<p><strong>ಚಿತ್ರದುರ್ಗ: </strong>‘ಲೋಕಸಭಾ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಎಸ್. ನಿಜಲಿಂಗಪ್ಪ ಹಾಗೂ ಜನಾರ್ದನ ಸ್ವಾಮಿ ಹೊರತುಪಡಿಸಿದರೆ ಉಳಿದ ಸಂಸದರೆಲ್ಲ ಹೊರಗಿನವರೇ ಆಗಿದ್ದು, ಈ ಬಾರಿಯೂ ಕಾಂಗ್ರೆಸ್ ಹೊರಗಿನವರಗೆ ಟಿಕೆಟ್ ನೀಡುತ್ತಿದೆ. ಇದು ನಮ್ಮ ಅಭ್ಯರ್ಥಿ ಗೆಲುವಿಗೆ ವರದಾನವಾಗಿದೆ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯ ಪಟ್ಟರು<br /> ಇಲ್ಲಿನ ಬಸವೇಶ್ವರ ಟಾಕೀಸ್ ರಸ್ತೆಯಲ್ಲಿನ ಮಾರುತಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಚುನಾವಣಾ ಪ್ರಚಾರದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.<br /> <br /> ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಒಂದು ಉತ್ತಮ ಸ್ಥಾನ ಕಲ್ಪಿಸಬೇಕೆಂದರೆ ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಬೇಕು. ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಸಂಸದರನ್ನು ಗೆಲ್ಲಿಸಬೇಕು’ ಎಂದು ಮತದಾರರಲ್ಲಿ ಮನವಿ ಮಾಡಿದರು.<br /> <br /> ‘ದೇಶದ 16 ಯುವ ಸಂಸದರಲ್ಲಿ ನಮ್ಮ ಸಂಸದ ಜನಾರ್ದನ ಸ್ವಾಮಿ ಸ್ಥಾನ ಪಡೆದಿದ್ದಾರೆ. ನಾಲ್ಕೈದು ದಶಕಗಳಿಂದ ನೆನಗುದಿಗೆ ಬಿದ್ದಿದ್ದ ರೈಲ್ವೆ, ವಿಜ್ಞಾನ ನಗರದಂತಹ ಯೋಜನೆಗಳಿಗೆ ಐದು ವರ್ಷಗಳಲ್ಲಿ ಚಾಲನೆ ನೀಡಿದ್ದಾರೆ. ಇಷ್ಟೆಲ್ಲ ಧನಾತ್ಮಕ ಅಂಶಗಳನ್ನು ಮೆಚ್ಚಿ ಈ ಬಾರಿ ಪ್ರಜ್ಞಾವಂತ ಮತದಾರರು ಬಿಜೆಪಿಗೆ ಮತನೀಡುವ ವಿಶ್ವಾಸವಿದೆ’ ಎಂದರು. ‘ಕಳೆದ ಬಾರಿ ಯಾವದೇ ಪ್ರಭಾವವಿಲ್ಲದೇ ಕ್ಷೇತ್ರದ ಜನ ಜನಾರ್ದನಸ್ವಾಮಿ ಅವರನ್ನು ೧.35 ಲಕ್ಷ ಅಂತರದಿಂದ ಗೆಲ್ಲಿಸಿದ್ದಾರೆ ಎಂದರು.<br /> <br /> <strong>‘ಚಂದ್ರಪ್ಪ ಗೈರು; ಅಪಾರ್ಥ ಬೇಡ’</strong><br /> ಕಾರ್ಯಾಲಯ ಉದ್ಘಾಟನೆಗೆ ಮಾಜಿ ಶಾಸಕ ಹೊಳಲ್ಕೆರೆಯ ಎಂ.ಚಂದ್ರಪ್ಪ ಅವರ ಗೈರು ಎದ್ದು ಕಾಣುತ್ತಿತ್ತು. ಈ ಬಗ್ಗೆ ಪತ್ರಕರ್ತರು ಶಾಸಕರನ್ನು ಪ್ರಶ್ನಿಸಿದಾಗ, ‘ಸಭೆಗೆ ಮಾಜಿ ಶಾಸಕ ಚಂದ್ರಪ್ಪ ಬಂದಿಲ್ಲ, ತಿಪ್ಪಾರೆಡ್ಡಿ ಹೇಳಿದವರಿಗೆ ಟಿಕೆಟ್ ನೀಡಿಲ್ಲ ಎನ್ನುವ ಅನುಮಾನಗಳು ಬೇಡವೇ ಬೇಡ’ ಎಂದು ಅವರು ತಿಳಿಸಿದರು.