<p><strong>ಬೆಂಗಳೂರು: </strong>ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಖಿಲ ಭಾರತ ಸೇವೆಗಳು (ಐಎಎಸ್, ಐಪಿಎಸ್, ಐಎಫ್ಎಸ್ ಇತ್ಯಾದಿ) ಹಾಗೂ ಕೇಂದ್ರಾಡಳಿತ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ಅಭ್ಯರ್ಥಿಗಳಿಗೆ 2011-12ನೇ ಸಾಲಿನಿಂದ ಜಾರಿಗೆ ಬರುವಂತೆ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಮಂಜೂರಾತಿ ನೀಡಿದೆ.<br /> <br /> 1ರಿಂದ 10ನೇ ತರಗತಿವರೆಗೆ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> </p>.<p><strong>ಎಂಜಿನಿಯರಿಂಗ್ ಕೋರ್ಸ್: ಇಂದು ಕೌನ್ಸೆಲಿಂಗ್</strong></p>.<p><strong>ಪ್ರಜಾವಾಣಿ ವಾರ್ತೆ<br /> ಬೆಂಗಳೂರು: </strong>ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಬುಧವಾರ 45001ರಿಂದ 51000 ರ್ಯಾಂಕ್ವರೆಗಿನ ವಿದ್ಯಾರ್ಥಿಗಳಿಗೆ ಕ್ಯಾಷುವಲ್ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ. ವಿವಿಧ ವಿಷಯಗಳಲ್ಲಿ ಒಟ್ಟು 14,274 ಸೀಟುಗಳು ಪ್ರವೇಶಕ್ಕೆ ಲಭ್ಯವಾಗಲಿವೆ.<br /> <br /> ಸಾಮಾನ್ಯ ವರ್ಗದ ಕೋಟಾದಡಿ 12,366 ಸೀಟುಗಳು ಹಂಚಿಕೆಗೆ ಲಭ್ಯವಿವೆ. ಇದೇ 16ಕ್ಕೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಈ ಬಾರಿಯೂ ಸಾವಿರಾರು ಸೀಟುಗಳು ಉಳಿಯುವ ಸಾಧ್ಯತೆಗಳಿವೆ.<br /> </p>.<p><strong>ಸ್ನಾತಕೋತ್ತರ ಪ್ರವೇಶ: 17ಕ್ಕೆ ತಪಾಸಣೆ</strong></p>.<p><strong>ಬೆಂಗಳೂರು:</strong> ಅಂಗವಿಕಲ ಕೋಟಾದ ಅಡಿ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಕೋರ್ಸ್ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಇದೇ 17ರಂದು ವೈದ್ಯಕೀಯ ತಪಾಸಣೆ ನಡೆಯಲಿದೆ.<br /> <br /> ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಅಂದು ಬೆಳಿಗ್ಗೆ 11 ಕ್ಕೆ ತಪಾಸಣೆ ಆರಂಭವಾಗಲಿದ್ದು ವೈದ್ಯಕೀಯ ಸಮಿತಿ ನೀಡುವ ವರದಿಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಎಂಇ, ಎಂಟೆಕ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಹಅಭ್ಯರ್ಥಿಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಸೀಟು ಆಯ್ಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಖಿಲ ಭಾರತ ಸೇವೆಗಳು (ಐಎಎಸ್, ಐಪಿಎಸ್, ಐಎಫ್ಎಸ್ ಇತ್ಯಾದಿ) ಹಾಗೂ ಕೇಂದ್ರಾಡಳಿತ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ಅಭ್ಯರ್ಥಿಗಳಿಗೆ 2011-12ನೇ ಸಾಲಿನಿಂದ ಜಾರಿಗೆ ಬರುವಂತೆ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಮಂಜೂರಾತಿ ನೀಡಿದೆ.<br /> <br /> 1ರಿಂದ 10ನೇ ತರಗತಿವರೆಗೆ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> </p>.<p><strong>ಎಂಜಿನಿಯರಿಂಗ್ ಕೋರ್ಸ್: ಇಂದು ಕೌನ್ಸೆಲಿಂಗ್</strong></p>.<p><strong>ಪ್ರಜಾವಾಣಿ ವಾರ್ತೆ<br /> ಬೆಂಗಳೂರು: </strong>ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಬುಧವಾರ 45001ರಿಂದ 51000 ರ್ಯಾಂಕ್ವರೆಗಿನ ವಿದ್ಯಾರ್ಥಿಗಳಿಗೆ ಕ್ಯಾಷುವಲ್ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ. ವಿವಿಧ ವಿಷಯಗಳಲ್ಲಿ ಒಟ್ಟು 14,274 ಸೀಟುಗಳು ಪ್ರವೇಶಕ್ಕೆ ಲಭ್ಯವಾಗಲಿವೆ.<br /> <br /> ಸಾಮಾನ್ಯ ವರ್ಗದ ಕೋಟಾದಡಿ 12,366 ಸೀಟುಗಳು ಹಂಚಿಕೆಗೆ ಲಭ್ಯವಿವೆ. ಇದೇ 16ಕ್ಕೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಈ ಬಾರಿಯೂ ಸಾವಿರಾರು ಸೀಟುಗಳು ಉಳಿಯುವ ಸಾಧ್ಯತೆಗಳಿವೆ.<br /> </p>.<p><strong>ಸ್ನಾತಕೋತ್ತರ ಪ್ರವೇಶ: 17ಕ್ಕೆ ತಪಾಸಣೆ</strong></p>.<p><strong>ಬೆಂಗಳೂರು:</strong> ಅಂಗವಿಕಲ ಕೋಟಾದ ಅಡಿ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಕೋರ್ಸ್ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಇದೇ 17ರಂದು ವೈದ್ಯಕೀಯ ತಪಾಸಣೆ ನಡೆಯಲಿದೆ.<br /> <br /> ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಅಂದು ಬೆಳಿಗ್ಗೆ 11 ಕ್ಕೆ ತಪಾಸಣೆ ಆರಂಭವಾಗಲಿದ್ದು ವೈದ್ಯಕೀಯ ಸಮಿತಿ ನೀಡುವ ವರದಿಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಎಂಇ, ಎಂಟೆಕ್ ಕೋರ್ಸ್ಗಳ ಪ್ರವೇಶಕ್ಕೆ ಅರ್ಹಅಭ್ಯರ್ಥಿಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಸೀಟು ಆಯ್ಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>