<p>ಶಿವಮೊಗ್ಗ: ನಗರಸಭೆ ವತಿಯಿಂದ ನಗರದ 35 ವಾರ್ಡ್ಗಳಲ್ಲಿ ಸೊಳ್ಳೆ ನಿಯಂತ್ರಿಸಲು ಸಹಾಯಕವಾಗುವ ಗಪ್ಪಿ ಮೀನು ಮರಿಗಳನ್ನು ಬಿಡಲು ಉದ್ದೇಶಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹೇಳಿದರು.<br /> <br /> ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಎನ್ಎಸ್ಎಸ್ ಮತ್ತು ನಗರಸಭೆ ಸಂಯುಕ್ತವಾಗಿ ಶಿಕ್ಷಕರ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಮಲೇರಿಯಾ ವಿರೋಧ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚನ್ನಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸೊಳ್ಳೆಗಳಿಂದ ಹರಡಬಹುದಾದ ಮಲೇರಿಯಾ, ಡೆಂಗೆ, ಚಿಕುನ್ಗುನ್ಯ, ಮೆದುಳುಜ್ವರ ಮತ್ತು ಆನೆಕಾಲು ರೋಗ ನಿಯಂತ್ರಣಕ್ಕೆ ಸರ್ಕಾರ ರೂಪಿಸುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.<br /> <br /> ಡಯಟ್ ಪ್ರಾಂಶುಪಾಲರಾದ ಚಂದ್ರಮ್ಮ ಮಾತನಾಡಿದರು. ಪೌರಾಯುಕ್ತ ಪಿ.ಜಿ. ರಮೇಶ್, ಕೀಟಜನ್ಯ ರೋಗ ನಿಯಂತ್ರಣ ಅಧಿಕಾರಿ ಜೆ.ಆರ್. ರುದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದಿನೇಶ್, ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್, ಡಯಟ್ ಉಪನ್ಯಾಸಕ ರಾಮಲಿಂಗಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ನಗರಸಭೆ ವತಿಯಿಂದ ನಗರದ 35 ವಾರ್ಡ್ಗಳಲ್ಲಿ ಸೊಳ್ಳೆ ನಿಯಂತ್ರಿಸಲು ಸಹಾಯಕವಾಗುವ ಗಪ್ಪಿ ಮೀನು ಮರಿಗಳನ್ನು ಬಿಡಲು ಉದ್ದೇಶಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹೇಳಿದರು.<br /> <br /> ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಎನ್ಎಸ್ಎಸ್ ಮತ್ತು ನಗರಸಭೆ ಸಂಯುಕ್ತವಾಗಿ ಶಿಕ್ಷಕರ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಮಲೇರಿಯಾ ವಿರೋಧ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚನ್ನಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸೊಳ್ಳೆಗಳಿಂದ ಹರಡಬಹುದಾದ ಮಲೇರಿಯಾ, ಡೆಂಗೆ, ಚಿಕುನ್ಗುನ್ಯ, ಮೆದುಳುಜ್ವರ ಮತ್ತು ಆನೆಕಾಲು ರೋಗ ನಿಯಂತ್ರಣಕ್ಕೆ ಸರ್ಕಾರ ರೂಪಿಸುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.<br /> <br /> ಡಯಟ್ ಪ್ರಾಂಶುಪಾಲರಾದ ಚಂದ್ರಮ್ಮ ಮಾತನಾಡಿದರು. ಪೌರಾಯುಕ್ತ ಪಿ.ಜಿ. ರಮೇಶ್, ಕೀಟಜನ್ಯ ರೋಗ ನಿಯಂತ್ರಣ ಅಧಿಕಾರಿ ಜೆ.ಆರ್. ರುದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದಿನೇಶ್, ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್, ಡಯಟ್ ಉಪನ್ಯಾಸಕ ರಾಮಲಿಂಗಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>