<p>ಭಾಲ್ಕಿ: ಇದು ಜ್ಞಾನದ ಸ್ಪರ್ಧಾತ್ಮಕ ಯುಗ. ಇಲ್ಲಿ ಗುಣಮಟ್ಟಕ್ಕೆ ಮಾತ್ರ ಬೆಲೆ. ಹಾಗಾಗಿ ಸ್ಪರ್ಧೆಗಳನ್ನು ಧೈರ್ಯ ಮತ್ತು ಆತ್ಮಬಲದಿಂದ ಎದುರಿಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಹನಮಂತರಾವ ಚವ್ಹಾಣ ನುಡಿದರು. <br /> <br /> ಸರಸ್ವತಿ ವಿದ್ಯಾ ಮಂದಿರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಪಾಲಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಗ್ರಂಥಾಲಯಕ್ಕೆ ಹತ್ತು ಸಾವಿರ ರೂ ದೇಣಿಗೆಯನ್ನು ಇದೇ ಸಂದರ್ಭದಲ್ಲಿ ಚವ್ಹಾಣ ನೀಡಿದರು.<br /> <br /> ನಗರ ಠಾಣೆಯ ಸಿಪಿಐ ಎನ್.ಬಿ. ಮಠಪತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಬೇಕು. ಸತತ ಅಧ್ಯಯನದ ಕಡೆಗೆ ಗಮನವನ್ನು ಕೇಂದ್ರೀಕರಿಸಬೇಕು. ಉತ್ತಮ ಹವ್ಯಾಸಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಪ್ರೊ. ನರವೀರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.<br /> <br /> ಹುಮನಾಬಾದ ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಈಈ ಸಿ.ಎಸ್. ಪಾಟೀಲ, ಪುರಸಭೆ ಸದಸ್ಯ ಬಸವರಾಜ ಬೋರಡೆ, ಸಂಸ್ಥೆಯ ಅಧ್ಯಕ್ಷ ಅವಿನಾಶ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ಅಂಕುಶ ಢೋಲೆ ವೇದಿಕೆಯಲ್ಲಿ ಇದ್ದರು. ಪ್ರಾಚಾರ್ಯ ಶಿವಕುಮಾರ ಕಾಂಜೋಳಗೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಇದು ಜ್ಞಾನದ ಸ್ಪರ್ಧಾತ್ಮಕ ಯುಗ. ಇಲ್ಲಿ ಗುಣಮಟ್ಟಕ್ಕೆ ಮಾತ್ರ ಬೆಲೆ. ಹಾಗಾಗಿ ಸ್ಪರ್ಧೆಗಳನ್ನು ಧೈರ್ಯ ಮತ್ತು ಆತ್ಮಬಲದಿಂದ ಎದುರಿಸಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಹನಮಂತರಾವ ಚವ್ಹಾಣ ನುಡಿದರು. <br /> <br /> ಸರಸ್ವತಿ ವಿದ್ಯಾ ಮಂದಿರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಪಾಲಕರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಗ್ರಂಥಾಲಯಕ್ಕೆ ಹತ್ತು ಸಾವಿರ ರೂ ದೇಣಿಗೆಯನ್ನು ಇದೇ ಸಂದರ್ಭದಲ್ಲಿ ಚವ್ಹಾಣ ನೀಡಿದರು.<br /> <br /> ನಗರ ಠಾಣೆಯ ಸಿಪಿಐ ಎನ್.ಬಿ. ಮಠಪತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಬೇಕು. ಸತತ ಅಧ್ಯಯನದ ಕಡೆಗೆ ಗಮನವನ್ನು ಕೇಂದ್ರೀಕರಿಸಬೇಕು. ಉತ್ತಮ ಹವ್ಯಾಸಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಪ್ರೊ. ನರವೀರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.<br /> <br /> ಹುಮನಾಬಾದ ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಈಈ ಸಿ.ಎಸ್. ಪಾಟೀಲ, ಪುರಸಭೆ ಸದಸ್ಯ ಬಸವರಾಜ ಬೋರಡೆ, ಸಂಸ್ಥೆಯ ಅಧ್ಯಕ್ಷ ಅವಿನಾಶ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ಅಂಕುಶ ಢೋಲೆ ವೇದಿಕೆಯಲ್ಲಿ ಇದ್ದರು. ಪ್ರಾಚಾರ್ಯ ಶಿವಕುಮಾರ ಕಾಂಜೋಳಗೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>