<p>ಡೆಹ್ರಾಡುನ್/ ನವದೆಹಲಿ (ಪಿಟಿಐ): ಕಾಂಗ್ರೆಸ್ನಲ್ಲಿ ಎದ್ದಿರುವ ಭಿನ್ನಮತ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು.<br /> <br /> ಆದರೆ ಈ ಇಬ್ಬರ ಮಧ್ಯೆ ಏನು ಮಾತುಕತೆ ನಡೆಯಿತೆಂಬುದು ಗೊತ್ತಾಗಿಲ್ಲ. ಇದೇ ವೇಳೆ ಸೋನಿಯಾ ಗಾಂಧಿ ಕೂಡ ಪಕ್ಷದ ಇತರ ಪ್ರಮುಖರೊಂದಿಗೆ ಉತ್ತರಾಖಂಡದಲ್ಲಿ ಭಿನ್ನಮತ ಶಮನಗೊಳಿಸಲು ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಚರ್ಚಿಸಿದರು. ಪ್ರಧಾನಿ ಮನಮೋಹನ್ ಸಿಂಗ್ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.<br /> <br /> ಕೇಂದ್ರ ಸಚಿವ ಹರೀಶ್ ರಾವತ್ ಅವರಿಗೆ ನಿಷ್ಠರಾದ ಪಕ್ಷದ 14 ಶಾಸಕರು ಬಹುಗುಣ ಅವರನ್ನು ಮುಖ್ಯಮಂತ್ರಿ ಯಾಗಿ ನೇಮಿಸಿರುವುದನ್ನು ವಿರೋಧಿಸಿ ಬಂಡಾಯ ಮೊಳಗಿಸಿರುವುದು ಈ ಪರಿಸ್ಥಿತಿಗೆ ಕಾರಣವಾಗಿದೆ.<br /> <br /> ಈ ಮಧ್ಯೆ ಪಕ್ಷದ ಮೂವರು ಶಾಸಕರಿಗೆ ಸ್ಪೀಕರ್ ಶೈಲೇಂದ್ರ ಮೋಹನ್ ಸಿಂಘಲ್ ಶುಕ್ರವಾರ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಇಲ್ಲಿ 32 ಶಾಸಕರ ಬಲ ಹೊಂದಿದ್ದು, ರಾವತ್ ನಿಷ್ಠರಾದ 14 ಶಾಸಕರು ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ.<br /> <br /> ಈ 14 ಶಾಸಕರು ಎಲ್ಲಿದ್ದಾರೆಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸ್ಪೀಕರ್ ಸಿಂಘಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಡೆಹ್ರಾಡುನ್/ ನವದೆಹಲಿ (ಪಿಟಿಐ): ಕಾಂಗ್ರೆಸ್ನಲ್ಲಿ ಎದ್ದಿರುವ ಭಿನ್ನಮತ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು.<br /> <br /> ಆದರೆ ಈ ಇಬ್ಬರ ಮಧ್ಯೆ ಏನು ಮಾತುಕತೆ ನಡೆಯಿತೆಂಬುದು ಗೊತ್ತಾಗಿಲ್ಲ. ಇದೇ ವೇಳೆ ಸೋನಿಯಾ ಗಾಂಧಿ ಕೂಡ ಪಕ್ಷದ ಇತರ ಪ್ರಮುಖರೊಂದಿಗೆ ಉತ್ತರಾಖಂಡದಲ್ಲಿ ಭಿನ್ನಮತ ಶಮನಗೊಳಿಸಲು ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಚರ್ಚಿಸಿದರು. ಪ್ರಧಾನಿ ಮನಮೋಹನ್ ಸಿಂಗ್ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.<br /> <br /> ಕೇಂದ್ರ ಸಚಿವ ಹರೀಶ್ ರಾವತ್ ಅವರಿಗೆ ನಿಷ್ಠರಾದ ಪಕ್ಷದ 14 ಶಾಸಕರು ಬಹುಗುಣ ಅವರನ್ನು ಮುಖ್ಯಮಂತ್ರಿ ಯಾಗಿ ನೇಮಿಸಿರುವುದನ್ನು ವಿರೋಧಿಸಿ ಬಂಡಾಯ ಮೊಳಗಿಸಿರುವುದು ಈ ಪರಿಸ್ಥಿತಿಗೆ ಕಾರಣವಾಗಿದೆ.<br /> <br /> ಈ ಮಧ್ಯೆ ಪಕ್ಷದ ಮೂವರು ಶಾಸಕರಿಗೆ ಸ್ಪೀಕರ್ ಶೈಲೇಂದ್ರ ಮೋಹನ್ ಸಿಂಘಲ್ ಶುಕ್ರವಾರ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಇಲ್ಲಿ 32 ಶಾಸಕರ ಬಲ ಹೊಂದಿದ್ದು, ರಾವತ್ ನಿಷ್ಠರಾದ 14 ಶಾಸಕರು ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ.<br /> <br /> ಈ 14 ಶಾಸಕರು ಎಲ್ಲಿದ್ದಾರೆಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಸ್ಪೀಕರ್ ಸಿಂಘಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>