿಸಿತ್ತು.<br /> ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ರಹಮತ್ ಉಲ್ಲಾ ಅಸಾದಿ, ನವೀನ್, ರಾಜೀವನ್ ಅವರ ನಡುವೆ ಮುಂದಿನ 15 ತಿಂಗಳ ಅವಧಿಯ ಅಧಿಕಾರ ಹಂಚಿಕೆಯಾಗುವ ಸಾಧ್ಯತೆಗಳಿವೆ.<br /> <br /> ಚುನಾವಣಾ ಅಧಿಕಾರಿಗಳಾಗಿ ತಹಶೀಲ್ದಾರ್ ಗಣೇಶ ಮೂರ್ತಿ ಕಾರ್ಯನಿರ್ವಹಿಸಿದರು.<br /> ಅಧ್ಯಕ್ಷರ ಆಯ್ಕೆ ಕಸರತ್ತಿನಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದ ಮಾಜಿ ಶಾಸಕ ಆರಗ ಜ್ಞಾನೇಂದ್ರ, ಪಕ್ಷದ ಮುಖಂಡರಾದ ನಾಗರಾಜಶೆಟ್ಟಿ, ಪಕ್ಷದ ಕ್ಷೇತ್ರ ಅಧ್ಯಕ್ಷ ಚಕ್ಕೂಡಬೈಲು ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>