<p>ಶಿವಮೊಗ್ಗ: ಸ್ಥಳೀಯ ಸಂಸ್ಕೃತಿ, ಜಾನಪದ ಕಲೆ ಜತೆ ದೇಸಿ ಚಿಂತನೆಯ ನೆಲೆಯಲ್ಲಿ ಶಿವಮೊಗ್ಗ ರಂಗಾಯಣ ಕಟ್ಟುವ ಉದ್ದೇಶವಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಹೊ.ನಾ. ಸತ್ಯ ಪ್ರಕಟಿಸಿದರು.<br /> <br /> ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ರಂಗಾಯಣಕ್ಕೆ ಸ್ವತಂತ್ರ ಅಸ್ತಿತ್ವ ಇದ್ದು, ಇದು ಮೈಸೂರಿನ ರಂಗಾಯಣದ ಉಪಘಟಕ ಅಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಸರ್ಕಾರ ಹೊಸದಾಗಿ ಶಿವಮೊಗ್ಗ, ಧಾರವಾಡ ರಂಗಾಯಣಗಳನ್ನು ಪ್ರಕಟಿಸಿದ್ದು, ಮೈಸೂರಿನ ರಂಗಾಯಣದ ಅನುಭವದ ಆಧಾರದ ಮೇಲೆ ಶಿವಮೊಗ್ಗ, ಧಾರವಾಡಕ್ಕೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ರಚಿಸುತ್ತಿದೆ. ಹಾಗೆಯೇ, ಸರ್ಕಾರ, ಈ ರಂಗಾಯಣಕ್ಕೆ ಸಲಹಾ ಸಮಿತಿ ರಚಿಸಲಿದೆ. <br /> <br /> ಮಾರ್ಗದರ್ಶಿ ಸೂತ್ರ ಹಾಗೂ ಸಲಹಾ ಸಮಿತಿ ರಚನೆಗೊಂಡ ನಂತರವಷ್ಟೇ ಶಿವಮೊಗ್ಗ ರಂಗಾಯಣದ ರೂಪುರೇಷೆಗಳ ಬಗ್ಗೆ ನಿರ್ದಿಷ್ಟವಾಗಿ ಚಿಂತನೆ ನಡೆಸಲು ಸಾಧ್ಯ ಎಂದರು.<br /> <br /> ಸರ್ಕಾರದ ಆಪೇಕ್ಷೆ ಬಿಟ್ಟು ತಾವು ಬೇರೆ ಏನೂ ಮಾಡಲು ಸಾಧ್ಯವಿಲ್ಲ ಎಂದ ಅವರು, ತಾವು 25 ವರ್ಷಗಳಿಂದ ರಂಗಭೂಮಿಯಲ್ಲಿ ಕ್ರಿಯಾಶೀಲರಾಗಿದ್ದು, ವಿಶೇಷವಾಗಿ ಮಕ್ಕಳ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.<br /> <br /> ಮಕ್ಕಳ ರಂಗಭೂಮಿ ಜತೆ ಶಾಲಾ-ಕಾಲೇಜಿನ ಯುವಕ- ಯುವತಿಯರಿಗೆ ತರಬೇತಿ ನೀಡಿ, ಅವರಿಂದ ಪ್ರಯೋಗಗಳನ್ನು ನಡೆಸಲಾಗುವುದು. ಹಾಗೆಯೇ, ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ, ಅಂತರರಾಷ್ಟ್ರೀಯ ನಾಟಕೋತ್ಸವಗಳನ್ನು ಶಿವಮೊಗ್ಗಕ್ಕೂ ಕರೆತಂದು ಪ್ರದರ್ಶನ ಏರ್ಪಡಿಸುವ ಪ್ರಯತ್ನ ನಡೆಸಲಾಗುವುದು ಎಂದರು.<br /> <br /> ಜಿಲ್ಲೆಯಲ್ಲಿ ನೀನಾಸಂ, ಕುವೆಂಪು ವಿಶ್ವವಿದ್ಯಾಲಯ, ಕುಪ್ಪಳಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ಮತ್ತಿತರ ಸಂಸ್ಥೆಗಳಿದ್ದು, ಅವುಗಳ ಸಲಹೆ-ಸಹಕಾರ ಪಡೆದುಕೊಳ್ಳಲಾಗುವುದು ಎಂದರು.