<p><strong>ಬೆಂಗಳೂರು</strong>: `ಸ್ಥಾನಮಾನದ ಉದ್ದೇಶ ಇಟ್ಟುಕೊಂಡವರು ಎಂದೂ ಬಿಜೆಪಿ ಕಾರ್ಯಕರ್ತರಾಗಲು ಸಾಧ್ಯ ಇಲ್ಲ. ಯಾರು ವೈಚಾರಿಕವಾಗಿ ಬೆಳೆಯುತ್ತಾರೊ ಅವರು ಮಾತ್ರ ಬಿಜೆಪಿ ಕಾರ್ಯಕರ್ತರಾಗಲು ಸಾಧ್ಯ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳುವುದರ ಮೂಲಕ ಸ್ಥಾನಮಾನಕ್ಕಾಗಿ ಪೈಪೋಟಿ ನಡೆಸುತ್ತಿರುವವರಿಗೆ ಪರೋಕ್ಷ ಎಚ್ಚರಿಕೆ ನೀಡಿದರು.<br /> <br /> ಬಿಜೆಪಿ ನಗರ ಘಟಕದ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.<br /> ಕಾರ್ಯಕಾರಿಣಿ ಉದ್ಘಾಟನೆ ನಂತರ ಸಂಸದ ಅನಂತಕುಮಾರ್ ಮಾತನಾಡಿದರು. `ನಗರದಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರ ಮೂಲಸೌಲಭ್ಯಗಳ ಕೊರತೆ ಇದ್ದು, ಅವುಗಳ ನಿವಾರಣೆಗೆ ಎಲ್ಲರೂ ಕೆಲಸ ಮಾಡಬೇಕು. ನಮ್ಮದೇ ಸರ್ಕಾರ ಇದ್ದಾಗ ವಾರ್ಡ್ನಿಂದ ಜಿಲ್ಲಾ ಘಟಕದವರೆಗೆ ಪ್ರತಿಯೊಬ್ಬ ಕಾರ್ಯಕರ್ತರೂ ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು~ ಎಂದು ಹೇಳಿದರು.<br /> <br /> ಕಾವೇರಿ 4ನೇ ಹಂತದ ಕುಡಿಯುವ ನೀರು ಯೋಜನೆ ಸದ್ಯದಲ್ಲೇ ಕೆಲಸ ಆರಂಭಿಸಲಿದ್ದು, ಇದು ಕೂಡ ಬಿಜೆಪಿಯ ಕೊಡುಗೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಇದಕ್ಕೆ ಒಪ್ಪಿಗೆ ಸಿಕ್ಕಿದ್ದು. `ನಮ್ಮ ಮೆಟ್ರೊ~ ಕೂಡ ವಾಜಪೇಯಿ ಅವರ ಕೊಡುಗೆ. ನಗರಕ್ಕೇ ಪ್ರತ್ಯೇಕ ವಿದ್ಯುತ್ ಸ್ಥಾವರ ಅಗತ್ಯ ಇದ್ದು, ಬಿಡದಿ ಸಮೀಪ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಸ್ಥಾಪನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ವಿಷಯದಲ್ಲಿ ಅಗತ್ಯಬಿದ್ದರೆ ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕು ಎಂದೂ ಸಚಿವ ಅಶೋಕ ಅವರಿಗೆ ಸಲಹೆ ಮಾಡಿದರು.<br /> <br /> ಸಚಿವ ಆರ್.ಅಶೋಕ ಇಡೀ ದಿನ ಕಾರ್ಯಕಾರಿಣಿಯಲ್ಲಿ ಹಾಜರಿದ್ದರು. ಸಂಸದರು, ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಕಾರ್ಯಕಾರಿಣಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಅಶೋಕ ಉತ್ತರ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಸ್ಥಾನಮಾನದ ಉದ್ದೇಶ ಇಟ್ಟುಕೊಂಡವರು ಎಂದೂ ಬಿಜೆಪಿ ಕಾರ್ಯಕರ್ತರಾಗಲು ಸಾಧ್ಯ ಇಲ್ಲ. ಯಾರು ವೈಚಾರಿಕವಾಗಿ ಬೆಳೆಯುತ್ತಾರೊ ಅವರು ಮಾತ್ರ ಬಿಜೆಪಿ ಕಾರ್ಯಕರ್ತರಾಗಲು ಸಾಧ್ಯ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳುವುದರ ಮೂಲಕ ಸ್ಥಾನಮಾನಕ್ಕಾಗಿ ಪೈಪೋಟಿ ನಡೆಸುತ್ತಿರುವವರಿಗೆ ಪರೋಕ್ಷ ಎಚ್ಚರಿಕೆ ನೀಡಿದರು.<br /> <br /> ಬಿಜೆಪಿ ನಗರ ಘಟಕದ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.<br /> ಕಾರ್ಯಕಾರಿಣಿ ಉದ್ಘಾಟನೆ ನಂತರ ಸಂಸದ ಅನಂತಕುಮಾರ್ ಮಾತನಾಡಿದರು. `ನಗರದಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇತರ ಮೂಲಸೌಲಭ್ಯಗಳ ಕೊರತೆ ಇದ್ದು, ಅವುಗಳ ನಿವಾರಣೆಗೆ ಎಲ್ಲರೂ ಕೆಲಸ ಮಾಡಬೇಕು. ನಮ್ಮದೇ ಸರ್ಕಾರ ಇದ್ದಾಗ ವಾರ್ಡ್ನಿಂದ ಜಿಲ್ಲಾ ಘಟಕದವರೆಗೆ ಪ್ರತಿಯೊಬ್ಬ ಕಾರ್ಯಕರ್ತರೂ ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು~ ಎಂದು ಹೇಳಿದರು.<br /> <br /> ಕಾವೇರಿ 4ನೇ ಹಂತದ ಕುಡಿಯುವ ನೀರು ಯೋಜನೆ ಸದ್ಯದಲ್ಲೇ ಕೆಲಸ ಆರಂಭಿಸಲಿದ್ದು, ಇದು ಕೂಡ ಬಿಜೆಪಿಯ ಕೊಡುಗೆ. ವಾಜಪೇಯಿ ಪ್ರಧಾನಿಯಾಗಿದ್ದಾಗ ಇದಕ್ಕೆ ಒಪ್ಪಿಗೆ ಸಿಕ್ಕಿದ್ದು. `ನಮ್ಮ ಮೆಟ್ರೊ~ ಕೂಡ ವಾಜಪೇಯಿ ಅವರ ಕೊಡುಗೆ. ನಗರಕ್ಕೇ ಪ್ರತ್ಯೇಕ ವಿದ್ಯುತ್ ಸ್ಥಾವರ ಅಗತ್ಯ ಇದ್ದು, ಬಿಡದಿ ಸಮೀಪ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಸ್ಥಾಪನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ವಿಷಯದಲ್ಲಿ ಅಗತ್ಯಬಿದ್ದರೆ ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕು ಎಂದೂ ಸಚಿವ ಅಶೋಕ ಅವರಿಗೆ ಸಲಹೆ ಮಾಡಿದರು.<br /> <br /> ಸಚಿವ ಆರ್.ಅಶೋಕ ಇಡೀ ದಿನ ಕಾರ್ಯಕಾರಿಣಿಯಲ್ಲಿ ಹಾಜರಿದ್ದರು. ಸಂಸದರು, ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಕಾರ್ಯಕಾರಿಣಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಅಶೋಕ ಉತ್ತರ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>