<br /> <br /> ಸಂಸದ ಜನಾರ್ದನಸ್ವಾಮಿ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಕೇವಲ ಕಾಮಗಾರಿಗಳ ಶಂಕುಸ್ಥಾಪನೆ, ರಾಜ್ಯ ಸರ್ಕಾರ ಕೇವಲ ಉದ್ಘಾಟನೆಯಲ್ಲೇ ಕಾಲ ಹರಣ ಮಾಡುತ್ತಿದೆ. ೪೦-–೫೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಯೋಜನೆ, ರೈಲ್ವೆ ಯೋಜನೆಗಳಿಗೆ ಬಿಜೆಪಿ ಸರ್ಕಾರ ತ್ವರಿತ ಚಾಲನೆ ನೀಡುವ ಮೂಲಕ ಬಯಲು ಸೀಮೆಯ ಅಭಿವೃದ್ಧಿಗೆ ಒತ್ತು ನೀಡಿದೆ’ ಎಂದರು.<br /> <br /> ‘ಹಿರಿಯರಾದ ಯಡಿಯೂರಪ್ಪ, ಶ್ರೀರಾಮುಲು ಪಕ್ಷಕ್ಕೆ ಮರಳಿದ್ದಾರೆ. ಬಿಜೆಪಿ ಈಗ ಮತ್ತಷ್ಟು ಬಲಿಷ್ಠವಾಗಿದೆ. ಪಕ್ಷಕ್ಕೆ ಮರಳಿದ ಹಾಗೂ ಅವರ ಬರುವಿಕೆಗೆ ಒಪ್ಪಿದ ಕೇಂದ್ರ ಬಿಜೆಪಿ ನಿರ್ಧಾರವನ್ನು ಸಂತೋಷದಿಂದ ಸ್ವಾಗತಿಸುತ್ತಿದ್ದೇವೆ’ ಎಂದು ತಿಳಿಸಿದರು.<br /> <br /> ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ಬಿಜೆಪಿ ಲೋಕಸಭಾ ಸಹ ಪ್ರಭಾರಿ ಜಿ.ಎಂ.ಸುರೇಶ್, ಜಿಲ್ಲಾಧ್ಯಕ್ಷ ನರೇಂದ್ರನಾಥ್, ಮುಖಂಡರಾದ ಕೆ.ಎಸ್.ನವೀನ್ ಕುಮಾರ್, ಲಿಂಗಮೂರ್ತಿ, ಬದರಿನಾಥ್, ತಿಪ್ಪೇಸ್ವಾಮಿ, ಕೊಲ್ಲಿಲಕ್ಷ್ಮಿ, ಶ್ಯಾಮಲ, ವಕ್ತಾರ ಪ್ರತಾಪ್ ರುದ್ರದೇವ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಲೋಕಸಭಾ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಎಸ್. ನಿಜಲಿಂಗಪ್ಪ ಹಾಗೂ ಜನಾರ್ದನ ಸ್ವಾಮಿ ಹೊರತುಪಡಿಸಿದರೆ ಉಳಿದ ಸಂಸದರೆಲ್ಲ ಹೊರಗಿನವರೇ ಆಗಿದ್ದು, ಈ ಬಾರಿಯೂ ಕಾಂಗ್ರೆಸ್ ಹೊರಗಿನವರಗೆ ಟಿಕೆಟ್ ನೀಡುತ್ತಿದೆ. ಇದು ನಮ್ಮ ಅಭ್ಯರ್ಥಿ ಗೆಲುವಿಗೆ ವರದಾನವಾಗಿದೆ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯ ಪಟ್ಟರು<br /> ಇಲ್ಲಿನ ಬಸವೇಶ್ವರ ಟಾಕೀಸ್ ರಸ್ತೆಯಲ್ಲಿನ ಮಾರುತಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಚುನಾವಣಾ ಪ್ರಚಾರದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.<br /> <br /> ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಒಂದು ಉತ್ತಮ ಸ್ಥಾನ ಕಲ್ಪಿಸಬೇಕೆಂದರೆ ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಬೇಕು. ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಸಂಸದರನ್ನು ಗೆಲ್ಲಿಸಬೇಕು’ ಎಂದು ಮತದಾರರಲ್ಲಿ ಮನವಿ ಮಾಡಿದರು.