<p><strong>ಮುಂಬೈ (ಪಿಟಿಐ):</strong> ಐಪಿಎಲ್ನಲ್ಲಿ ನಡೆದಿದೆ ಎನ್ನಲಾದ ಸ್ಪಾಟ್ ಫಿಕ್ಸಿಂಗ್ಗೆ ಸಂಬಂಧಿಸಿದ ಆರೋಪದ ಬಗ್ಗೆ ತನಿಖೆ ನಡೆಸಲಾಗಿರುವ ವರದಿಯನ್ನು ಬಿಸಿಸಿಐ ಶಿಸ್ತು ಸಮಿತಿಗೆ ಒಪ್ಪಿಸಲಾಗಿದೆ ಎಂದು ಲೀಗ್ನ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.<br /> <br /> `ಟಿವಿ ಚಾನೆಲ್ ನಡೆಸಿದ ಮಾರುವೇಷದ ಕಾರ್ಯಾಚರಣೆಯ ಸಂಬಂಧ ತನಿಖೆ ನಡೆಸಿದ ವಿಚಾರಣಾ ಆಯೋಗದ ಮುಖ್ಯಸ್ಥ ರವಿ ಸವಾನಿ ತಮ್ಮ ವರದಿಯನ್ನು ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ಗೆ ನೀಡಿದ್ದಾರೆ. ಅದನ್ನು ಈಗ ಮಂಡಳಿಯ ಶಿಸ್ತು ಸಮಿತಿಗೆ ಒಪ್ಪಿಸಲಾಗಿದೆ~ ಎಂದು ಅವರು ವಿವರಿಸಿದ್ದಾರೆ.<br /> <br /> ಮೂರು ಸದಸ್ಯರ ಶಿಸ್ತು ಸಮಿತಿಯಲ್ಲಿ ಶ್ರೀನಿವಾಸನ್, ಮಂಡಳಿಯ ಉಪಾಧ್ಯಕ್ಷರಾದ ಅರುಣ್ ಜೇಟ್ಲಿ ಹಾಗೂ ನಿರಂಜನ್ ಶಾ ಇದ್ದಾರೆ. <br /> <br /> ಮಾರುವೇಷದ ಕಾರ್ಯಾಚರಣೆ ನಡೆಸಿದ್ದ `ಇಂಡಿಯಾ ಟಿ.ವಿ~ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಐಪಿಎಲ್ನಲ್ಲಿ ಮೋಸದಾಟ ನಡೆಯುತ್ತಿದೆ ಎಂದು ಹೇಳಿಕೊಂಡಿತ್ತು. ಅದಕ್ಕೆ ಸಮರ್ಪಕವಾದ ದಾಖಲೆಗಳನ್ನು ನೀಡಿತ್ತು.<br /> <br /> ಈ ಕಾರ್ಯಾಚರಣೆ ಬಳಿಕ ಡೆಕ್ಕನ್ ಚಾರ್ಜರ್ಸ್ನ ಟಿ.ಪಿ. ಸುಧೀಂದ್ರ, ಪುಣೆ ವಾರಿಯರ್ಸ್ನ ಮೋನಿಷ್ ಮಿಶ್ರಾ, ಕಿಂಗ್ಸ್ ಇಲೆವೆನ್ ಪಂಜಾಬ್ನ ಶಲಭ್ ಶ್ರೀವಾಸ್ತವ, ಅಮಿತ್ ಯಾದವ್ ಹಾಗೂ ಅಭಿನವ್ ಬಾಲಿ ಅವರನ್ನು ಬಿಸಿಸಿಐ ಅಮಾನತುಗೊಳಿಸಿತ್ತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಐಪಿಎಲ್ನಲ್ಲಿ ನಡೆದಿದೆ ಎನ್ನಲಾದ ಸ್ಪಾಟ್ ಫಿಕ್ಸಿಂಗ್ಗೆ ಸಂಬಂಧಿಸಿದ ಆರೋಪದ ಬಗ್ಗೆ ತನಿಖೆ ನಡೆಸಲಾಗಿರುವ ವರದಿಯನ್ನು ಬಿಸಿಸಿಐ ಶಿಸ್ತು ಸಮಿತಿಗೆ ಒಪ್ಪಿಸಲಾಗಿದೆ ಎಂದು ಲೀಗ್ನ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.<br /> <br /> `ಟಿವಿ ಚಾನೆಲ್ ನಡೆಸಿದ ಮಾರುವೇಷದ ಕಾರ್ಯಾಚರಣೆಯ ಸಂಬಂಧ ತನಿಖೆ ನಡೆಸಿದ ವಿಚಾರಣಾ ಆಯೋಗದ ಮುಖ್ಯಸ್ಥ ರವಿ ಸವಾನಿ ತಮ್ಮ ವರದಿಯನ್ನು ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ಗೆ ನೀಡಿದ್ದಾರೆ. ಅದನ್ನು ಈಗ ಮಂಡಳಿಯ ಶಿಸ್ತು ಸಮಿತಿಗೆ ಒಪ್ಪಿಸಲಾಗಿದೆ~ ಎಂದು ಅವರು ವಿವರಿಸಿದ್ದಾರೆ.<br /> <br /> ಮೂರು ಸದಸ್ಯರ ಶಿಸ್ತು ಸಮಿತಿಯಲ್ಲಿ ಶ್ರೀನಿವಾಸನ್, ಮಂಡಳಿಯ ಉಪಾಧ್ಯಕ್ಷರಾದ ಅರುಣ್ ಜೇಟ್ಲಿ ಹಾಗೂ ನಿರಂಜನ್ ಶಾ ಇದ್ದಾರೆ. <br /> <br /> ಮಾರುವೇಷದ ಕಾರ್ಯಾಚರಣೆ ನಡೆಸಿದ್ದ `ಇಂಡಿಯಾ ಟಿ.ವಿ~ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಐಪಿಎಲ್ನಲ್ಲಿ ಮೋಸದಾಟ ನಡೆಯುತ್ತಿದೆ ಎಂದು ಹೇಳಿಕೊಂಡಿತ್ತು. ಅದಕ್ಕೆ ಸಮರ್ಪಕವಾದ ದಾಖಲೆಗಳನ್ನು ನೀಡಿತ್ತು.<br /> <br /> ಈ ಕಾರ್ಯಾಚರಣೆ ಬಳಿಕ ಡೆಕ್ಕನ್ ಚಾರ್ಜರ್ಸ್ನ ಟಿ.ಪಿ. ಸುಧೀಂದ್ರ, ಪುಣೆ ವಾರಿಯರ್ಸ್ನ ಮೋನಿಷ್ ಮಿಶ್ರಾ, ಕಿಂಗ್ಸ್ ಇಲೆವೆನ್ ಪಂಜಾಬ್ನ ಶಲಭ್ ಶ್ರೀವಾಸ್ತವ, ಅಮಿತ್ ಯಾದವ್ ಹಾಗೂ ಅಭಿನವ್ ಬಾಲಿ ಅವರನ್ನು ಬಿಸಿಸಿಐ ಅಮಾನತುಗೊಳಿಸಿತ್ತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>