<p><strong>ಬೆಂಗಳೂರು, (ಪಿಟಿಐ): </strong>ಕರ್ನಾಟಕ ಲೋಕಾಯುಕ್ತ ಪೊಲೀಸರು ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಳಿಯ ಸೋಹನ್ ಕುಮಾರ್ ಅವರಿಗೆ ಸೇರಿದ್ದ ಇಲ್ಲಿನ ನಾಲ್ಕು ಕಚೇರಿಗಳ ಮೇಲೆ ಮಂಗಳವಾರ ದಾಳಿ ನಡೆಸಿ ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು.</p>.<p>ಲೋಕಾಯುಕ್ತ ಪೊಲೀಸರ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರೇರಣಾ ಚೇಂಬರ್ಸ್, ಧವಳಗಿರಿ ಪ್ರಾಪರ್ಟಿಸ್ ನ ಎರಡು ಕಚೇರಿಗಳು ಮತ್ತು ಸಹ್ಯಾದ್ರಿ ಹೆಲ್ತ್ ಕೇರ್ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದವು.</p>.<p>ಧವಳಗಿರಿ ಪ್ರಾಪರ್ಟಿಸ್ ಸಂಸ್ಥೆ ಯಡಿಯೂರಪ್ಪ ಅವರ ಅಳಿಯ ಸೋಹನಕುಮಾರ ಮತ್ತು ಮಕ್ಕಳಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜೇಂದ್ರ ಅವರಿಗೆ ಸೇರಿದೆ.</p>.<p>ಅಳಿಯ ಮತ್ತು ಮಕ್ಕಳಿಗೆ ಅನುಕೂಲ ಕಲ್ಪಸುವ ಉದ್ದೇಶದಿಂದ ಕಾನೂನುಬಾಹಿರವಾಗಿ ಡಿನೋಟಿಪಿಕೇಷನ್ ಮಾಡಲಾಗಿದೆ ಹಾಗೂ ಅಕ್ರಮ ಎಸಗಲಾಗಿದೆ ಎಂಬ ಖಾಸಗಿ ದೂರಿನ ಪ್ರಕರಣದ ತನಿಖೆಯ ಅಂಗವಾಗಿ ಈ ದಾಳಿ ಮತ್ತು ದಾಖಲೆಗಳ ಪರಿಶೀಲನೆ ನಡೆದಿದೆ. </p>.<p>ಕೊಪ್ಪಳದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲೋಕಾಯುಕ್ತ ಪೊಲೀಸರ ದಾಳಿಯ ಕುರಿತು ತಮಗೆ ನಿನ್ನೆಯೇ ಮಾಹಿತಿ ಇತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, (ಪಿಟಿಐ): </strong>ಕರ್ನಾಟಕ ಲೋಕಾಯುಕ್ತ ಪೊಲೀಸರು ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಳಿಯ ಸೋಹನ್ ಕುಮಾರ್ ಅವರಿಗೆ ಸೇರಿದ್ದ ಇಲ್ಲಿನ ನಾಲ್ಕು ಕಚೇರಿಗಳ ಮೇಲೆ ಮಂಗಳವಾರ ದಾಳಿ ನಡೆಸಿ ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು.</p>.<p>ಲೋಕಾಯುಕ್ತ ಪೊಲೀಸರ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರೇರಣಾ ಚೇಂಬರ್ಸ್, ಧವಳಗಿರಿ ಪ್ರಾಪರ್ಟಿಸ್ ನ ಎರಡು ಕಚೇರಿಗಳು ಮತ್ತು ಸಹ್ಯಾದ್ರಿ ಹೆಲ್ತ್ ಕೇರ್ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದವು.</p>.<p>ಧವಳಗಿರಿ ಪ್ರಾಪರ್ಟಿಸ್ ಸಂಸ್ಥೆ ಯಡಿಯೂರಪ್ಪ ಅವರ ಅಳಿಯ ಸೋಹನಕುಮಾರ ಮತ್ತು ಮಕ್ಕಳಾದ ಬಿ.ವೈ.ರಾಘವೇಂದ್ರ ಮತ್ತು ಬಿ.ವೈ.ವಿಜೇಂದ್ರ ಅವರಿಗೆ ಸೇರಿದೆ.</p>.<p>ಅಳಿಯ ಮತ್ತು ಮಕ್ಕಳಿಗೆ ಅನುಕೂಲ ಕಲ್ಪಸುವ ಉದ್ದೇಶದಿಂದ ಕಾನೂನುಬಾಹಿರವಾಗಿ ಡಿನೋಟಿಪಿಕೇಷನ್ ಮಾಡಲಾಗಿದೆ ಹಾಗೂ ಅಕ್ರಮ ಎಸಗಲಾಗಿದೆ ಎಂಬ ಖಾಸಗಿ ದೂರಿನ ಪ್ರಕರಣದ ತನಿಖೆಯ ಅಂಗವಾಗಿ ಈ ದಾಳಿ ಮತ್ತು ದಾಖಲೆಗಳ ಪರಿಶೀಲನೆ ನಡೆದಿದೆ. </p>.<p>ಕೊಪ್ಪಳದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲೋಕಾಯುಕ್ತ ಪೊಲೀಸರ ದಾಳಿಯ ಕುರಿತು ತಮಗೆ ನಿನ್ನೆಯೇ ಮಾಹಿತಿ ಇತ್ತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>