<p>ಬಸವಕಲ್ಯಾಣ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಮೀಪದಲ್ಲಿರುವ ಮಹೇಬೂಬ್ ನಗರ ಹಾಗೂ ಪಕ್ಕದ ಕಾಲೊನಿಗಳಿಗೆ ಮೂಲ ಸೌಲಭ್ಯ ಒದಗಿಸದಿರುವುದನ್ನು ವಿರೋಧಿಸಿ ಗುರುವಾರ ಆ ಪ್ರದೇಶದ ನಾಗರಿಕರು ರ್ಯಾಲಿ ನಡೆಸಿ ಮನವಿಪತ್ರ ಸಲ್ಲಿಸಿದರು.<br /> <br /> ಮಹಾತ್ಮಾಗಾಂಧಿ ವೃತ್ತದಿಂದ ಮುಖ್ಯರಸ್ತೆ ಮೂಲಕ ರ್ಯಾಲಿ ನಡೆಸಲಾಯಿತು. `ನಗರ ಸಭೆವಾಲೋ ಶರಮಕರೋ, ಗಂಧಿ ನಾಲಿ ಸಾಫ ಕರೋ~ `ನಗರಸಭೆ ಅಧಿಕಾರಿಗಳಿಗೆ ಧಿಕ್ಕಾರ~ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು. ತಹಸೀಲ್ದಾರ್ ಹಳೇ ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಬರೆದ ಮನವಿಪತ್ರವನ್ನು ಶಿರಸ್ತೇದಾರ ಶಂಕರ ರಾಠೋಡ ಅವರಿಗೆ ಸಲ್ಲಿಸಲಾಯಿತು.<br /> <br /> ಕಳೆದ 9 ವರ್ಷಗಳಿಂದ ಮನವಿಪತ್ರಗಳನ್ನು ಸಲ್ಲಿಸಲಾಗುತ್ತಿದ್ದರೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಕೆಲವು ಸಲ ನಗರಸಭೆಗೆ ಮುತ್ತಿಗೆ ಹಾಕಲಾಗಿದ್ದರೂ ಪ್ರಯೋಜನ ಆಗಿಲ್ಲ. ಬದಲಾಗಿ ನಗರಸಭೆಯ ಕೆಲ ಅಧಿಕಾರಿಗಳು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ನಾಗರಿಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮನವಿಪತ್ರದಲ್ಲಿ ಹೇಳಲಾಗಿದೆ.<br /> <br /> ಇಲ್ಲಿನ ಎಲ್ಲ ರಸ್ತೆಗಳಲ್ಲಿ ಚರಂಡಿ ನೀರು ನಿಂತಿದ್ದು ನಡೆಯಲು ಬಾರದಂತಾಗಿದೆ. ಮನೆಗಳ ಹೊರಗೆ ಬರಬೇಕಾದರೆ ಗಬ್ಬು ವಾಸನೆ ಮೂಗಿಗೆ ಬಡಿಯುತ್ತಿದೆ. ನಳಗಳಿಗೆ ನಿಯಮಿತವಾಗಿ ನೀರು ಬರುತ್ತಿಲ್ಲ. <br /> <br /> ಓಣಿಯಲ್ಲಿನ ಕಸವನ್ನು ಪ್ರತಿದಿನ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸದ ಕಾರಣ ರಾತ್ರಿ ಕತ್ತಲೆ ಆವರಿಸುತ್ತಿದೆ ಎಂದು ನಾಗರಿಕರು ಗೋಳು ತೋಡಿಕೊಂಡರು.<br /> <br /> ಓಣಿಯ ಪ್ರಮುಖರಾದ ಅಲ್ತಾಫ್ ಅಹ್ಮದ್, ಜುಲ್ಫೇಕಾರ್ ಕುರೇಶಿ, ಖಾಜಾಭಾಯಿ ಕುರೇಶಿ, ಜಾಕೀರಮಿಯ್ಯಾ, ಮಹೇಬೂಬ್ಸಾಬ್ ಮುಂತಾದವರು ಪಾಲ್ಗೊಂಡಿದ್ದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದದರು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ಇಲ್ಲಿನ ಬಸ್ ನಿಲ್ದಾಣಕ್ಕೆ ಸಮೀಪದಲ್ಲಿರುವ ಮಹೇಬೂಬ್ ನಗರ ಹಾಗೂ ಪಕ್ಕದ ಕಾಲೊನಿಗಳಿಗೆ ಮೂಲ ಸೌಲಭ್ಯ ಒದಗಿಸದಿರುವುದನ್ನು ವಿರೋಧಿಸಿ ಗುರುವಾರ ಆ ಪ್ರದೇಶದ ನಾಗರಿಕರು ರ್ಯಾಲಿ ನಡೆಸಿ ಮನವಿಪತ್ರ ಸಲ್ಲಿಸಿದರು.