<p><strong>ರಾಯಪುರ (ಐಎಎನ್ಎಸ್):</strong> ನಕ್ಸಲೀಯರ ಪ್ರಭಾವವಿರುವ ಛತ್ತೀಸ್ಗಡದ ಬಸ್ತಾರ್ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. <br /> <br /> ಅರಣ್ಯ ಪ್ರದೇಶದ ಮೂಲಕ ಹೊರಟಿದ್ದ ಶಾಸಕರ ವಾಹನ ಮತ್ತು ಬೆಂಗಾವಲು ಪಡೆಯ ವಾಹನಗಳನ್ನು ನಕ್ಸಲೀಯರು ನೆಲಬಾಂಬ್ ಸ್ಫೋಟಿಸಿ ಉಡಾಯಿಸಿದರು. <br /> <br /> ಪಕ್ಷದ ಇಬ್ಬರು ಹಿರಿಯ ಕಾರ್ಯಕರ್ತರು ಮತ್ತು ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರು. ವಿಜಾಪುರ ಶಾಸಕ ಮಹೇಶ್ ಗಗ್ಡಾ, ಜಿಲ್ಲಾಧಿಕಾರಿ ರಜತ್ ಕುಮಾರ್ ಅವರು ಯಾವುದೇ ಅಪಾಯವಿಲ್ಲದೇ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ (ಐಎಎನ್ಎಸ್):</strong> ನಕ್ಸಲೀಯರ ಪ್ರಭಾವವಿರುವ ಛತ್ತೀಸ್ಗಡದ ಬಸ್ತಾರ್ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. <br /> <br /> ಅರಣ್ಯ ಪ್ರದೇಶದ ಮೂಲಕ ಹೊರಟಿದ್ದ ಶಾಸಕರ ವಾಹನ ಮತ್ತು ಬೆಂಗಾವಲು ಪಡೆಯ ವಾಹನಗಳನ್ನು ನಕ್ಸಲೀಯರು ನೆಲಬಾಂಬ್ ಸ್ಫೋಟಿಸಿ ಉಡಾಯಿಸಿದರು. <br /> <br /> ಪಕ್ಷದ ಇಬ್ಬರು ಹಿರಿಯ ಕಾರ್ಯಕರ್ತರು ಮತ್ತು ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರು. ವಿಜಾಪುರ ಶಾಸಕ ಮಹೇಶ್ ಗಗ್ಡಾ, ಜಿಲ್ಲಾಧಿಕಾರಿ ರಜತ್ ಕುಮಾರ್ ಅವರು ಯಾವುದೇ ಅಪಾಯವಿಲ್ಲದೇ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>