<br /> <br /> ರಂಗಾಯಣ ಕಟ್ಟುವ ಬಗ್ಗೆ ಕಾರಂತರು ಭೋಪಾಲ್ನಲ್ಲಿ ಮಾಡಿದ ಕೆಲಸ ಹಾಗೂ ಚಂಡಿಘಡದಲ್ಲಿರುವ ರಂಗಭೂಮಿ ನಮ್ಮ ಮುಂದಿನ ಆದರ್ಶಗಳು. ಶಿವಮೊಗ್ಗ ರಂಗಾಯಣ ಕಟ್ಟುವ ಬಗ್ಗೆ ಕಲಾವಿದರು, ತಂತ್ರಜ್ಞರು, ನಾಗರಿಕರ ಸಲಹೆ-ಸಹಕಾರಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು ಎಂದರು. <br /> <br /> ರಂಗಾಯಣ ಕಾರ್ಯಾಲಯವನ್ನು ಕನ್ನಡ ಸಂಸ್ಕೃತಿ ಭವನದಲ್ಲಿ ತೆರೆಯಲು ಉದ್ದೇಶಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತದ ಅನುಮತಿ ಬೇಕು. ಸದ್ಯಕ್ಕೆ ಕುವೆಂಪು ರಂಗಮಂದಿರದಲ್ಲಿ ಸ್ಥಳಾವಕಾಶ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಈಗಿರುವ ಜಿಲ್ಲಾ ಕಾರಾಗೃಹದ 46 ಎಕರೆ ಜಾಗದಲ್ಲಿ 3 ಎಕರೆ ಜಾಗವನ್ನು ರಂಗಾಯಣಕ್ಕೆ ನೀಡಿ ಎನ್ನುವುದು ನಮ್ಮ ಬೇಡಿಕೆ. ಸಲಹಾ ಸಮಿತಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ ಎಂದರು.<br /> <br /> ಸುದ್ದಿಗೋಷ್ಠಿಯಲ್ಲಿ `ನನ್ನ ಕನಸಿನ ಶಿವಮೊಗ್ಗ~ದ ಅಧ್ಯಕ್ಷ ಎನ್. ಗೋಪಿನಾಥ್, ಕಾರ್ಯದರ್ಶಿ ಅ.ನಾ. ವಿಜಯೇಂದ್ರರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸ್ಥಳೀಯ ಸಂಸ್ಕೃತಿ, ಜಾನಪದ ಕಲೆ ಜತೆ ದೇಸಿ ಚಿಂತನೆಯ ನೆಲೆಯಲ್ಲಿ ಶಿವಮೊಗ್ಗ ರಂಗಾಯಣ ಕಟ್ಟುವ ಉದ್ದೇಶವಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಹೊ.ನಾ. ಸತ್ಯ ಪ್ರಕಟಿಸಿದರು.<br /> <br /> ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ರಂಗಾಯಣಕ್ಕೆ ಸ್ವತಂತ್ರ ಅಸ್ತಿತ್ವ ಇದ್ದು, ಇದು ಮೈಸೂರಿನ ರಂಗಾಯಣದ ಉಪಘಟಕ ಅಲ್ಲ ಎಂದು ಸ್ಪಷ್ಟಪಡಿಸಿದರು.<br /> <br /> ಸರ್ಕಾರ ಹೊಸದಾಗಿ ಶಿವಮೊಗ್ಗ, ಧಾರವಾಡ ರಂಗಾಯಣಗಳನ್ನು ಪ್ರಕಟಿಸಿದ್ದು, ಮೈಸೂರಿನ ರಂಗಾಯಣದ ಅನುಭವದ ಆಧಾರದ ಮೇಲೆ ಶಿವಮೊಗ್ಗ, ಧಾರವಾಡಕ್ಕೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ರಚಿಸುತ್ತಿದೆ. ಹಾಗೆಯೇ, ಸರ್ಕಾರ, ಈ ರಂಗಾಯಣಕ್ಕೆ ಸಲಹಾ ಸಮಿತಿ ರಚಿಸಲಿದೆ. <br /> <br /> ಮಾರ್ಗದರ್ಶಿ ಸೂತ್ರ ಹಾಗೂ ಸಲಹಾ ಸಮಿತಿ ರಚನೆಗೊಂಡ ನಂತರವಷ್ಟೇ ಶಿವಮೊಗ್ಗ ರಂಗಾಯಣದ ರೂಪುರೇಷೆಗಳ ಬಗ್ಗೆ ನಿರ್ದಿಷ್ಟವಾಗಿ ಚಿಂತನೆ ನಡೆಸಲು ಸಾಧ್ಯ ಎಂದರು.