<p>ಗೌರಿಬಿದನೂರು: ಪಠ್ಯ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾಮನೋಭಾವ ರೂಢಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಮೀನ್ತಾಜ್ ತಿಳಿಸಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಕೋಟೆ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ 50 ಮಂದಿ ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. <br /> <br /> ಪ್ರಬಂಧ ಸ್ಪರ್ಧೆಯಲ್ಲಿ 22 ವಿದ್ಯಾರ್ಥಿಗಳು ಪಾಲ್ಗೊಂಡರು. ಶಿಕ್ಷಣ ಸಂಯೋಜಕ ರಾಮಕೃಷ್ಣಪ್ಪ, ತೀರ್ಪುಗಾರರಾಗಿ ಶಿಕ್ಷಣ ಸಂಯೋಜಕಿ ರಾಜಲಕ್ಷ್ಮೀಬಾಯಿ, ಜಿ.ಸಿ.ರಾಮಚಂದ್ರಯ್ಯ, ಫಾರೂಕ್ ಅಹಮ್ಮದ್, ಲಕ್ಷ್ಮೀನರಸೇಗೌಡ, ಆರ್.ಸುಮಂಗಲಾ, ಪದ್ಮಲತಾ, ಮಂಜುನಾಥ್, ಜಯಕೀರ್ತಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಪಠ್ಯ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಸ್ಪರ್ಧಾಮನೋಭಾವ ರೂಢಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಮೀನ್ತಾಜ್ ತಿಳಿಸಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದ ಕೋಟೆ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಚರ್ಚಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ 50 ಮಂದಿ ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. <br /> <br /> ಪ್ರಬಂಧ ಸ್ಪರ್ಧೆಯಲ್ಲಿ 22 ವಿದ್ಯಾರ್ಥಿಗಳು ಪಾಲ್ಗೊಂಡರು. ಶಿಕ್ಷಣ ಸಂಯೋಜಕ ರಾಮಕೃಷ್ಣಪ್ಪ, ತೀರ್ಪುಗಾರರಾಗಿ ಶಿಕ್ಷಣ ಸಂಯೋಜಕಿ ರಾಜಲಕ್ಷ್ಮೀಬಾಯಿ, ಜಿ.ಸಿ.ರಾಮಚಂದ್ರಯ್ಯ, ಫಾರೂಕ್ ಅಹಮ್ಮದ್, ಲಕ್ಷ್ಮೀನರಸೇಗೌಡ, ಆರ್.ಸುಮಂಗಲಾ, ಪದ್ಮಲತಾ, ಮಂಜುನಾಥ್, ಜಯಕೀರ್ತಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>