<p><strong>ನವದೆಹಲಿ (ಪಿಟಿಐ):</strong> ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆಯನ್ನು ಗುಜರಾತ್ನಿಂದ ಹೊರಗೆ ನಡೆಸಬೇಕೆಂಬ ಸಿಬಿಐ ಕೋರಿಕೆ ಬಗ್ಗೆ ತನ್ನ ಪ್ರತಿಕ್ರಿಯೆ ತಿಳಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಗುಜರಾತ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು.<br /> <br /> ಗುಜರಾತ್ನ ಮಾಜಿ ಗೃಹ ಸಚಿವ ಅಮಿತ್ ಷಾ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿಗಳಾಗಿರುವ ಈ ಪ್ರಕರಣದ ವಿಚಾರಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾದರೆ ಅದನ್ನು ರಾಜ್ಯದಿಂದ ಹೊರಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಸಿಬಿಐ ಹೇಳಿದೆ.<br /> <br /> ವರ್ಗಾವಣೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಫ್ತಾಬ್ ಅಲಂ ಮತ್ತು ಆರ್.ಎಂ.ಲೋಧಾ ಅವರನ್ನು ಒಳಗೊಂಡ ನ್ಯಾಯಪೀಠ, ಸರ್ಕಾರ ಹಾಗೂ ಇತರ 19 ಜನರಿಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಜ.27ಕ್ಕೆ ನಿಗದಿ ಮಾಡಿದೆ.<br /> <br /> ಈ ಪ್ರಕರಣದ ಕೆಲವು ಆರೋಪಿಗಳ ಸಂಬಂಧಿಗಳು ಪ್ರಾಸಿಕ್ಯೂಟರ್ಗಳಾಗಿದ್ದರೆ ಮತ್ತೆ ಕೆಲವರು ಅಧೀನ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರೂ ಆಗಿದ್ದಾರೆ ಎಂಬುದನ್ನು ಸಿಬಿಐ ನ್ಯಾಯಾಲಯದ ಗಮನಕ್ಕೆ ತಂದಿದೆ.<br /> <br /> ಗುಜರಾತ್ನ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಷಾ ಮತ್ತು ಮಾಜಿ ಪೊಲೀಸ್ ಅಧಿಕಾರಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದುದರಿಂದ ನ್ಯಾಯಾಲಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿ ಅಪಹರಿಸಿದ ಘಟನೆಗಳೂ ಈ ಹಿಂದೆ ನಡೆದಿವೆ ಎಂಬುದನ್ನು ಸಿಬಿಐ ಗಮನಕ್ಕೆ ತಂದಿದೆ.<br /> <br /> ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಈ ಪ್ರಕರಣದಲ್ಲಿ ನಿಜವಾದ ತಪ್ಪಿತಸ್ಥರನ್ನು ಪಾರು ಮಾಡುವುದಕ್ಕಾಗಿ ಹಲವಾರು ರೀತಿಯ ಒತ್ತಡಗಳನ್ನು ಹೇರಲಾಗುತ್ತಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಗುಜರಾತ್ನಿಂದ ಹೊರಕ್ಕೆ ವರ್ಗಾಯಿಸಬೇಕು ಎಂದು ಸಿಬಿಐ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆಯನ್ನು ಗುಜರಾತ್ನಿಂದ ಹೊರಗೆ ನಡೆಸಬೇಕೆಂಬ ಸಿಬಿಐ ಕೋರಿಕೆ ಬಗ್ಗೆ ತನ್ನ ಪ್ರತಿಕ್ರಿಯೆ ತಿಳಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಗುಜರಾತ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು.<br /> <br /> ಗುಜರಾತ್ನ ಮಾಜಿ ಗೃಹ ಸಚಿವ ಅಮಿತ್ ಷಾ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿಗಳಾಗಿರುವ ಈ ಪ್ರಕರಣದ ವಿಚಾರಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾದರೆ ಅದನ್ನು ರಾಜ್ಯದಿಂದ ಹೊರಕ್ಕೆ ವರ್ಗಾಯಿಸುವುದು ಸೂಕ್ತ ಎಂದು ಸಿಬಿಐ ಹೇಳಿದೆ.<br /> <br /> ವರ್ಗಾವಣೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಫ್ತಾಬ್ ಅಲಂ ಮತ್ತು ಆರ್.ಎಂ.ಲೋಧಾ ಅವರನ್ನು ಒಳಗೊಂಡ ನ್ಯಾಯಪೀಠ, ಸರ್ಕಾರ ಹಾಗೂ ಇತರ 19 ಜನರಿಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಜ.27ಕ್ಕೆ ನಿಗದಿ ಮಾಡಿದೆ.<br /> <br /> ಈ ಪ್ರಕರಣದ ಕೆಲವು ಆರೋಪಿಗಳ ಸಂಬಂಧಿಗಳು ಪ್ರಾಸಿಕ್ಯೂಟರ್ಗಳಾಗಿದ್ದರೆ ಮತ್ತೆ ಕೆಲವರು ಅಧೀನ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರೂ ಆಗಿದ್ದಾರೆ ಎಂಬುದನ್ನು ಸಿಬಿಐ ನ್ಯಾಯಾಲಯದ ಗಮನಕ್ಕೆ ತಂದಿದೆ.<br /> <br /> ಗುಜರಾತ್ನ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಷಾ ಮತ್ತು ಮಾಜಿ ಪೊಲೀಸ್ ಅಧಿಕಾರಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದುದರಿಂದ ನ್ಯಾಯಾಲಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿ ಅಪಹರಿಸಿದ ಘಟನೆಗಳೂ ಈ ಹಿಂದೆ ನಡೆದಿವೆ ಎಂಬುದನ್ನು ಸಿಬಿಐ ಗಮನಕ್ಕೆ ತಂದಿದೆ.<br /> <br /> ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಈ ಪ್ರಕರಣದಲ್ಲಿ ನಿಜವಾದ ತಪ್ಪಿತಸ್ಥರನ್ನು ಪಾರು ಮಾಡುವುದಕ್ಕಾಗಿ ಹಲವಾರು ರೀತಿಯ ಒತ್ತಡಗಳನ್ನು ಹೇರಲಾಗುತ್ತಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಗುಜರಾತ್ನಿಂದ ಹೊರಕ್ಕೆ ವರ್ಗಾಯಿಸಬೇಕು ಎಂದು ಸಿಬಿಐ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>