<br /> <br /> ಸರ್ಕಾರದ ಆಪೇಕ್ಷೆ ಬಿಟ್ಟು ತಾವು ಬೇರೆ ಏನೂ ಮಾಡಲು ಸಾಧ್ಯವಿಲ್ಲ ಎಂದ ಅವರು, ತಾವು 25 ವರ್ಷಗಳಿಂದ ರಂಗಭೂಮಿಯಲ್ಲಿ ಕ್ರಿಯಾಶೀಲರಾಗಿದ್ದು, ವಿಶೇಷವಾಗಿ ಮಕ್ಕಳ ರಂಗಭೂಮಿ ಬಗ್ಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.<br /> <br /> ಮಕ್ಕಳ ರಂಗಭೂಮಿ ಜತೆ ಶಾಲಾ-ಕಾಲೇಜಿನ ಯುವಕ- ಯುವತಿಯರಿಗೆ ತರಬೇತಿ ನೀಡಿ, ಅವರಿಂದ ಪ್ರಯೋಗಗಳನ್ನು ನಡೆಸಲಾಗುವುದು. ಹಾಗೆಯೇ, ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ, ಅಂತರರಾಷ್ಟ್ರೀಯ ನಾಟಕೋತ್ಸವಗಳನ್ನು ಶಿವಮೊಗ್ಗಕ್ಕೂ ಕರೆತಂದು ಪ್ರದರ್ಶನ ಏರ್ಪಡಿಸುವ ಪ್ರಯತ್ನ ನಡೆಸಲಾಗುವುದು ಎಂದರು.<br /> <br /> ಜಿಲ್ಲೆಯಲ್ಲಿ ನೀನಾಸಂ, ಕುವೆಂಪು ವಿಶ್ವವಿದ್ಯಾಲಯ, ಕುಪ್ಪಳಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ಮತ್ತಿತರ ಸಂಸ್ಥೆಗಳಿದ್ದು, ಅವುಗಳ ಸಲಹೆ-ಸಹಕಾರ ಪಡೆದುಕೊಳ್ಳಲಾಗುವುದು ಎಂದರು.<br /> <br /> ರಂಗಾಯಣ ಕಟ್ಟುವ ಬಗ್ಗೆ ಕಾರಂತರು ಭೋಪಾಲ್ನಲ್ಲಿ ಮಾಡಿದ ಕೆಲಸ ಹಾಗೂ ಚಂಡಿಘಡದಲ್ಲಿರುವ ರಂಗಭೂಮಿ ನಮ್ಮ ಮುಂದಿನ ಆದರ್ಶಗಳು. ಶಿವಮೊಗ್ಗ ರಂಗಾಯಣ ಕಟ್ಟುವ ಬಗ್ಗೆ ಕಲಾವಿದರು, ತಂತ್ರಜ್ಞರು, ನಾಗರಿಕರ ಸಲಹೆ-ಸಹಕಾರಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು ಎಂದರು. <br /> <br /> ರಂಗಾಯಣ ಕಾರ್ಯಾಲಯವನ್ನು ಕನ್ನಡ ಸಂಸ್ಕೃತಿ ಭವನದಲ್ಲಿ ತೆರೆಯಲು ಉದ್ದೇಶಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತದ ಅನುಮತಿ ಬೇಕು. ಸದ್ಯಕ್ಕೆ ಕುವೆಂಪು ರಂಗಮಂದಿರದಲ್ಲಿ ಸ್ಥಳಾವಕಾಶ ಮಾಡಿಕೊಳ್ಳಲಾಗಿದೆ ಎಂದರು.<br /> <br /> ಈಗಿರುವ ಜಿಲ್ಲಾ ಕಾರಾಗೃಹದ 46 ಎಕರೆ ಜಾಗದಲ್ಲಿ 3 ಎಕರೆ ಜಾಗವನ್ನು ರಂಗಾಯಣಕ್ಕೆ ನೀಡಿ ಎನ್ನುವುದು ನಮ್ಮ ಬೇಡಿಕೆ. ಸಲಹಾ ಸಮಿತಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದೆ ಎಂದರು.<br /> <br /> ಸುದ್ದಿಗೋಷ್ಠಿಯಲ್ಲಿ `ನನ್ನ ಕನಸಿನ ಶಿವಮೊಗ್ಗ~ದ ಅಧ್ಯಕ್ಷ ಎನ್. ಗೋಪಿನಾಥ್, ಕಾರ್ಯದರ್ಶಿ ಅ.ನಾ. ವಿಜಯೇಂದ್ರರಾವ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>