<br /> <br /> ಮಹಾತ್ಮಾಗಾಂಧಿ ವೃತ್ತದಿಂದ ಮುಖ್ಯರಸ್ತೆ ಮೂಲಕ ರ್ಯಾಲಿ ನಡೆಸಲಾಯಿತು. `ನಗರ ಸಭೆವಾಲೋ ಶರಮಕರೋ, ಗಂಧಿ ನಾಲಿ ಸಾಫ ಕರೋ~ `ನಗರಸಭೆ ಅಧಿಕಾರಿಗಳಿಗೆ ಧಿಕ್ಕಾರ~ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಯಿತು. ತಹಸೀಲ್ದಾರ್ ಹಳೇ ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಬರೆದ ಮನವಿಪತ್ರವನ್ನು ಶಿರಸ್ತೇದಾರ ಶಂಕರ ರಾಠೋಡ ಅವರಿಗೆ ಸಲ್ಲಿಸಲಾಯಿತು.<br /> <br /> ಕಳೆದ 9 ವರ್ಷಗಳಿಂದ ಮನವಿಪತ್ರಗಳನ್ನು ಸಲ್ಲಿಸಲಾಗುತ್ತಿದ್ದರೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ. ಕೆಲವು ಸಲ ನಗರಸಭೆಗೆ ಮುತ್ತಿಗೆ ಹಾಕಲಾಗಿದ್ದರೂ ಪ್ರಯೋಜನ ಆಗಿಲ್ಲ. ಬದಲಾಗಿ ನಗರಸಭೆಯ ಕೆಲ ಅಧಿಕಾರಿಗಳು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ನಾಗರಿಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮನವಿಪತ್ರದಲ್ಲಿ ಹೇಳಲಾಗಿದೆ.<br /> <br /> ಇಲ್ಲಿನ ಎಲ್ಲ ರಸ್ತೆಗಳಲ್ಲಿ ಚರಂಡಿ ನೀರು ನಿಂತಿದ್ದು ನಡೆಯಲು ಬಾರದಂತಾಗಿದೆ. ಮನೆಗಳ ಹೊರಗೆ ಬರಬೇಕಾದರೆ ಗಬ್ಬು ವಾಸನೆ ಮೂಗಿಗೆ ಬಡಿಯುತ್ತಿದೆ. ನಳಗಳಿಗೆ ನಿಯಮಿತವಾಗಿ ನೀರು ಬರುತ್ತಿಲ್ಲ. <br /> <br /> ಓಣಿಯಲ್ಲಿನ ಕಸವನ್ನು ಪ್ರತಿದಿನ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ವಿದ್ಯುತ್ ಕಂಬಗಳಿಗೆ ದೀಪಗಳನ್ನು ಅಳವಡಿಸದ ಕಾರಣ ರಾತ್ರಿ ಕತ್ತಲೆ ಆವರಿಸುತ್ತಿದೆ ಎಂದು ನಾಗರಿಕರು ಗೋಳು ತೋಡಿಕೊಂಡರು.<br /> <br /> ಓಣಿಯ ಪ್ರಮುಖರಾದ ಅಲ್ತಾಫ್ ಅಹ್ಮದ್, ಜುಲ್ಫೇಕಾರ್ ಕುರೇಶಿ, ಖಾಜಾಭಾಯಿ ಕುರೇಶಿ, ಜಾಕೀರಮಿಯ್ಯಾ, ಮಹೇಬೂಬ್ಸಾಬ್ ಮುಂತಾದವರು ಪಾಲ್ಗೊಂಡಿದ್ದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದದರು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>