<p><strong>ಸೊರಬ: </strong>ಪಟ್ಟಣದ ನಾಡಹಬ್ಬ ದಸರಾ ಉತ್ಸವ ಸಮಿತಿ ವತಿಯಿಂದ 9 ದಿನಗಳ ಕಾಲ ಹಮ್ಮಿಕೊಂಡಿದ್ದ ಉತ್ಸವಕ್ಕೆ ಗುರುವಾರ ವೈಭವದ ತೆರೆ ಎಳೆಯಲಾಯಿತು.<br /> <br /> ಮೆರವಣಿಗೆ ಮೂಲಕ ಪಟ್ಟಣದ ದೇವತೆಗಳ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಶಾಸಕ ಎಚ್. ಹಾಲಪ್ಪ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ, ಉತ್ಸವ ಸಮಿತಿ ಸದಸ್ಯರು, ಪುರ ಗಣ್ಯರು ಪಾಲ್ಗೊಂಡು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡರು.<br /> <br /> ಪುರಾಣ ಪ್ರಸಿದ್ಧ ಚಂದ್ರಗುತ್ತಿಯಲ್ಲಿ ದಸರಾ ಹಬ್ಬದ ಅಂಗವಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾಧಿಗಳು ಪೂಜೆ ಸಲ್ಲಿಸಿ, ಬನ್ನಿ ವಿನಿಮಯ ಮಾಡಿ, ಪರಸ್ಪರ ಶುಭ ಹಾರೈಸಿದರು. <br /> <br /> ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಮಧ್ಯೆ ದೇಗುಲದ ಪ್ರಾಚೀನ ಮೆಟ್ಟಿಲು ಭಗ್ನಗೊಂಡಿದ್ದು, ಭಕ್ತರಲ್ಲಿ ಆತಂಕ ಉಂಟು ಮಾಡಿತು. ಪ್ರತಿ ವರ್ಷ ದಸರಾ ವೇಳೆ ಸಹಸ್ರಾರು ಭಕ್ತರು ಆಗಮಿಸುತ್ತಾರೆ ಎಂದು ಗೊತ್ತಿದ್ದರೂ ತಾಲ್ಲೂಕು ಆಡಳಿತ ಸಮರ್ಪಕ ವ್ಯವಸ್ಥೆ ಕಲ್ಪಿಸಿಲ್ಲ. <br /> <br /> ಮೂಲ ಸೌಕರ್ಯ ನೀಡಲು ಮುಂದಾಗದ ಗ್ರಾ.ಪಂ. ಆಡಳಿತ ಭಕ್ತರಿಗೆ ಅನಗತ್ಯ ಸುಂಕ ವಿಧಿಸುತ್ತಿರುವುದು ಅಕ್ರಮವಾಗಿದ್ದು, ಸ್ಥಗಿತಗೊಳಿಸಲು ಗ್ರಾಮಸ್ಥರು ನೀಡಿದ ಮನವಿಗೆ ಮೊದಲು ಸ್ಪಂದಿಸಿದ್ದ ತಾ.ಪಂ. ಇಒ, ನಂತರ ನಿಗದಿತ ಪ್ರಮಾಣದಲ್ಲಿ ವಸೂಲಾತಿ ಮಾಡಿ ಎಂದು ಗ್ರಾ.ಪಂ.ಗೆ ತಿಳಿಸಿದ್ದಾರೆ.<br /> <br /> ಇದು ಅಧಿಕಾರಿಯ ಕಾರ್ಯಕ್ಷಮತೆಯ ಬಗ್ಗೆ ಪ್ರಶ್ನೆ ಮೂಡಿಸುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು, ಅವ್ಯವಸ್ಥೆ ಸರಿಪಡಿಸುವ ಇಚ್ಛಾಶಕ್ತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಗ್ರ ಹೋರಾಟದ ಎಚ್ಚರಿಕೆನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ: </strong>ಪಟ್ಟಣದ ನಾಡಹಬ್ಬ ದಸರಾ ಉತ್ಸವ ಸಮಿತಿ ವತಿಯಿಂದ 9 ದಿನಗಳ ಕಾಲ ಹಮ್ಮಿಕೊಂಡಿದ್ದ ಉತ್ಸವಕ್ಕೆ ಗುರುವಾರ ವೈಭವದ ತೆರೆ ಎಳೆಯಲಾಯಿತು.<br /> <br /> ಮೆರವಣಿಗೆ ಮೂಲಕ ಪಟ್ಟಣದ ದೇವತೆಗಳ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಶಾಸಕ ಎಚ್. ಹಾಲಪ್ಪ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ, ಉತ್ಸವ ಸಮಿತಿ ಸದಸ್ಯರು, ಪುರ ಗಣ್ಯರು ಪಾಲ್ಗೊಂಡು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡರು.<br /> <br /> ಪುರಾಣ ಪ್ರಸಿದ್ಧ ಚಂದ್ರಗುತ್ತಿಯಲ್ಲಿ ದಸರಾ ಹಬ್ಬದ ಅಂಗವಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾಧಿಗಳು ಪೂಜೆ ಸಲ್ಲಿಸಿ, ಬನ್ನಿ ವಿನಿಮಯ ಮಾಡಿ, ಪರಸ್ಪರ ಶುಭ ಹಾರೈಸಿದರು. <br /> <br /> ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಮಧ್ಯೆ ದೇಗುಲದ ಪ್ರಾಚೀನ ಮೆಟ್ಟಿಲು ಭಗ್ನಗೊಂಡಿದ್ದು, ಭಕ್ತರಲ್ಲಿ ಆತಂಕ ಉಂಟು ಮಾಡಿತು. ಪ್ರತಿ ವರ್ಷ ದಸರಾ ವೇಳೆ ಸಹಸ್ರಾರು ಭಕ್ತರು ಆಗಮಿಸುತ್ತಾರೆ ಎಂದು ಗೊತ್ತಿದ್ದರೂ ತಾಲ್ಲೂಕು ಆಡಳಿತ ಸಮರ್ಪಕ ವ್ಯವಸ್ಥೆ ಕಲ್ಪಿಸಿಲ್ಲ. <br /> <br /> ಮೂಲ ಸೌಕರ್ಯ ನೀಡಲು ಮುಂದಾಗದ ಗ್ರಾ.ಪಂ. ಆಡಳಿತ ಭಕ್ತರಿಗೆ ಅನಗತ್ಯ ಸುಂಕ ವಿಧಿಸುತ್ತಿರುವುದು ಅಕ್ರಮವಾಗಿದ್ದು, ಸ್ಥಗಿತಗೊಳಿಸಲು ಗ್ರಾಮಸ್ಥರು ನೀಡಿದ ಮನವಿಗೆ ಮೊದಲು ಸ್ಪಂದಿಸಿದ್ದ ತಾ.ಪಂ. ಇಒ, ನಂತರ ನಿಗದಿತ ಪ್ರಮಾಣದಲ್ಲಿ ವಸೂಲಾತಿ ಮಾಡಿ ಎಂದು ಗ್ರಾ.ಪಂ.ಗೆ ತಿಳಿಸಿದ್ದಾರೆ.<br /> <br /> ಇದು ಅಧಿಕಾರಿಯ ಕಾರ್ಯಕ್ಷಮತೆಯ ಬಗ್ಗೆ ಪ್ರಶ್ನೆ ಮೂಡಿಸುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು, ಅವ್ಯವಸ್ಥೆ ಸರಿಪಡಿಸುವ ಇಚ್ಛಾಶಕ್ತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಗ್ರ ಹೋರಾಟದ ಎಚ್ಚರಿಕೆನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>