<br /> <br /> ‘ದೇಶದ 16 ಯುವ ಸಂಸದರಲ್ಲಿ ನಮ್ಮ ಸಂಸದ ಜನಾರ್ದನ ಸ್ವಾಮಿ ಸ್ಥಾನ ಪಡೆದಿದ್ದಾರೆ. ನಾಲ್ಕೈದು ದಶಕಗಳಿಂದ ನೆನಗುದಿಗೆ ಬಿದ್ದಿದ್ದ ರೈಲ್ವೆ, ವಿಜ್ಞಾನ ನಗರದಂತಹ ಯೋಜನೆಗಳಿಗೆ ಐದು ವರ್ಷಗಳಲ್ಲಿ ಚಾಲನೆ ನೀಡಿದ್ದಾರೆ. ಇಷ್ಟೆಲ್ಲ ಧನಾತ್ಮಕ ಅಂಶಗಳನ್ನು ಮೆಚ್ಚಿ ಈ ಬಾರಿ ಪ್ರಜ್ಞಾವಂತ ಮತದಾರರು ಬಿಜೆಪಿಗೆ ಮತನೀಡುವ ವಿಶ್ವಾಸವಿದೆ’ ಎಂದರು. ‘ಕಳೆದ ಬಾರಿ ಯಾವದೇ ಪ್ರಭಾವವಿಲ್ಲದೇ ಕ್ಷೇತ್ರದ ಜನ ಜನಾರ್ದನಸ್ವಾಮಿ ಅವರನ್ನು ೧.35 ಲಕ್ಷ ಅಂತರದಿಂದ ಗೆಲ್ಲಿಸಿದ್ದಾರೆ ಎಂದರು.<br /> <br /> <strong>‘ಚಂದ್ರಪ್ಪ ಗೈರು; ಅಪಾರ್ಥ ಬೇಡ’</strong><br /> ಕಾರ್ಯಾಲಯ ಉದ್ಘಾಟನೆಗೆ ಮಾಜಿ ಶಾಸಕ ಹೊಳಲ್ಕೆರೆಯ ಎಂ.ಚಂದ್ರಪ್ಪ ಅವರ ಗೈರು ಎದ್ದು ಕಾಣುತ್ತಿತ್ತು. ಈ ಬಗ್ಗೆ ಪತ್ರಕರ್ತರು ಶಾಸಕರನ್ನು ಪ್ರಶ್ನಿಸಿದಾಗ, ‘ಸಭೆಗೆ ಮಾಜಿ ಶಾಸಕ ಚಂದ್ರಪ್ಪ ಬಂದಿಲ್ಲ, ತಿಪ್ಪಾರೆಡ್ಡಿ ಹೇಳಿದವರಿಗೆ ಟಿಕೆಟ್ ನೀಡಿಲ್ಲ ಎನ್ನುವ ಅನುಮಾನಗಳು ಬೇಡವೇ ಬೇಡ’ ಎಂದು ಅವರು ತಿಳಿಸಿದರು.<br /> <br /> ಸಂಸದ ಜನಾರ್ದನಸ್ವಾಮಿ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಕೇವಲ ಕಾಮಗಾರಿಗಳ ಶಂಕುಸ್ಥಾಪನೆ, ರಾಜ್ಯ ಸರ್ಕಾರ ಕೇವಲ ಉದ್ಘಾಟನೆಯಲ್ಲೇ ಕಾಲ ಹರಣ ಮಾಡುತ್ತಿದೆ. ೪೦-–೫೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಯೋಜನೆ, ರೈಲ್ವೆ ಯೋಜನೆಗಳಿಗೆ ಬಿಜೆಪಿ ಸರ್ಕಾರ ತ್ವರಿತ ಚಾಲನೆ ನೀಡುವ ಮೂಲಕ ಬಯಲು ಸೀಮೆಯ ಅಭಿವೃದ್ಧಿಗೆ ಒತ್ತು ನೀಡಿದೆ’ ಎಂದರು.<br /> <br /> ‘ಹಿರಿಯರಾದ ಯಡಿಯೂರಪ್ಪ, ಶ್ರೀರಾಮುಲು ಪಕ್ಷಕ್ಕೆ ಮರಳಿದ್ದಾರೆ. ಬಿಜೆಪಿ ಈಗ ಮತ್ತಷ್ಟು ಬಲಿಷ್ಠವಾಗಿದೆ. ಪಕ್ಷಕ್ಕೆ ಮರಳಿದ ಹಾಗೂ ಅವರ ಬರುವಿಕೆಗೆ ಒಪ್ಪಿದ ಕೇಂದ್ರ ಬಿಜೆಪಿ ನಿರ್ಧಾರವನ್ನು ಸಂತೋಷದಿಂದ ಸ್ವಾಗತಿಸುತ್ತಿದ್ದೇವೆ’ ಎಂದು ತಿಳಿಸಿದರು.<br /> <br /> ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ಬಿಜೆಪಿ ಲೋಕಸಭಾ ಸಹ ಪ್ರಭಾರಿ ಜಿ.ಎಂ.ಸುರೇಶ್, ಜಿಲ್ಲಾಧ್ಯಕ್ಷ ನರೇಂದ್ರನಾಥ್, ಮುಖಂಡರಾದ ಕೆ.ಎಸ್.ನವೀನ್ ಕುಮಾರ್, ಲಿಂಗಮೂರ್ತಿ, ಬದರಿನಾಥ್, ತಿಪ್ಪೇಸ್ವಾಮಿ, ಕೊಲ್ಲಿಲಕ್ಷ್ಮಿ, ಶ್ಯಾಮಲ, ವಕ್ತಾರ ಪ್ರತಾಪ್ ರುದ್ರದೇವ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>