<p>ಬೆಂಗಳೂರು: ಸ್ಥಿರಾಸ್ತಿಯ ಬಿ-ಖಾತೆ ನೀಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಯಲಹಂಕ ಕರ ವಸೂಲಿದಾರ ವಿಜೇಂದ್ರ ಮತ್ತು ವೀರೇಶ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.<br /> <br /> ಕೋಗಿಲು ಗ್ರಾಮದಲ್ಲಿ ಆಸ್ತಿ ಹೊಂದಿರುವ ಚಲಪತಿ ಎಂಬುವರು ಬಿ-ಖಾತೆ ನೀಡುವಂತೆ ಕೋರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. <br /> <br /> ಖಾತೆ ನೀಡಲು ರೂ 20 ಸಾವಿರ ಲಂಚ ನೀಡುವಂತೆ ವಿಜೇಂದ್ರ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> <br /> ಮಂಗಳವಾರ ಚಲಪತಿ ಹಣ ನೀಡಲು ಹೋದಾಗ ವೀರೇಶ್ ಬಳಿ ಕೊಡುವಂತೆ ವಿಜೇಂದ್ರ ಸೂಚಿಸಿದ್ದರು. ಅದರಂತೆ ಮಧ್ಯವರ್ತಿ ಲಂಚ ಪಡೆದಿದ್ದರು. <br /> <br /> ಈ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಣ್ಣತಿಮ್ಮಪ್ಪ ಒಡೆಯರ್ ಇಬ್ಬರು ಆರೋಪಿಗಳನ್ನೂ ಬಂಧಿಸಿದರು. ಎಸ್ಪಿ ಪಿ.ಕೆ.ಶಿವಶಂಕರ್ ಮತ್ತು ಡಿವೈಎಸ್ಪಿ ಎಚ್.ಎಸ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸ್ಥಿರಾಸ್ತಿಯ ಬಿ-ಖಾತೆ ನೀಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಯಲಹಂಕ ಕರ ವಸೂಲಿದಾರ ವಿಜೇಂದ್ರ ಮತ್ತು ವೀರೇಶ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.<br /> <br /> ಕೋಗಿಲು ಗ್ರಾಮದಲ್ಲಿ ಆಸ್ತಿ ಹೊಂದಿರುವ ಚಲಪತಿ ಎಂಬುವರು ಬಿ-ಖಾತೆ ನೀಡುವಂತೆ ಕೋರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. <br /> <br /> ಖಾತೆ ನೀಡಲು ರೂ 20 ಸಾವಿರ ಲಂಚ ನೀಡುವಂತೆ ವಿಜೇಂದ್ರ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.<br /> <br /> ಮಂಗಳವಾರ ಚಲಪತಿ ಹಣ ನೀಡಲು ಹೋದಾಗ ವೀರೇಶ್ ಬಳಿ ಕೊಡುವಂತೆ ವಿಜೇಂದ್ರ ಸೂಚಿಸಿದ್ದರು. ಅದರಂತೆ ಮಧ್ಯವರ್ತಿ ಲಂಚ ಪಡೆದಿದ್ದರು. <br /> <br /> ಈ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಣ್ಣತಿಮ್ಮಪ್ಪ ಒಡೆಯರ್ ಇಬ್ಬರು ಆರೋಪಿಗಳನ್ನೂ ಬಂಧಿಸಿದರು. ಎಸ್ಪಿ ಪಿ.ಕೆ.ಶಿವಶಂಕರ್ ಮತ್ತು ಡಿವೈಎಸ್ಪಿ ಎಚ್.ಎಸ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಚರಣೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>