<p>ಮಡಿಕೇರಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ, ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಎದುರು ಗುರುವಾರ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು.<br /> <br /> ಜಿಲ್ಲೆಯ ಪ್ರತಿ ದಲಿತ ಕಾಲೊನಿಗಳಿಗೆ ಸಿಮೆಂಟ್ ರೋಡ್ ನಿರ್ಮಾಣ ಆಗಬೇಕು. ದಲಿತರ ಉಪಯೋಗಕ್ಕೆ ಸಿಮೀತವಾದಂತೆ ಸಮುದಾಯ ಭವನ ನಿರ್ಮಾಣ ಮಾಡಲು ಜಾಗ ನೀಡುವಂತೆ ಅವರು ಒತ್ತಾಯಿಸಿದರು.<br /> <br /> ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಪೈಸಾರಿ, ದೇವರಕಾಡು, ಕಂದಾಯ ಭೂಮಿ ಸೇರಿದಂತೆ ಇನ್ನಿತರೆ ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸದಂತೆ ಕ್ರಮ ಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> <br /> ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಟಿ.ಎನ್. ಗೋವಿಂದಪ್ಪ, ಜಿಲ್ಲಾ ಸಂಚಾಲಕ ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಎಚ್.ಆರ್. ಪರಶುರಾಮ್, ಪ್ರಮುಖರಾದ ರಜನಿಕಾಂತ್, ಮಹದೇವು, ಮೇರಿ, ನಿರ್ಮಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ, ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಎದುರು ಗುರುವಾರ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿದರು.<br /> <br /> ಜಿಲ್ಲೆಯ ಪ್ರತಿ ದಲಿತ ಕಾಲೊನಿಗಳಿಗೆ ಸಿಮೆಂಟ್ ರೋಡ್ ನಿರ್ಮಾಣ ಆಗಬೇಕು. ದಲಿತರ ಉಪಯೋಗಕ್ಕೆ ಸಿಮೀತವಾದಂತೆ ಸಮುದಾಯ ಭವನ ನಿರ್ಮಾಣ ಮಾಡಲು ಜಾಗ ನೀಡುವಂತೆ ಅವರು ಒತ್ತಾಯಿಸಿದರು.<br /> <br /> ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಪೈಸಾರಿ, ದೇವರಕಾಡು, ಕಂದಾಯ ಭೂಮಿ ಸೇರಿದಂತೆ ಇನ್ನಿತರೆ ಸರ್ಕಾರಿ ಜಮೀನಿನಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸದಂತೆ ಕ್ರಮ ಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಅವರಿಗೆ ಮನವಿ ಪತ್ರ ಸಲ್ಲಿಸಿದರು.<br /> <br /> ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಟಿ.ಎನ್. ಗೋವಿಂದಪ್ಪ, ಜಿಲ್ಲಾ ಸಂಚಾಲಕ ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಎಚ್.ಆರ್. ಪರಶುರಾಮ್, ಪ್ರಮುಖರಾದ ರಜನಿಕಾಂತ್, ಮಹದೇವು, ಮೇರಿ, ನಿರ್ಮಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>